Andolana originals

ರಾಮೇನಹಳ್ಳಿ ಬೆಟ್ಟದಲ್ಲಿಓಂಕಾರೇಶ್ವರ ಜಾತ್ರೆ ಸಡಗರ

ದಾ.ರಾ.ಮಹೇಶ್

ಫೆ.೨೭ರಿಂದ ಮಾ.೨ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ

ವೀರನಹೊಸಹಳ್ಳಿ: ರಾಮೇನಹಳ್ಳಿ ಬೆಟ್ಟದಲ್ಲಿ ಓಂಕಾರೇಶ್ವರ ಜಾತ್ರಾ ಮಹೋತ್ಸವ ಫೆ.೨೭ರಿಂದ ಮಾ.೨ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ.

ಶತಮಾನಗಳ ಐತಿಹ್ಯವುಳ್ಳ ಹುಣಸೂರು ತಾಲ್ಲೂಕಿನ ರಾಮೇನಹಳ್ಳಿ ಬೆಟ್ಟದ ಮೇಲಿನ ಚೋಳರ ಕಾಲದ ಓಂಕಾರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಫೆ.೨೭ರಿಂದ ಮಾ.೨ರವರೆಗೆ ನಡೆಯಲಿದೆ.

ಲಕ್ಷ್ಮಣತೀರ್ಥ ನದಿ ದಂಡೆಯ ಬೆಟ್ಟದ ಮೇಲಿನ ದೇವಾಲಯದಲ್ಲಿ ಅನಾದಿ ಕಾಲದಿಂದಲೂ ಪ್ರತಿ ಶಿವರಾತ್ರಿ ಹಬ್ಬದಂದು ಇಡೀ ರಾತ್ರಿ ಜಾಗರಣೆ, ಮರುದಿನ ಬೆಳಿಗ್ಗೆ ಬೆಟ್ಟದ ಬುಡದಲ್ಲಿ ರಥೋತ್ಸವ ನಡೆಯಲಿದೆ.

ಇತ್ತೀಚೆಗಷ್ಟೆ ದಾನಿಗಳ ನೆರವಿನಿಂದ ಒಂದೂವರೆ ಕೋಟಿ ರೂ. ವೆಚ್ಚದ ಭವ್ಯ ದೇಗುಲ ನಿರ್ಮಾಣಗೊಂಡಿದೆ. ದೇಗುಲದ ಮುಂಭಾಗದಲ್ಲಿ ಬಂಡೆಕಲ್ಲುಗಳಿಂದಲೇ ತಡೆಗೋಡೆ ನಿರ್ಮಿಸಿದ್ದು, ಇದರ ಮೇಲೆ ವಿಶಾಲ ಆವರಣ ಸುಂದರವಾಗಿ ಕಾಣುತ್ತಿದೆ. ಕುಡಿಯುವ ನೀರು, ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲಾಗಿದೆ.

೫೦೦ ಮೆಟ್ಟಿಲುಗಳು: ೪೨೬ ಎಕರೆ ವಿಸ್ತೀರ್ಣ ಹೊಂದಿರುವ ಬೆಟ್ಟವು ದೊಡ್ಡಬಂಡೆ ಕಲ್ಲುಗಳಿಂದ ಆವೃತವಾಗಿದ್ದು, ೫೦೦ ಮೆಟ್ಟಿಲುಗಳಿವೆ. ಹರಕೆ ಹೊತ್ತವರು ಮತ್ತು ದಾನಿಗಳ ನೆರವಿನಿಂದ ಚಪ್ಪಡಿ ಕಲ್ಲು ಹಾಸಿನ ಮೆಟ್ಟಿಲು ನಿರ್ಮಿಸಲಾಗಿದೆ. ಪಕ್ಕದಲ್ಲಿ ದೇವಸ್ಥಾನದವರೆಗೂ ಸುಸಜ್ಜಿತ ರಸ್ತೆ ನಿರ್ಮಾಣವಾಗಿದೆ.

ಜಾತ್ರೆಯ ಹಿಗ್ಗು: ಊರ ಜನರೆಲ್ಲಾ ಹೊಸ ಬಟ್ಟೆ ಧರಿಸುತ್ತಾರೆ. ವಾರ ಕಾಲ ಮಾಂಸದ ಅಡುಗೆ ಮಾಡುವಂತಿಲ್ಲ. ಜನರು ಜಾತಿ ಭೇದ ಮರೆತು ಒಗ್ಗೂಡುತ್ತಾರೆ. ಗ್ರಾಮಸ್ಥರು ಪ್ರತಿ ವರ್ಷ ಮನೆಗೆ ಸುಣ್ಣ-ಬಣ್ಣ ಹಚ್ಚುತ್ತಾರೆ. ಮಡಕೆ ತೆಗೆಯುತ್ತಾರೆ. ಶಿವರಾತ್ರಿಯಂದು ಸುತ್ತಮುತ್ತಲ ಗ್ರಾಮಸ್ಥರು ಬೆಟ್ಟದ ಮೇಲೆ ವಿಶೇಷ ಪೂಜೆ ಸಲ್ಲಿಸಿ, ಕಳಶ ಸ್ಥಾಪಿಸಿ ಬೆಳಗಿನ ಜಾವದವರೆಗೂ ಜಾಗರಣೆ ಮಾಡುತ್ತಾರೆ. ಮರುದಿನ ರಥೋತ್ಸವ, ಅದೇ ದಿನ ಹರಕೆ ಹೊತ್ತವರು, ಗ್ರಾಮಸ್ಥರು ಲಕ್ಷ್ಮಣತೀರ್ಥ ನದಿಯಲ್ಲಿ ಮಿಂದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಮುಡಿ ಕೊಟ್ಟು ಬಾಯಿ ಬೀಗ, ಉರುಳು ಸೇವೆ ಸಲ್ಲಿಸುತ್ತಾರೆ. ದನಗಳ ಕಾಯಿಲೆಗೆ ಹರಕೆ ಹೊತ್ತವರು ಹರಕೆ ತೀರಿಸುತ್ತಾರೆ.

ಪಾರಟೋತ್ಸವದಂದು ಬೆಟ್ಟದ ಕೆಳಗಿರುವ ದೇವರ ಮಂಟಪಕ್ಕೆ ಉತ್ಸವ ಮೂರ್ತಿಯನ್ನು ಹೊತ್ತು ತಂದು ತೊಟ್ಟಿಲಲ್ಲಿರಿಸಿ ತೂಗುತ್ತಾರೆ. ರಥೋತ್ಸವದಂದು ಬೆಟ್ಟದ ಕೆಳಗಿನ ವಿಶಾಲ ಪ್ರದೇಶದಲ್ಲಿ ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮಿತಿ ವತಿಯಿಂದ ಅನ್ನದಾಸೋಹ ವ್ಯವಸ್ಥೆ ಇರಲಿದೆ. ಹಲವಾರು ವರ್ಷಗಳಿಂದ ನಡೆಯುವ ಜಾನುವಾರುಗಳ ಜಾತ್ರೆಯು ಕಳೆ ಕಟ್ಟುತ್ತ ಬಂದಿದೆ. ಉತ್ತಮ ರಾಸುಗಳಿಗೆ ಬಹುಮಾನ ನೀಡುವ ಪದ್ಧತಿಯೂ ಇದೆ.

ಯಾವ ದಿನ, ಏನೇನು?: 

ಫೆ.೨೬ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸ್ವಾಮಿಗೆ ನಾನಾ ಕಳಶ ಪೂಜೆ ಹಾಗೂ ರಾತ್ರಿ ೯.೦೫ರಿಂದ ಬೆಳಿಗ್ಗೆ ೬.೩೦ರವರೆಗೆ ಕ್ಷೀರಾಭಿಷೇಕ, ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತು ಜಾಗರಣೋತ್ಸವ ನಡೆಯಲಿದೆ. -.೨೭ರಂದು ಬೆಳಿಗ್ಗೆ ೯ರಿಂದ ೯.೩೦ರವರೆಗೆ ಓಂಕಾರೇಶ್ವರ ಸ್ವಾಮಿ ರಥೋತ್ಸವ ಹಾಗೂ ಭಕ್ತಾದಿಗಳಿಂದ ಬಾಯಿಬೀಗ, ತಲೆ ಮುಡಿ ಹರಕೆ ಕಾರ್ಯ, ಸಂಜೆ ೫.೩೦ಕ್ಕೆ ರಥವನ್ನು ಸ್ವಸ್ಥಾನಕ್ಕೆ ತರುವುದು. ಮಧ್ಯಾಹ್ನದಿಂದ ಸಂಜೆ ೬ರವರೆಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಮಾ.೧ರಂದು ಸಂಜೆ ೪.೩೦ಕ್ಕೆ ಪಾರಟೋತ್ಸವ, ಮಾ. ೨ರ ಸಂಜೆ ೪.೩೦ರಿಂದ ೮.೩೦ರವರೆಗೆ ರಾಮೇನಳ್ಳಿಯಲ್ಲಿ ಸ್ವಾಮಿಯ ಮೆರವಣಿಗೆ ನಂತರ ಲಕ್ಷ್ಮಣತೀರ್ಥ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಮಾ.೨ರವರೆಗೆ ದನಗಳ ಜಾತ್ರೆ ಸಹ ಇರಲಿದೆ ಎಂದು ಸಮಿತಿ ಅಧ್ಯಕ್ಷ ಶಿವಾನಂದ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

1 hour ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

3 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago