ನಂಜನಗೂಡು: ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯವರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಸುದ್ದಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೇಬೂರು ಬಳಿಯ ಆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ನಾಲೆಯ ಪಥದ ಬದಲಾವಣೆ ಕುರಿತಂತೆ ಪರಿಶೀಲನೆಗೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆ ವಿಭಾಗದ ಅಧಿಕಾರಿ (ಇಇ) ಮಧುಸೂದನ ಅವರಿಗೆ ಗ್ರಾಮಸ್ಥರು ಈ ಕುರಿತು ಸಮಗ್ರ ಮಾಹಿತಿ ನೀಡಿ, ಈ ಜಮೀನಿನಲ್ಲಿ ನಾಲೆ ನಿರ್ಮಿಸಲು ಸರ್ಕಾರ ೧೯೭೩ರಲ್ಲೇ ೫ ಗುಂಟೆ ಜಮೀನು ವಶಪಡಿಸಿಕೊಂಡು ಜಮೀನಿನ ಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು ಎಂಬ ಅಂಶವನ್ನು ಗಮನಕ್ಕೆ ತಂದರು. ಪರಿಹಾರ ನೀಡಿದ ಮೇಲೆ ಜಾಗ ಸರ್ಕಾರದ್ದಲ್ಲವೇ? ಪರಿಹಾರ ಪಡೆದುಕೊಂಡ ಮಾಲೀಕರಿಗೆ ಆ ಜಾಗದ ಹಕ್ಕು ಎಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀರು ಹರಿಯುವ ಹಳ್ಳದ ಪಥ ಬದಲಾವಣೆ ಮಾಡಲಾಗುತ್ತಿದೆಯೇ ಹೊರತು ನಾಲೆಯನ್ನು ಅಲ್ಲ ಎಂದು ನೂತನ ಬಡಾವಣೆಯ ಮಾಲೀಕರು ಅಧಿಕಾರಿಗಳ ಮುಂದೆ ಪ್ರತಿಪಾದಿಸಿದಾಗ, ತಕ್ಷಣ ಕಾಮಗಾರಿ ನಿಲ್ಲಿಸಿ, ಸೂಕ್ತವಾದ ದಾಖಲೆ ತನ್ನಿ ಎಂದು ಮಧುಸೂದನ ಸೂಚಿಸಿದರು. ಅಲ್ಲದೆ, ಈ ಜಾಗದ ಕುರಿತಂತೆ ದಾಖಲೆಗಳಿಗಾಗಿ ಕಂದಾಯ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಕೆಲವು ತಿಂಗಳ ಹಿಂದೆ ಕಬಿನಿ ನಾಲಾ ವ್ಯಾಪ್ತಿಯ ೬ ಕೋಟಿ ರೂ. ಮೊತ್ತದ ನಾಲೆಯ ಮಣ್ಣು ರೆಸಾರ್ಟ್ಗೆ ಅಕ್ರಮವಾಗಿ ಸಾಗಾಣಿಕೆಯಾದ ಪ್ರಕರಣ ಏನಾಯಿತು? ಎಂದು ಮಧುಸೂದನ್ ಅವರನ್ನು ಪ್ರಶ್ನಿಸಿದಾಗ, ಆಗ ನಾನಿರಲಿಲ್ಲ, ನಾನು ಹೊಸದಾಗಿ ಬಂದಿದ್ದು, ನಾಳೆಯೇ ಆ ಕುರಿತು ಪರಿಶೀಲಿಸುತ್ತೇನೆ ಎಂದು ತಿಳಿಸಿದರು.
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…
ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…
ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…
ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…
ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…