Andolana originals

ರಾಮೇನಹಳ್ಳಿ ಬೆಟ್ಟದಲ್ಲಿಓಂಕಾರೇಶ್ವರ ಜಾತ್ರೆ ಸಡಗರ

ದಾ.ರಾ.ಮಹೇಶ್

ಫೆ.೨೭ರಿಂದ ಮಾ.೨ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ

ವೀರನಹೊಸಹಳ್ಳಿ: ರಾಮೇನಹಳ್ಳಿ ಬೆಟ್ಟದಲ್ಲಿ ಓಂಕಾರೇಶ್ವರ ಜಾತ್ರಾ ಮಹೋತ್ಸವ ಫೆ.೨೭ರಿಂದ ಮಾ.೨ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ.

ಶತಮಾನಗಳ ಐತಿಹ್ಯವುಳ್ಳ ಹುಣಸೂರು ತಾಲ್ಲೂಕಿನ ರಾಮೇನಹಳ್ಳಿ ಬೆಟ್ಟದ ಮೇಲಿನ ಚೋಳರ ಕಾಲದ ಓಂಕಾರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಫೆ.೨೭ರಿಂದ ಮಾ.೨ರವರೆಗೆ ನಡೆಯಲಿದೆ.

ಲಕ್ಷ್ಮಣತೀರ್ಥ ನದಿ ದಂಡೆಯ ಬೆಟ್ಟದ ಮೇಲಿನ ದೇವಾಲಯದಲ್ಲಿ ಅನಾದಿ ಕಾಲದಿಂದಲೂ ಪ್ರತಿ ಶಿವರಾತ್ರಿ ಹಬ್ಬದಂದು ಇಡೀ ರಾತ್ರಿ ಜಾಗರಣೆ, ಮರುದಿನ ಬೆಳಿಗ್ಗೆ ಬೆಟ್ಟದ ಬುಡದಲ್ಲಿ ರಥೋತ್ಸವ ನಡೆಯಲಿದೆ.

ಇತ್ತೀಚೆಗಷ್ಟೆ ದಾನಿಗಳ ನೆರವಿನಿಂದ ಒಂದೂವರೆ ಕೋಟಿ ರೂ. ವೆಚ್ಚದ ಭವ್ಯ ದೇಗುಲ ನಿರ್ಮಾಣಗೊಂಡಿದೆ. ದೇಗುಲದ ಮುಂಭಾಗದಲ್ಲಿ ಬಂಡೆಕಲ್ಲುಗಳಿಂದಲೇ ತಡೆಗೋಡೆ ನಿರ್ಮಿಸಿದ್ದು, ಇದರ ಮೇಲೆ ವಿಶಾಲ ಆವರಣ ಸುಂದರವಾಗಿ ಕಾಣುತ್ತಿದೆ. ಕುಡಿಯುವ ನೀರು, ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲಾಗಿದೆ.

೫೦೦ ಮೆಟ್ಟಿಲುಗಳು: ೪೨೬ ಎಕರೆ ವಿಸ್ತೀರ್ಣ ಹೊಂದಿರುವ ಬೆಟ್ಟವು ದೊಡ್ಡಬಂಡೆ ಕಲ್ಲುಗಳಿಂದ ಆವೃತವಾಗಿದ್ದು, ೫೦೦ ಮೆಟ್ಟಿಲುಗಳಿವೆ. ಹರಕೆ ಹೊತ್ತವರು ಮತ್ತು ದಾನಿಗಳ ನೆರವಿನಿಂದ ಚಪ್ಪಡಿ ಕಲ್ಲು ಹಾಸಿನ ಮೆಟ್ಟಿಲು ನಿರ್ಮಿಸಲಾಗಿದೆ. ಪಕ್ಕದಲ್ಲಿ ದೇವಸ್ಥಾನದವರೆಗೂ ಸುಸಜ್ಜಿತ ರಸ್ತೆ ನಿರ್ಮಾಣವಾಗಿದೆ.

ಜಾತ್ರೆಯ ಹಿಗ್ಗು: ಊರ ಜನರೆಲ್ಲಾ ಹೊಸ ಬಟ್ಟೆ ಧರಿಸುತ್ತಾರೆ. ವಾರ ಕಾಲ ಮಾಂಸದ ಅಡುಗೆ ಮಾಡುವಂತಿಲ್ಲ. ಜನರು ಜಾತಿ ಭೇದ ಮರೆತು ಒಗ್ಗೂಡುತ್ತಾರೆ. ಗ್ರಾಮಸ್ಥರು ಪ್ರತಿ ವರ್ಷ ಮನೆಗೆ ಸುಣ್ಣ-ಬಣ್ಣ ಹಚ್ಚುತ್ತಾರೆ. ಮಡಕೆ ತೆಗೆಯುತ್ತಾರೆ. ಶಿವರಾತ್ರಿಯಂದು ಸುತ್ತಮುತ್ತಲ ಗ್ರಾಮಸ್ಥರು ಬೆಟ್ಟದ ಮೇಲೆ ವಿಶೇಷ ಪೂಜೆ ಸಲ್ಲಿಸಿ, ಕಳಶ ಸ್ಥಾಪಿಸಿ ಬೆಳಗಿನ ಜಾವದವರೆಗೂ ಜಾಗರಣೆ ಮಾಡುತ್ತಾರೆ. ಮರುದಿನ ರಥೋತ್ಸವ, ಅದೇ ದಿನ ಹರಕೆ ಹೊತ್ತವರು, ಗ್ರಾಮಸ್ಥರು ಲಕ್ಷ್ಮಣತೀರ್ಥ ನದಿಯಲ್ಲಿ ಮಿಂದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಮುಡಿ ಕೊಟ್ಟು ಬಾಯಿ ಬೀಗ, ಉರುಳು ಸೇವೆ ಸಲ್ಲಿಸುತ್ತಾರೆ. ದನಗಳ ಕಾಯಿಲೆಗೆ ಹರಕೆ ಹೊತ್ತವರು ಹರಕೆ ತೀರಿಸುತ್ತಾರೆ.

ಪಾರಟೋತ್ಸವದಂದು ಬೆಟ್ಟದ ಕೆಳಗಿರುವ ದೇವರ ಮಂಟಪಕ್ಕೆ ಉತ್ಸವ ಮೂರ್ತಿಯನ್ನು ಹೊತ್ತು ತಂದು ತೊಟ್ಟಿಲಲ್ಲಿರಿಸಿ ತೂಗುತ್ತಾರೆ. ರಥೋತ್ಸವದಂದು ಬೆಟ್ಟದ ಕೆಳಗಿನ ವಿಶಾಲ ಪ್ರದೇಶದಲ್ಲಿ ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮಿತಿ ವತಿಯಿಂದ ಅನ್ನದಾಸೋಹ ವ್ಯವಸ್ಥೆ ಇರಲಿದೆ. ಹಲವಾರು ವರ್ಷಗಳಿಂದ ನಡೆಯುವ ಜಾನುವಾರುಗಳ ಜಾತ್ರೆಯು ಕಳೆ ಕಟ್ಟುತ್ತ ಬಂದಿದೆ. ಉತ್ತಮ ರಾಸುಗಳಿಗೆ ಬಹುಮಾನ ನೀಡುವ ಪದ್ಧತಿಯೂ ಇದೆ.

ಯಾವ ದಿನ, ಏನೇನು?: 

ಫೆ.೨೬ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸ್ವಾಮಿಗೆ ನಾನಾ ಕಳಶ ಪೂಜೆ ಹಾಗೂ ರಾತ್ರಿ ೯.೦೫ರಿಂದ ಬೆಳಿಗ್ಗೆ ೬.೩೦ರವರೆಗೆ ಕ್ಷೀರಾಭಿಷೇಕ, ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತು ಜಾಗರಣೋತ್ಸವ ನಡೆಯಲಿದೆ. -.೨೭ರಂದು ಬೆಳಿಗ್ಗೆ ೯ರಿಂದ ೯.೩೦ರವರೆಗೆ ಓಂಕಾರೇಶ್ವರ ಸ್ವಾಮಿ ರಥೋತ್ಸವ ಹಾಗೂ ಭಕ್ತಾದಿಗಳಿಂದ ಬಾಯಿಬೀಗ, ತಲೆ ಮುಡಿ ಹರಕೆ ಕಾರ್ಯ, ಸಂಜೆ ೫.೩೦ಕ್ಕೆ ರಥವನ್ನು ಸ್ವಸ್ಥಾನಕ್ಕೆ ತರುವುದು. ಮಧ್ಯಾಹ್ನದಿಂದ ಸಂಜೆ ೬ರವರೆಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಮಾ.೧ರಂದು ಸಂಜೆ ೪.೩೦ಕ್ಕೆ ಪಾರಟೋತ್ಸವ, ಮಾ. ೨ರ ಸಂಜೆ ೪.೩೦ರಿಂದ ೮.೩೦ರವರೆಗೆ ರಾಮೇನಳ್ಳಿಯಲ್ಲಿ ಸ್ವಾಮಿಯ ಮೆರವಣಿಗೆ ನಂತರ ಲಕ್ಷ್ಮಣತೀರ್ಥ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಮಾ.೨ರವರೆಗೆ ದನಗಳ ಜಾತ್ರೆ ಸಹ ಇರಲಿದೆ ಎಂದು ಸಮಿತಿ ಅಧ್ಯಕ್ಷ ಶಿವಾನಂದ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

6 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

9 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

10 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

10 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

11 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

11 hours ago