ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಘಟನೆ
ಕೆ.ಆರ್.ನಗರ: ಸಾಲಿಗ್ರಾಮ ತಾಲ್ಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡು, ಇದನ್ನು ಸೇವಿಸಿದವರಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಗೋವಿಂದೇಗೌಡ (65) ಎಂಬುವವರೇ ಕಲುಷಿತ ನೀರು ಸೇವನೆ ಮಾಡಿ ಮೃತಪಟ್ಟವರು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಒದಗಿಸದ ಸ್ಥಳೀಯ ಗ್ರಾಮ ಪಂಚಾಯಿತಿ ಕಲುಷಿತ ನೀರನ್ನು ಸರಬರಾಜು ಮಾಡಿದೆ. ಮಂಗಳವಾರ ಇದನ್ನು ಸೇವನೆ ಮಾಡಿದ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಗ್ರಾಮಸ್ಥರು ಕೆಲವರನ್ನು ಸಾಲಿ ಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಗೋವಿಂದೇಗೌಡ ಅವರು ತೀವ್ರ ಅಸ್ವಸ್ಥರಾದ ಕಾರಣ ಕುಟುಂಬ ದವರು ಪಕ್ಕದ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗೋವಿಂದೇಗೌಡ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಾಲ್ಲೂಕು ಆಸ್ಪತ್ರೆಯ ವೈದ್ಯರ ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಎಲ್ಲಾ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಅಗತ್ಯವಿರುವವರನ್ನು ಆಂಬ್ಯುಲೆನ್ಸ್ ಮೂಲಕ ಸಾಲಿಗ್ರಾಮ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದೆ.
ಸಂಬಂಧ ತಾಲ್ಲೂಕು ತಂಡ ಆರೋಗ್ಯಾಧಿಕಾರಿಗಳ ಬೆಟ್ಟಹಳ್ಳಿ ಗ್ರಾಮದಲ್ಲಿ ಸಮಗ್ರವಾಗಿ ತನಿಖೆ ನಡೆಸುತ್ತಿದೆ.
ನಮ್ಮ ವೈದ್ಯರ ತಂಡ ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸಿದ್ದೇವೆ. ಕುಡಿಯುವ ನೀರು ಕಲುಷಿತಗೊಂಡಿದೆ. 12 ಜನರಲ್ಲಿ ಇಬ್ಬರು ತೀವ್ರ ಸ್ವರೂಪದಲ್ಲಿ ಅಸ್ವಸ್ಥರಾಗಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-ಡಾ.ಡಿ.ನಟರಾಜು,
ತಾಲ್ಲೂಕು ಆರೋಗ್ಯಾಧಿಕಾರಿ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…