Andolana originals

ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಓದು ಕರ್ನಾಟಕ ಕಾರ್ಯಕ್ರಮ

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ

ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಉತ್ತಮ ಗೊಳಿಸಲು ‘ಓದು ಕರ್ನಾಟಕ’ ಪರಿಹಾರ ಬೋಧನೆ ಕಾರ್ಯಕ್ರಮವನ್ನು ಕೆ.ಆರ್ .ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆಸಲಾಗುತ್ತಿದೆ.

ರಾಜ್ಯ ಸರ್ಕಾರವು ಕಲಿಕೆಯಲ್ಲಿ ಹಿಂದೆ ಬಿದ್ದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ತರಬೇತಿ ನೀಡಿ ಕಲಿಕಾ ಅಂತರ ಸರಿದೂಗಿ ಸುವುದು ಇದರ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ೧೦೩ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ೧೧೧ ಹಿರಿಯ ಪ್ರಾಥಮಿಕಮ ಶಾಲೆಗಳಲ್ಲಿ ಓದು ಕರ್ನಾಟಕದ ಕಲಿಕೆಯನ್ನು ೧ರಿಂದ ೫ನೇ ತರಗತಿ ಮಕ್ಕಳಿಗೆ ಕಲಿಕಾ ಸಾಮರ್ಥ್ಯದ ಅನುಗುಣವಾಗಿ ಕಲಿಕಾ ಬೋಧನೆ ಮಾಡಲಾಗುತ್ತಿದೆ.

ಓದು ಕರ್ನಾಟಕದ ಬಗ್ಗೆ ಕೆ.ಆರ್.ನಗರ ತಾಲ್ಲೂಕಿನ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ ತ ಮುಖ್ಯಶಿಕ್ಷಕ ಬ್ಯಾಡರಹಳ್ಳಿ ಭಾಸ್ಕರ್ ಮಕ್ಕಳಿಗೆ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಮೂಡಿಸುವ ಉದ್ದೇಶವನ್ನು ಹೊಂದಿ ಅಚ್ಚುಕಟ್ಟಾಗಿ ಬೋಧನೆ ಮಾಡುತ್ತಾ ಬಂದಿದ್ದಾರೆ.

ಕಲಿಕೆಯ ಪಠ್ಯದ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಸರಳ ಕನ್ನಡ ಸಾಮಗ್ರಿಯು ವರ್ಣಮಾಲೆ, ಕಾಗುಣಿತ, ಒತ್ತಕ್ಷರ, ಪದ, ವಾಕ್ಯ ರಚನೆ, ಕಥೆ ಓದುವಿಕೆ ವಿಭಾಗಗಳನ್ನು ಒಳಗೊಂಡಿದೆ. ಕಲಿಕಾ ಮಟ್ಟ ಗುರುತಿಸಿ ಬೋಧನೆ, ಪ್ರತ್ಯೇಕ ವಿದ್ಯಾರ್ಥಿಗಳ ಗುಂಪು ರಚಿಸಿ ಬೋಧನೆ ನಡೆಯಲಿದೆ. ಅಂಕಿ ಪರಿಚಯ, ಗಣಿತದ ಮೂಲ ಕ್ರಿಯೆಗಳು (ಸಂಕಲನ, ವ್ಯವಕಲನ, ಗುಣಕಾರ, ಭಾಗಾಕಾರ), ಏರಿಕೆ ಮತ್ತು ಇಳಿಕೆ ಪದ್ಧತಿ ಮೊದಲಾದ ಘಟಕಗಳು ಸರಳ ಗಣಿತ ಸಾಮಗ್ರಿಯಲ್ಲಿವೆ. ವಿದ್ಯಾರ್ಥಿಗಳಿಗೆ ಗಣಿತದ ಮೂಲಾಂಶಗಳನ್ನು ಹಂತಹಂತವಾಗಿ ಪರಿಚಯಿಸುವ ವಿಧಾನಗಳು ಇವೆ ಎಂದು ತಿಳಿಸಿದರು.

” ಕಲಿಕೆಯಲ್ಲಿ ಹಿಂದೆ ಬಿದ್ದಿರುವವಿದ್ಯಾರ್ಥಿಗಳಿಗೆ  ವಿಷಯ ಮನದಟ್ಟು ಮಾಡಿಸಿ, ಕಲಿಕಾ ಅಂತರ ನಿವಾರಿಸಿ ಓದಿನೆಡೆಗೆ ಪ್ರೋತ್ಸಾಹಿಸುವುದಕ್ಕಾಗಿಯೇ ಓದು ಕರ್ನಾಟಕ ಕಾರ್ಯಕ್ರಮ ರೂಪಿಸಲಾಗಿದೆ.ಮೊದಲ ಹಂತದಲ್ಲಿ ಸಿಆರ್‌ಪಿಗಳಿಗೆ ಈ ಪರಿಹಾರ ಬೋಧನೆ ಕ್ರಮ ತಿಳಿಸಲಾಗಿದ್ದು, ಅವರು ಶಾಲೆಗಳ ಶಿಕ್ಷಕರಿಗೆ ಕಲಿಸಿಕೊಡುತ್ತಾರೆ. ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡುತ್ತಾರೆ.”

-ಆರ್.ಕೃಷ್ಣಪ್ಪ, ಬಿಇಒ

 

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

15 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

15 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

16 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

17 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

22 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

22 hours ago