Andolana originals

ಬೆಳೆ ಸಮೀಕ್ಷೆಯಲ್ಲಿ ಲೋಪ: ರೈತರಿಗೆ ನಷ್ಟ

• ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಬೆಳೆದಿರುವುದು ಸೂರ್ಯ ಕಾಂತಿ… ಪಹಣಿಯಲ್ಲಿ ನಮೂದಾಗಿರುವುದು ಜೋಳ, ಹತ್ತಿ… ಇಂತಹ ಸಂದಿಗ್ಧತೆಯಿಂದ ರೈತರು ಸೂರ್ಯಕಾಂತಿ ಬೆಂಬಲ ಬೆಲೆಯ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ.

ಕೇಂದ್ರಸರ್ಕಾರದಿಂದ ಸೂರ್ಯಕಾಂತಿಗೆ ಬೆಂಬಲ ಬೆಲೆ ನಿಗದಿಯಾಗಿದ್ದು ಸೆ.2ರಿಂದ ಬೆಳೆಗಾರರ ನೋಂದಣಿ ಕಾರ್ಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಆರಂಭಗೊಂಡಿದೆ. ರೈತರು ಬೆಂಬಲ ಬೆಲೆ ಪಡೆಯಲು ಮುಂದಾಗಿದ್ದು ಕೆಲವು ದಿನಗಳಲ್ಲಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.

ಸಾಕಷ್ಟು ರೈತರು ಸೂರ್ಯಕಾಂತಿ ಬೆಳೆದಿದ್ದರೂ ಅವರ ಜಮೀನಿನ ಪಹಣಿ (ಆರ್‌ಟಿಸಿ)ಯಲ್ಲಿ ಜೋಳ, ಹತ್ತಿ ಎಂದು ನಮೂದಾಗಿದೆ. ಪಹಣಿ ಯಲ್ಲಿ ಸೂರ್ಯಕಾಂತಿ ಬೆಳೆ ನಮೂದಾಗಿದ್ದರೆ ಮಾತ್ರ ಖರೀದಿ ಕೇಂದ್ರದಲ್ಲಿ ಸೂರ್ಯಕಾಂತಿ ಖರೀದಿ ಸಾಧ್ಯ. ಇಲ್ಲದಿದ್ದರೆ ಅವಕಾಶವಿಲ್ಲ.

ಹಾಗಾಗಿ ಅಂತಹ ರೈತರು ಸೂರ್ಯಕಾಂತಿ ಬೆಳೆದಿ ದ್ದರೂ ಬೆಂಬಲ ಬೆಲೆಯಿಂದ ವಂಚಿತರಾ ಗುವ ಪರಿಸ್ಥಿತಿ ನಿರ್ಮಾಣವಾಗಿ ನಷ್ಟ ಉಂಟಾಗುತ್ತದೆ. ಇದಕ್ಕೆ ಕೃಷಿ ಇಲಾಖೆಯು ಬೆಳೆ ಸಮೀಕ್ಷೆ ನಡೆಸಲು ನೇಮಿಸಿದ ಪಿಆರ್ ಗಳು ನೇರ ಕಾರಣ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಸೂರ್ಯಕಾಂತಿಯನ್ನು ದಲ್ಲಾಳಿಗಳು 3,500 ರೂ. ಗಳಿಗೆ ಖರೀದಿ ಮಾಡುತ್ತಿದ್ದರು. ಖರೀದಿ ಕೇಂದ್ರ ತೆರೆಯುವುದು ಖಚಿತವಾದಂತೆ 4,500 ರೂ.ಗಳಿಗೆ ಖರೀದಿಸಲು ಮುಂದಾಗಿದ್ದಾರೆ. ಆದರೆ, ಕ್ವಿಂಟಾಲ್ ಸೂರ್ಯಕಾಂತಿಗೆ ಬೆಂಬಲ ಬೆಲೆ 7,280 ರೂ. ಗಳಾಗಿವೆ. ವಿಪರ್ಯಾಸ ಎಂದರೆ ರೈತರು ಪಹಣಿ ಯಲ್ಲಿ ಸೂರ್ಯಕಾಂತಿ ಬೆಳೆ ನಮೂದಾಗಿಲ್ಲ.

ಇದರಿಂದ ರೈತರಿಗೆ ಕ್ವಿಂಟಾಲ್‌ಗೆ 2,500 ರೂ. ನಿಂದ 3,000 ರೂ. ನಷ್ಟವಾಗುತ್ತದೆ. ಒಬ್ಬ ರೈತ ಕನಿಷ್ಠ 4-5 ಕ್ವಿಂಟಾಲ್ ಮಾರಾಟ ಮಾಡಿದರೆ ಆತನಿಗೆ 15,000 ರೂ. ನಷ್ಟವಾಗುತ್ತದೆ. ಇದನ್ನು ತುಂಬಿ ಕೊಡುವವರು ಯಾರು? ಎಂಬುದು ರೈತರ ಪ್ರಶ್ನೆ. ಬೆಳೆ ಸಮೀಕ್ಷೆ ನಡೆಸಲು ನಿಯೋಜಿಸಿದ ಪಿಆರ್ ಗಳು ಫಸಲಿನ ತಾಕುಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿಲ್ಲ. ಆದ್ದರಿಂದಲೇ ಸೂರ್ಯಕಾಂತಿ ಬೆಳೆದಿರುವ ಜಮೀನಿನ ಆರ್‌ಟಿಸಿಯಲ್ಲಿ ಹತ್ತಿ, ಜೋಳ ಎಂದು ನಮೂದಾಗಿದೆ ಎಂಬುದು ರೈತರ ಆರೋಪ. ತಾಲ್ಲೂಕಿನ ಹಸಗೂಲಿ ಗ್ರಾಮದ ಈಶ್ವರಪ್ಪ ತಮಗೆ ಸೇರಿದ ಸರ್ವೆ ಸಂಖ್ಯೆ 95/1, ಮತ್ತು 95/2ರ ಜಮೀನುಗಳಲ್ಲಿ ಪ್ರಸ್ತುತ ಸೂರ್ಯಕಾಂತಿ ಬೆಳೆದಿದ್ದರು. ಕೃಷಿ ಇಲಾಖೆ ನಡೆಸಿದ ಸಮೀಕ್ಷೆ ಬಳಿಕ ಇವರ ಪಹಣಿಯಲ್ಲಿ ಜೋಳ, ಹತ್ತಿ ಎಂದು ನಮೂದಾಗಿದೆ. ಯಾವ ಮಾನದಂಡದಲ್ಲಿ ವಾಸ್ತವ ಬೆಳೆಯನ್ನು ಕೈಬಿಟ್ಟು ಬೇರೊಂದು ಬೆಳೆ ಸೇರಿಸಲಾಗಿದೆ. ಇದರಿಂದ ರೈತನಿಗೆ ಆಗುವ ನಷ್ಟವನ್ನು ಭರಿಸುವವರು ಯಾರು ಎಂದು ರೈತರು ಪ್ರಶ್ನಿಸಿದ್ದಾರೆ.

ಕೋಟ್ಸ್‌))

ಕಷ್ಟಪಟ್ಟು ಬೆಳೆದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಮಾರಲು ಸಾಧ್ಯವಾಗುತ್ತಿಲ್ಲ. ಬೆಳೆ ಸಮೀಕ್ಷೆಯಲ್ಲಿ ದೋಷವಾಗಿದ್ದು ರೈತರು ಸಮಸ್ಯೆ ತೋಡಿಕೊಳ್ಳುತ್ತಿದ್ದಾರೆ. ಅಂತಹ ರೈತರ ಸೂರ್ಯಕಾಂತಿಯನ್ನು ಖರೀದಿಸಬೇಕು. ಜೊತೆಗೆ ಆರ್‌ಟಿಸಿಯಲ್ಲಿ ಬೆಳೆಯನ್ನು ತಪ್ಪಾಗಿ ನಮೂದಿಸಿರುವುದನ್ನು ಬದಲಿಸಬೇಕು.

-ಸುರೇಶ್, ರೈತರು

‘ಬೆಳೆ ದರ್ಶಕ್ 2024’ ಮುಂಗಾರು ಮಳೆ ಆ್ಯಪ್ ಅನ್ನು ರೈತರು ಸ್ಮಾರ್ಟ್‌ ಫೋನ್‌ನಲ್ಲಿ ಡೌನ್ ಲೋಡ್ ಮಾಡಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದಿದ್ದ ಯಾವ ಫಸಲು ನಮೂದಾಗಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಬಹುದು. ಕೊಲ್ಲೋತ್ತರ ಮತ್ತು ನಂತರವೂ ಅಗತ್ಯ ಮಾಹಿತಿಯನ್ನು ನೀಡಿ ಬೆಳೆಯನ್ನು ದಾಖಲಿಸಬಹುದು. ಲೋಪವಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬಹುದು.

-ವೆಂಕಟೇಶ್, ಸಹಾಯಕ ಕೃಷಿ ನಿರ್ದೇಶಕರು, ಗುಂಡ್ಲುಪೇಟೆ.

Mahendra Hasaguli

ಮೂಲತಃ ಗುಂಡ್ಲುಪೇಟೆ ತಾಲ್ಲೂಕು ಹಸಗೂಲಿ ಗ್ರಾಮದವನಾದ ನಾನು ಪ್ರಾಥಮಿಕ ಶಿಕ್ಷಣವನ್ನು ಹೆಗ್ಗಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, ಗರಗನಹಳ್ಳಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ಮುಗಿಸಿ ಡಿಬಿಜೆಸಿ ಕಾಲೇಜು ಗುಂಡ್ಲುಪೇಟೆಯಲ್ಲಿ ಪಿಯು ವ್ಯಾಸಂಗ, ಜೆಎಸ್‌ಎಸ್‌ನಲ್ಲಿ ಪದವಿ ಮುಗಿಸಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂಎ ಕನ್ನಡ ಸ್ನಾತಕೋತ್ತರ ಪದವಿ ಮುಗಿಸಿ, ಒಂದು ವರ್ಷ ಪತ್ರಿಕೋದ್ಯಮದ ವಿದ್ಯಾರ್ಥಿಯಾಗಿ ಶಿಕ್ಷಣ ಪಡೆದು ಮೊದಲಿಗೆ 2015- 16 ರಲ್ಲಿ ಸಂಜೆದೀಪ ಪತ್ರಿಕೆಯಲ್ಲಿ ವರದಿಗಾರನಾಗಿ 2016-17 ರಲ್ಲಿ ವಿಶ್ವವಾಣಿ ಪತ್ರಿಕೆ ವರದಿಗಾರನಾಗಿ ಹಾಗೂ 2017 ರಿಂದ ಪ್ರಸ್ತುತ ಸಮಯದವರೆಗೂ ಆಂದೋಲನ ಪತ್ರಿಕೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕು ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ,

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

7 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

7 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

8 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

8 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

8 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

8 hours ago