ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ.
ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ ರಾಜ್ಯ ಹೆದ್ದಾರಿ ೫೭ರ ಹೆಗ್ಗಡಹಳ್ಳಿಯಿಂದ ವರುಣ ಕ್ಷೇತ್ರದ ಬಿದರಗೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಕಪಿಲಾ ನದಿಯ ಎಡಬದಿಯ ಗ್ರಾಮಗಳಾದ ಬಿದರ ಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಅಂಡವಿನಹಳ್ಳಿ ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಬಹುದಿನಗಳ ಕನಸು ಈ ಹೊಸ ಸೇತುವೆಯ ನಿರ್ಮಾಣದಿಂದಾಗಿ ನನಸಾಗಲಿದೆ.
ಈ ಸೇತುವೆ ನಿರ್ಮಾಣದಿಂದಾಗಿ ಬಿದರಗೂಡು ಮತ್ತು ನಂಜನಗೂಡಿನ ಮಧ್ಯದ ೨೪ ಕಿ. ಮೀ. ನಲ್ಲಿ ೧೨ ಕಿ. ಮೀ. ದೂರ ಉಳಿತಾಯವಾದರೆ, ಹೆಗ್ಗಡಹಳ್ಳಿಯಿಂದ ಜಿಲ್ಲಾ ಕೇಂದ್ರ ಮೈಸೂರಿಗೆ ೩೨ ಕಿ. ಮೀ. ಕ್ರಮಿಸಬೇಕಿದ್ದು, ಹೊಸ ಸೇತುವೆ ನಿರ್ಮಾಣದಿಂದಾಗಿ ೧೨ ಕಿ. ಮೀ. ದೂರ ಕಡಿಮೆಯಾಗಲಿದೆ. ವರುಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಪಿಲೆಗೆ ನೂತನ ಸೇತುವೆ ಮಂಜೂರು ಮಾಡಿದ್ದು, ಈ ಕುರಿತು ಇದೇ ತಿಂಗಳು ೧೦ರಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸದ್ಯದಲ್ಲೇ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ೨೯. ೩೫ ಕೋಟಿ ರೂ. ವೆಚ್ಚದ ಈ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಹೊಸ ಸೇತುವೆಯನ್ನು ಮಂಜೂರು ಮಾಡಿದ್ದಕ್ಕಾಗಿ ಬಿದರಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಹಂಡುವಿನಹಳ್ಳಿ, ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಜನತೆ ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಎಚ್. ಸಿ. ಮಹದೇವಪ್ಪ, ಶಾಸಕ ದರ್ಶನ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರನ್ನು ಅಭಿನಂದಿಸಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…