ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ವೆಂಕಟೇಶ್ವರ ಚಿತ್ರಮಂದಿರ ರಸ್ತೆಯ ಬಳಿ ಇರುವ ಹಳೆಯ ಆಸ್ಪತ್ರೆ ವಸತಿ ಕಟ್ಟಡಗಳು ಸಂಪೂರ್ಣ ಶಿಥಿಲಾ ವಸ್ಥೆಯಲ್ಲಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ವಸತಿಗೃಹಗಳು ಕುಡುಕರ ಅಡ್ಡೆಯಾಗಿದ್ದು, ಸಂಜೆಯಾದರೆ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಕಟ್ಟಡದಲ್ಲಿರುವ ವಸ್ತುಗಳು ಕಳ್ಳರ ಪಾಲಾದರೂ ಹೇಳುವವರಿಲ್ಲ, ಕೇಳುವವರಿಲ್ಲ ಎಂಬಂತಾಗಿದೆ. ಕಟ್ಟಡವನ್ನು ಸರಿಯಾಗಿ ಬಳಸಿಕೊಳ್ಳದ ಕಾರಣ ಹಳೆಯ ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕುಡುಕರ ತಾಣವಾಗಿ, ಅನೈತಿಕ ಚಟುವಟಿಕೆಗಳ ಸ್ಥಾನವಾಗಿ ಮಾರ್ಪಟ್ಟಿದೆ. ಆದ್ದರಿಂದ ವಾಸಕ್ಕೆ ಯೋಗ್ಯವಲ್ಲದ ಈ ಕಟ್ಟಡವನ್ನು ನೆಲಸಮ ಮಾಡಿ ಉದ್ಯಾನವನವನ್ನು ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿಶ್ರಾಂತಿ ಹಾಗೂ ವಾಯುವಿಹಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಗಡಿನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಮುನೀರ್ ಪಾಷ ಒತ್ತಾಯಿಸಿದ್ದಾರೆ.
” ಈಗಾಗಲೇ ನಾವು ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಿ ಮನವಿ ಸಲ್ಲಿಸಿದ್ದು, ಇನ್ನು ೨ ತಿಂಗಳುಗಳಲ್ಲಿ ಕಟ್ಟಡ ಕೆಡವಲಾಗುವುದು ಎಂದು ತಿಳಿಸಿದ್ದಾರೆ.”
-ಅಲೀಂ ಪಾಷ, ತಾಲ್ಲೂಕು ಅರೋಗ್ಯ ಅಧಿಕಾರಿ
” ಆಸ್ಪತ್ರೆ ಪಟ್ಟಣದ ಹೃದಯ ಭಾಗದಲ್ಲಿದ್ದು, ನಿತ್ಯ ನೂರಾರು ಜನ ಬಂದು ಹೋಗುವ ಸ್ಥಳವಾಗಿದೆ. ಆದರೆ ಆ ಸ್ಥಳ ಇತ್ತೀಚೆಗೆ ಕುಡುಕರ ಅಡ್ಡೆಯಾಗಿದೆ. ಜೊತೆಗೆ ಪುಂಡಪೋಕರಿಗಳಿಗೆ ಅನೈತಿಕ ಚಟುವಟಿಕೆಗಳನ್ನು ನಡೆಸಲು ಸಹಾಯಕವಾಗಿದೆ. ಆದರೆ, ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ.”
ಮುನೀರ್ ಪಾಷಾ, ಗಡಿನಾಡು ರಕ್ಷಣಾ ಸೇನೆಯ ಅಧ್ಯಕ್ಷ,
ಜಿ.ಮಂಜುನಾಥ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…