Andolana originals

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ ವಹಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು, ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾದ ಮಾಹಿತಿ ತಿಳಿದ ಅಽಕಾರಿಗಳು ಸಂಜೆ ವೇಳೆಯಲ್ಲಿ ಕೆರೆಗೆ ನೀರು ಬಿಟ್ಟಿರುವ ಘಟನೆ ನಡೆದಿದೆ.

ಈ ಭಾಗದಲ್ಲಿ ಮಳೆ ಪ್ರಮಾಣ ಬಹಳ ಕಡಿಮೆ ಇರುವುದರಿಂದ ಕೆರೆಕಟ್ಟೆಗಳೆಲ್ಲ ಒಣಗಿವೆ. ಜಾನುವಾರು, ರೈತರು, ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಆದರೆ, ಈ ಭಾಗದ ಮುಖಂಡರು, ರೈತರು ನೀರಿಗಾಗಿ ಸಂಬಂಧಪಟ್ಟ ಅಽಕಾರಿಗಳ ಬಳಿ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಭಾಗದ ರೈತ ಮುಖಂಡ ಶಿಂಡೇನಹಳ್ಳಿ ಯತೀಶ್ ಕುಮಾರ್ ನೇತೃತ್ವದಲ್ಲಿ ಡಿ. ೧೪ರಂದು ಭಾನುವಾರ ಶಿಂಡೇನಹಳ್ಳಿ ಗೇಟ್ ಬಳಿ ರೈತರು, ಸಾರ್ವಜನಿಕರು ಅಽಕಾರಿಗಳ ನಡೆ ಖಂಡಿಸಿ ಹಾಗೂ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಶನಿವಾರ ಸಂಜೆಯೇ ಈ ಭಾಗದ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಅಽಕಾರಿಗಳು ಮುಂದಾಗಿದ್ದಾರೆ. ಯತೀಶ್ ಕುಮಾರ್ ಮಾತನಾಡಿ, ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿ ೧೭ ಕೆರೆಗಳಿದ್ದು, ಅದರಲ್ಲಿ ೧೧ ಕೆರೆಗಳಿಗೆ ಮಾತ್ರ ನೀರು ತುಂಬಿಸಿದ್ದು, ಉಳಿದ ೬ ಕೆರೆಗಳಿಗೆ ನೀರು ತುಂಬಿಸಲು ಮೀನ-ಮೇಷ ಎಣಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:-ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಕೆರೆಗಳಲ್ಲಿ ನೀರಿಲ್ಲದೆ ದನ ಕರುಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಬೋರ್ ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಸೆಪ್ಟೆಂಬರ್, ಅಕ್ಟೋ ಬರ್, ನವೆಂಬರ್, ಡಿಸೆಂಬರ್ ಸೇರಿ ಒಟ್ಟು ೪ ತಿಂಗಳ ಕಾಲ ಕೆರೆಗೆ ನೀರಾವರಿ ಇಲಾಖೆ ಅಧೀಕಾರಿಗಳು ಕಬಿನಿ ಏತನೀರಾವರಿ ಮೂಲಕ ಇಬ್ಜಾಲ ದಿಂದ ನೀರು ಬಿಡಬೇಕೆಂಬ ನಿಯಮವಿದೆ. ಆದರೆ, ಡಿಸೆಂಬರ್ ಮುಗಿಯುತ್ತಾ ಬಂದರೂ ಕೆರೆಗೆ ನೀರು ತುಂಬಿಸಿಲ್ಲ ಎಂದರು. ಸರ್ಕಾರ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ಕೆರೆಗಳ ಬಳಿ ೬೮ ಕೋಟಿ ರೂ. ವೆಚ್ಚದ ಪಂಪ್‌ಹೌಸ್ ನಿರ್ಮಿಸಿದ್ದು, ಅಧಿಕಾರಿಗಳು ಬೇಜವಾ ಬ್ದಾರಿತನ ತೋರಿಸುತ್ತಿದ್ದಾರೆ ಎಂದರು.

ಶಿಂಡೇನಹಳ್ಳಿ ಗ್ರಾಮದ ಬಳಿ ಕೆರೆಗಳಿಗೆ ಸಂಪೂರ್ಣ ನೀರು ತುಂಬಿಸಲು ಆಗ್ರಹಿಸಿ ಭಾನುವಾರ ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಈ ವಿಚಾರ ತಿಳಿದು ಕೆರೆಗೆ ನೀರನ್ನು ಬಿಡುತ್ತಿದ್ದಾರೆ. ನಂತರ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಕೆರೆಗೆ ನೀರು ಬಿಡಲಾಗುತ್ತಿದ್ದು, ಪ್ರತಿ ಭಟನೆ ಕೈಬಿಡುವಂತೆ ಮನವಿ ಮಾಡಿ ದ್ದಾರೆ. ಆದರೆ ಈ ಅಧಿಕಾರಿಗಳ ಬೇಜವಾ ಬ್ದಾರಿ ಖಂಡಿಸಿ ಮತ್ತು ಸಮರ್ಪಕವಾಗಿ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೃಹತ್ ಮಹಾನಗರ ಪಾಲಿಕೆ ಬಜೆಟ್; ಹತ್ತಾರು ನಿರೀಕ್ಷೆ

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…

4 mins ago

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

12 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

13 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

13 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

13 hours ago