Andolana originals

ಕಲುಷಿತ ನೀರು ಸೇವನೆ: ಓರ್ವ ಸಾವು, 12 ಮಂದಿ ಅಸ್ವಸ್ಥ

ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಘಟನೆ

ಕೆ.ಆರ್.ನಗರ: ಸಾಲಿಗ್ರಾಮ ತಾಲ್ಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡು, ಇದನ್ನು ಸೇವಿಸಿದವರಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಗೋವಿಂದೇಗೌಡ (65) ಎಂಬುವವರೇ ಕಲುಷಿತ ನೀರು ಸೇವನೆ ಮಾಡಿ ಮೃತಪಟ್ಟವರು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಒದಗಿಸದ ಸ್ಥಳೀಯ ಗ್ರಾಮ ಪಂಚಾಯಿತಿ ಕಲುಷಿತ ನೀರನ್ನು ಸರಬರಾಜು ಮಾಡಿದೆ. ಮಂಗಳವಾರ ಇದನ್ನು ಸೇವನೆ ಮಾಡಿದ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಗ್ರಾಮಸ್ಥರು ಕೆಲವರನ್ನು ಸಾಲಿ ಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಗೋವಿಂದೇಗೌಡ ಅವರು ತೀವ್ರ ಅಸ್ವಸ್ಥರಾದ ಕಾರಣ ಕುಟುಂಬ ದವರು ಪಕ್ಕದ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗೋವಿಂದೇಗೌಡ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ತಾಲ್ಲೂಕು ಆಸ್ಪತ್ರೆಯ ವೈದ್ಯರ ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಎಲ್ಲಾ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಅಗತ್ಯವಿರುವವರನ್ನು ಆಂಬ್ಯುಲೆನ್ಸ್ ಮೂಲಕ ಸಾಲಿಗ್ರಾಮ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದೆ.

ಸಂಬಂಧ ತಾಲ್ಲೂಕು ತಂಡ ಆರೋಗ್ಯಾಧಿಕಾರಿಗಳ ಬೆಟ್ಟಹಳ್ಳಿ ಗ್ರಾಮದಲ್ಲಿ ಸಮಗ್ರವಾಗಿ ತನಿಖೆ ನಡೆಸುತ್ತಿದೆ.

ನಮ್ಮ ವೈದ್ಯರ ತಂಡ ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸಿದ್ದೇವೆ. ಕುಡಿಯುವ ನೀರು ಕಲುಷಿತಗೊಂಡಿದೆ. 12 ಜನರಲ್ಲಿ ಇಬ್ಬರು ತೀವ್ರ ಸ್ವರೂಪದಲ್ಲಿ ಅಸ್ವಸ್ಥರಾಗಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-ಡಾ.ಡಿ.ನಟರಾಜು,
ತಾಲ್ಲೂಕು ಆರೋಗ್ಯಾಧಿಕಾರಿ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

24 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

26 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

28 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago