Andolana originals

ಅಕ್ರಮ ಚಟುವಟಿಕೆಗಳ ತಾಣವಾದ ಹಳೇ ಆಸ್ಪತ್ರೆ ವಸತಿ ಗೃಹಗಳು

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ವೆಂಕಟೇಶ್ವರ ಚಿತ್ರಮಂದಿರ ರಸ್ತೆಯ ಬಳಿ ಇರುವ ಹಳೆಯ ಆಸ್ಪತ್ರೆ ವಸತಿ ಕಟ್ಟಡಗಳು ಸಂಪೂರ್ಣ ಶಿಥಿಲಾ ವಸ್ಥೆಯಲ್ಲಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ವಸತಿಗೃಹಗಳು ಕುಡುಕರ ಅಡ್ಡೆಯಾಗಿದ್ದು, ಸಂಜೆಯಾದರೆ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಕಟ್ಟಡದಲ್ಲಿರುವ ವಸ್ತುಗಳು ಕಳ್ಳರ ಪಾಲಾದರೂ ಹೇಳುವವರಿಲ್ಲ, ಕೇಳುವವರಿಲ್ಲ ಎಂಬಂತಾಗಿದೆ. ಕಟ್ಟಡವನ್ನು ಸರಿಯಾಗಿ ಬಳಸಿಕೊಳ್ಳದ ಕಾರಣ ಹಳೆಯ ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕುಡುಕರ ತಾಣವಾಗಿ, ಅನೈತಿಕ ಚಟುವಟಿಕೆಗಳ ಸ್ಥಾನವಾಗಿ ಮಾರ್ಪಟ್ಟಿದೆ. ಆದ್ದರಿಂದ ವಾಸಕ್ಕೆ ಯೋಗ್ಯವಲ್ಲದ ಈ ಕಟ್ಟಡವನ್ನು ನೆಲಸಮ ಮಾಡಿ ಉದ್ಯಾನವನವನ್ನು ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿಶ್ರಾಂತಿ ಹಾಗೂ ವಾಯುವಿಹಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಗಡಿನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಮುನೀರ್ ಪಾಷ ಒತ್ತಾಯಿಸಿದ್ದಾರೆ.

” ಈಗಾಗಲೇ ನಾವು ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಿ ಮನವಿ ಸಲ್ಲಿಸಿದ್ದು, ಇನ್ನು ೨ ತಿಂಗಳುಗಳಲ್ಲಿ ಕಟ್ಟಡ ಕೆಡವಲಾಗುವುದು ಎಂದು ತಿಳಿಸಿದ್ದಾರೆ.”

-ಅಲೀಂ ಪಾಷ, ತಾಲ್ಲೂಕು ಅರೋಗ್ಯ ಅಧಿಕಾರಿ

” ಆಸ್ಪತ್ರೆ ಪಟ್ಟಣದ ಹೃದಯ ಭಾಗದಲ್ಲಿದ್ದು, ನಿತ್ಯ ನೂರಾರು ಜನ ಬಂದು ಹೋಗುವ ಸ್ಥಳವಾಗಿದೆ. ಆದರೆ ಆ ಸ್ಥಳ ಇತ್ತೀಚೆಗೆ ಕುಡುಕರ ಅಡ್ಡೆಯಾಗಿದೆ. ಜೊತೆಗೆ ಪುಂಡಪೋಕರಿಗಳಿಗೆ ಅನೈತಿಕ ಚಟುವಟಿಕೆಗಳನ್ನು ನಡೆಸಲು ಸಹಾಯಕವಾಗಿದೆ. ಆದರೆ, ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ.”

ಮುನೀರ್ ಪಾಷಾ, ಗಡಿನಾಡು ರಕ್ಷಣಾ ಸೇನೆಯ ಅಧ್ಯಕ್ಷ,

ಜಿ.ಮಂಜುನಾಥ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago