ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ.
ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ ರಾಜ್ಯ ಹೆದ್ದಾರಿ ೫೭ರ ಹೆಗ್ಗಡಹಳ್ಳಿಯಿಂದ ವರುಣ ಕ್ಷೇತ್ರದ ಬಿದರಗೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಕಪಿಲಾ ನದಿಯ ಎಡಬದಿಯ ಗ್ರಾಮಗಳಾದ ಬಿದರ ಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಅಂಡವಿನಹಳ್ಳಿ ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಬಹುದಿನಗಳ ಕನಸು ಈ ಹೊಸ ಸೇತುವೆಯ ನಿರ್ಮಾಣದಿಂದಾಗಿ ನನಸಾಗಲಿದೆ.
ಈ ಸೇತುವೆ ನಿರ್ಮಾಣದಿಂದಾಗಿ ಬಿದರಗೂಡು ಮತ್ತು ನಂಜನಗೂಡಿನ ಮಧ್ಯದ ೨೪ ಕಿ. ಮೀ. ನಲ್ಲಿ ೧೨ ಕಿ. ಮೀ. ದೂರ ಉಳಿತಾಯವಾದರೆ, ಹೆಗ್ಗಡಹಳ್ಳಿಯಿಂದ ಜಿಲ್ಲಾ ಕೇಂದ್ರ ಮೈಸೂರಿಗೆ ೩೨ ಕಿ. ಮೀ. ಕ್ರಮಿಸಬೇಕಿದ್ದು, ಹೊಸ ಸೇತುವೆ ನಿರ್ಮಾಣದಿಂದಾಗಿ ೧೨ ಕಿ. ಮೀ. ದೂರ ಕಡಿಮೆಯಾಗಲಿದೆ. ವರುಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಪಿಲೆಗೆ ನೂತನ ಸೇತುವೆ ಮಂಜೂರು ಮಾಡಿದ್ದು, ಈ ಕುರಿತು ಇದೇ ತಿಂಗಳು ೧೦ರಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸದ್ಯದಲ್ಲೇ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ೨೯. ೩೫ ಕೋಟಿ ರೂ. ವೆಚ್ಚದ ಈ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಹೊಸ ಸೇತುವೆಯನ್ನು ಮಂಜೂರು ಮಾಡಿದ್ದಕ್ಕಾಗಿ ಬಿದರಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಹಂಡುವಿನಹಳ್ಳಿ, ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಜನತೆ ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಎಚ್. ಸಿ. ಮಹದೇವಪ್ಪ, ಶಾಸಕ ದರ್ಶನ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರನ್ನು ಅಭಿನಂದಿಸಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…