ನಂಜನಗೂಡು: ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯವರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಸುದ್ದಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೇಬೂರು ಬಳಿಯ ಆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ನಾಲೆಯ ಪಥದ ಬದಲಾವಣೆ ಕುರಿತಂತೆ ಪರಿಶೀಲನೆಗೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆ ವಿಭಾಗದ ಅಧಿಕಾರಿ (ಇಇ) ಮಧುಸೂದನ ಅವರಿಗೆ ಗ್ರಾಮಸ್ಥರು ಈ ಕುರಿತು ಸಮಗ್ರ ಮಾಹಿತಿ ನೀಡಿ, ಈ ಜಮೀನಿನಲ್ಲಿ ನಾಲೆ ನಿರ್ಮಿಸಲು ಸರ್ಕಾರ ೧೯೭೩ರಲ್ಲೇ ೫ ಗುಂಟೆ ಜಮೀನು ವಶಪಡಿಸಿಕೊಂಡು ಜಮೀನಿನ ಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು ಎಂಬ ಅಂಶವನ್ನು ಗಮನಕ್ಕೆ ತಂದರು. ಪರಿಹಾರ ನೀಡಿದ ಮೇಲೆ ಜಾಗ ಸರ್ಕಾರದ್ದಲ್ಲವೇ? ಪರಿಹಾರ ಪಡೆದುಕೊಂಡ ಮಾಲೀಕರಿಗೆ ಆ ಜಾಗದ ಹಕ್ಕು ಎಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀರು ಹರಿಯುವ ಹಳ್ಳದ ಪಥ ಬದಲಾವಣೆ ಮಾಡಲಾಗುತ್ತಿದೆಯೇ ಹೊರತು ನಾಲೆಯನ್ನು ಅಲ್ಲ ಎಂದು ನೂತನ ಬಡಾವಣೆಯ ಮಾಲೀಕರು ಅಧಿಕಾರಿಗಳ ಮುಂದೆ ಪ್ರತಿಪಾದಿಸಿದಾಗ, ತಕ್ಷಣ ಕಾಮಗಾರಿ ನಿಲ್ಲಿಸಿ, ಸೂಕ್ತವಾದ ದಾಖಲೆ ತನ್ನಿ ಎಂದು ಮಧುಸೂದನ ಸೂಚಿಸಿದರು. ಅಲ್ಲದೆ, ಈ ಜಾಗದ ಕುರಿತಂತೆ ದಾಖಲೆಗಳಿಗಾಗಿ ಕಂದಾಯ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಕೆಲವು ತಿಂಗಳ ಹಿಂದೆ ಕಬಿನಿ ನಾಲಾ ವ್ಯಾಪ್ತಿಯ ೬ ಕೋಟಿ ರೂ. ಮೊತ್ತದ ನಾಲೆಯ ಮಣ್ಣು ರೆಸಾರ್ಟ್ಗೆ ಅಕ್ರಮವಾಗಿ ಸಾಗಾಣಿಕೆಯಾದ ಪ್ರಕರಣ ಏನಾಯಿತು? ಎಂದು ಮಧುಸೂದನ್ ಅವರನ್ನು ಪ್ರಶ್ನಿಸಿದಾಗ, ಆಗ ನಾನಿರಲಿಲ್ಲ, ನಾನು ಹೊಸದಾಗಿ ಬಂದಿದ್ದು, ನಾಳೆಯೇ ಆ ಕುರಿತು ಪರಿಶೀಲಿಸುತ್ತೇನೆ ಎಂದು ತಿಳಿಸಿದರು.
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು