ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಘಟನೆ
ಕೆ.ಆರ್.ನಗರ: ಸಾಲಿಗ್ರಾಮ ತಾಲ್ಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡು, ಇದನ್ನು ಸೇವಿಸಿದವರಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಗೋವಿಂದೇಗೌಡ (65) ಎಂಬುವವರೇ ಕಲುಷಿತ ನೀರು ಸೇವನೆ ಮಾಡಿ ಮೃತಪಟ್ಟವರು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಒದಗಿಸದ ಸ್ಥಳೀಯ ಗ್ರಾಮ ಪಂಚಾಯಿತಿ ಕಲುಷಿತ ನೀರನ್ನು ಸರಬರಾಜು ಮಾಡಿದೆ. ಮಂಗಳವಾರ ಇದನ್ನು ಸೇವನೆ ಮಾಡಿದ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಗ್ರಾಮಸ್ಥರು ಕೆಲವರನ್ನು ಸಾಲಿ ಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಗೋವಿಂದೇಗೌಡ ಅವರು ತೀವ್ರ ಅಸ್ವಸ್ಥರಾದ ಕಾರಣ ಕುಟುಂಬ ದವರು ಪಕ್ಕದ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗೋವಿಂದೇಗೌಡ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಾಲ್ಲೂಕು ಆಸ್ಪತ್ರೆಯ ವೈದ್ಯರ ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಎಲ್ಲಾ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಅಗತ್ಯವಿರುವವರನ್ನು ಆಂಬ್ಯುಲೆನ್ಸ್ ಮೂಲಕ ಸಾಲಿಗ್ರಾಮ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದೆ.
ಸಂಬಂಧ ತಾಲ್ಲೂಕು ತಂಡ ಆರೋಗ್ಯಾಧಿಕಾರಿಗಳ ಬೆಟ್ಟಹಳ್ಳಿ ಗ್ರಾಮದಲ್ಲಿ ಸಮಗ್ರವಾಗಿ ತನಿಖೆ ನಡೆಸುತ್ತಿದೆ.
ನಮ್ಮ ವೈದ್ಯರ ತಂಡ ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸಿದ್ದೇವೆ. ಕುಡಿಯುವ ನೀರು ಕಲುಷಿತಗೊಂಡಿದೆ. 12 ಜನರಲ್ಲಿ ಇಬ್ಬರು ತೀವ್ರ ಸ್ವರೂಪದಲ್ಲಿ ಅಸ್ವಸ್ಥರಾಗಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-ಡಾ.ಡಿ.ನಟರಾಜು,
ತಾಲ್ಲೂಕು ಆರೋಗ್ಯಾಧಿಕಾರಿ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು.
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…