Andolana originals

ನಾಲೆಯ ಪಥ ಬದಲು ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ನಂಜನಗೂಡು: ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯವರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಸುದ್ದಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದೇಬೂರು ಬಳಿಯ ಆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ನಾಲೆಯ ಪಥದ ಬದಲಾವಣೆ ಕುರಿತಂತೆ ಪರಿಶೀಲನೆಗೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆ ವಿಭಾಗದ ಅಧಿಕಾರಿ (ಇಇ) ಮಧುಸೂದನ ಅವರಿಗೆ ಗ್ರಾಮಸ್ಥರು ಈ ಕುರಿತು ಸಮಗ್ರ ಮಾಹಿತಿ ನೀಡಿ, ಈ ಜಮೀನಿನಲ್ಲಿ ನಾಲೆ ನಿರ್ಮಿಸಲು ಸರ್ಕಾರ ೧೯೭೩ರಲ್ಲೇ ೫ ಗುಂಟೆ ಜಮೀನು ವಶಪಡಿಸಿಕೊಂಡು ಜಮೀನಿನ ಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು ಎಂಬ ಅಂಶವನ್ನು ಗಮನಕ್ಕೆ ತಂದರು. ಪರಿಹಾರ ನೀಡಿದ ಮೇಲೆ ಜಾಗ ಸರ್ಕಾರದ್ದಲ್ಲವೇ? ಪರಿಹಾರ ಪಡೆದುಕೊಂಡ ಮಾಲೀಕರಿಗೆ ಆ ಜಾಗದ ಹಕ್ಕು ಎಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀರು ಹರಿಯುವ ಹಳ್ಳದ ಪಥ ಬದಲಾವಣೆ ಮಾಡಲಾಗುತ್ತಿದೆಯೇ ಹೊರತು ನಾಲೆಯನ್ನು ಅಲ್ಲ ಎಂದು ನೂತನ ಬಡಾವಣೆಯ ಮಾಲೀಕರು ಅಧಿಕಾರಿಗಳ ಮುಂದೆ ಪ್ರತಿಪಾದಿಸಿದಾಗ, ತಕ್ಷಣ ಕಾಮಗಾರಿ ನಿಲ್ಲಿಸಿ, ಸೂಕ್ತವಾದ ದಾಖಲೆ ತನ್ನಿ ಎಂದು ಮಧುಸೂದನ ಸೂಚಿಸಿದರು. ಅಲ್ಲದೆ, ಈ ಜಾಗದ ಕುರಿತಂತೆ ದಾಖಲೆಗಳಿಗಾಗಿ ಕಂದಾಯ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಕೆಲವು ತಿಂಗಳ ಹಿಂದೆ ಕಬಿನಿ ನಾಲಾ ವ್ಯಾಪ್ತಿಯ ೬ ಕೋಟಿ ರೂ. ಮೊತ್ತದ ನಾಲೆಯ ಮಣ್ಣು ರೆಸಾರ್ಟ್‌ಗೆ ಅಕ್ರಮವಾಗಿ ಸಾಗಾಣಿಕೆಯಾದ ಪ್ರಕರಣ ಏನಾಯಿತು? ಎಂದು ಮಧುಸೂದನ್ ಅವರನ್ನು ಪ್ರಶ್ನಿಸಿದಾಗ, ಆಗ ನಾನಿರಲಿಲ್ಲ, ನಾನು ಹೊಸದಾಗಿ ಬಂದಿದ್ದು, ನಾಳೆಯೇ ಆ ಕುರಿತು ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

8 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

9 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

11 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

12 hours ago