Andolana originals

ನಾಲೆಯ ಪಥ ಬದಲು ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ನಂಜನಗೂಡು: ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯವರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಸುದ್ದಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೇಬೂರು ಬಳಿಯ ಆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ನಾಲೆಯ ಪಥದ ಬದಲಾವಣೆ ಕುರಿತಂತೆ ಪರಿಶೀಲನೆಗೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆ ವಿಭಾಗದ ಅಧಿಕಾರಿ (ಇಇ) ಮಧುಸೂದನ ಅವರಿಗೆ ಗ್ರಾಮಸ್ಥರು ಈ ಕುರಿತು ಸಮಗ್ರ ಮಾಹಿತಿ ನೀಡಿ, ಈ ಜಮೀನಿನಲ್ಲಿ ನಾಲೆ ನಿರ್ಮಿಸಲು ಸರ್ಕಾರ ೧೯೭೩ರಲ್ಲೇ ೫ ಗುಂಟೆ ಜಮೀನು ವಶಪಡಿಸಿಕೊಂಡು ಜಮೀನಿನ ಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು ಎಂಬ ಅಂಶವನ್ನು ಗಮನಕ್ಕೆ ತಂದರು. ಪರಿಹಾರ ನೀಡಿದ ಮೇಲೆ ಜಾಗ ಸರ್ಕಾರದ್ದಲ್ಲವೇ? ಪರಿಹಾರ ಪಡೆದುಕೊಂಡ ಮಾಲೀಕರಿಗೆ ಆ ಜಾಗದ ಹಕ್ಕು ಎಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀರು ಹರಿಯುವ ಹಳ್ಳದ ಪಥ ಬದಲಾವಣೆ ಮಾಡಲಾಗುತ್ತಿದೆಯೇ ಹೊರತು ನಾಲೆಯನ್ನು ಅಲ್ಲ ಎಂದು ನೂತನ ಬಡಾವಣೆಯ ಮಾಲೀಕರು ಅಧಿಕಾರಿಗಳ ಮುಂದೆ ಪ್ರತಿಪಾದಿಸಿದಾಗ, ತಕ್ಷಣ ಕಾಮಗಾರಿ ನಿಲ್ಲಿಸಿ, ಸೂಕ್ತವಾದ ದಾಖಲೆ ತನ್ನಿ ಎಂದು ಮಧುಸೂದನ ಸೂಚಿಸಿದರು. ಅಲ್ಲದೆ, ಈ ಜಾಗದ ಕುರಿತಂತೆ ದಾಖಲೆಗಳಿಗಾಗಿ ಕಂದಾಯ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಕೆಲವು ತಿಂಗಳ ಹಿಂದೆ ಕಬಿನಿ ನಾಲಾ ವ್ಯಾಪ್ತಿಯ ೬ ಕೋಟಿ ರೂ. ಮೊತ್ತದ ನಾಲೆಯ ಮಣ್ಣು ರೆಸಾರ್ಟ್‌ಗೆ ಅಕ್ರಮವಾಗಿ ಸಾಗಾಣಿಕೆಯಾದ ಪ್ರಕರಣ ಏನಾಯಿತು? ಎಂದು ಮಧುಸೂದನ್ ಅವರನ್ನು ಪ್ರಶ್ನಿಸಿದಾಗ, ಆಗ ನಾನಿರಲಿಲ್ಲ, ನಾನು ಹೊಸದಾಗಿ ಬಂದಿದ್ದು, ನಾಳೆಯೇ ಆ ಕುರಿತು ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

44 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago