Andolana originals

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ ವಹಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು, ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾದ ಮಾಹಿತಿ ತಿಳಿದ ಅಽಕಾರಿಗಳು ಸಂಜೆ ವೇಳೆಯಲ್ಲಿ ಕೆರೆಗೆ ನೀರು ಬಿಟ್ಟಿರುವ ಘಟನೆ ನಡೆದಿದೆ.

ಈ ಭಾಗದಲ್ಲಿ ಮಳೆ ಪ್ರಮಾಣ ಬಹಳ ಕಡಿಮೆ ಇರುವುದರಿಂದ ಕೆರೆಕಟ್ಟೆಗಳೆಲ್ಲ ಒಣಗಿವೆ. ಜಾನುವಾರು, ರೈತರು, ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಆದರೆ, ಈ ಭಾಗದ ಮುಖಂಡರು, ರೈತರು ನೀರಿಗಾಗಿ ಸಂಬಂಧಪಟ್ಟ ಅಽಕಾರಿಗಳ ಬಳಿ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಭಾಗದ ರೈತ ಮುಖಂಡ ಶಿಂಡೇನಹಳ್ಳಿ ಯತೀಶ್ ಕುಮಾರ್ ನೇತೃತ್ವದಲ್ಲಿ ಡಿ. ೧೪ರಂದು ಭಾನುವಾರ ಶಿಂಡೇನಹಳ್ಳಿ ಗೇಟ್ ಬಳಿ ರೈತರು, ಸಾರ್ವಜನಿಕರು ಅಽಕಾರಿಗಳ ನಡೆ ಖಂಡಿಸಿ ಹಾಗೂ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಶನಿವಾರ ಸಂಜೆಯೇ ಈ ಭಾಗದ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಅಽಕಾರಿಗಳು ಮುಂದಾಗಿದ್ದಾರೆ. ಯತೀಶ್ ಕುಮಾರ್ ಮಾತನಾಡಿ, ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿ ೧೭ ಕೆರೆಗಳಿದ್ದು, ಅದರಲ್ಲಿ ೧೧ ಕೆರೆಗಳಿಗೆ ಮಾತ್ರ ನೀರು ತುಂಬಿಸಿದ್ದು, ಉಳಿದ ೬ ಕೆರೆಗಳಿಗೆ ನೀರು ತುಂಬಿಸಲು ಮೀನ-ಮೇಷ ಎಣಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:-ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಕೆರೆಗಳಲ್ಲಿ ನೀರಿಲ್ಲದೆ ದನ ಕರುಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಬೋರ್ ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಸೆಪ್ಟೆಂಬರ್, ಅಕ್ಟೋ ಬರ್, ನವೆಂಬರ್, ಡಿಸೆಂಬರ್ ಸೇರಿ ಒಟ್ಟು ೪ ತಿಂಗಳ ಕಾಲ ಕೆರೆಗೆ ನೀರಾವರಿ ಇಲಾಖೆ ಅಧೀಕಾರಿಗಳು ಕಬಿನಿ ಏತನೀರಾವರಿ ಮೂಲಕ ಇಬ್ಜಾಲ ದಿಂದ ನೀರು ಬಿಡಬೇಕೆಂಬ ನಿಯಮವಿದೆ. ಆದರೆ, ಡಿಸೆಂಬರ್ ಮುಗಿಯುತ್ತಾ ಬಂದರೂ ಕೆರೆಗೆ ನೀರು ತುಂಬಿಸಿಲ್ಲ ಎಂದರು. ಸರ್ಕಾರ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ಕೆರೆಗಳ ಬಳಿ ೬೮ ಕೋಟಿ ರೂ. ವೆಚ್ಚದ ಪಂಪ್‌ಹೌಸ್ ನಿರ್ಮಿಸಿದ್ದು, ಅಧಿಕಾರಿಗಳು ಬೇಜವಾ ಬ್ದಾರಿತನ ತೋರಿಸುತ್ತಿದ್ದಾರೆ ಎಂದರು.

ಶಿಂಡೇನಹಳ್ಳಿ ಗ್ರಾಮದ ಬಳಿ ಕೆರೆಗಳಿಗೆ ಸಂಪೂರ್ಣ ನೀರು ತುಂಬಿಸಲು ಆಗ್ರಹಿಸಿ ಭಾನುವಾರ ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಈ ವಿಚಾರ ತಿಳಿದು ಕೆರೆಗೆ ನೀರನ್ನು ಬಿಡುತ್ತಿದ್ದಾರೆ. ನಂತರ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಕೆರೆಗೆ ನೀರು ಬಿಡಲಾಗುತ್ತಿದ್ದು, ಪ್ರತಿ ಭಟನೆ ಕೈಬಿಡುವಂತೆ ಮನವಿ ಮಾಡಿ ದ್ದಾರೆ. ಆದರೆ ಈ ಅಧಿಕಾರಿಗಳ ಬೇಜವಾ ಬ್ದಾರಿ ಖಂಡಿಸಿ ಮತ್ತು ಸಮರ್ಪಕವಾಗಿ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 hour ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 hour ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago