Andolana originals

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ.

ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ ರಾಜ್ಯ ಹೆದ್ದಾರಿ ೫೭ರ ಹೆಗ್ಗಡಹಳ್ಳಿಯಿಂದ ವರುಣ ಕ್ಷೇತ್ರದ ಬಿದರಗೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಕಪಿಲಾ ನದಿಯ ಎಡಬದಿಯ ಗ್ರಾಮಗಳಾದ ಬಿದರ ಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಅಂಡವಿನಹಳ್ಳಿ ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಬಹುದಿನಗಳ ಕನಸು ಈ ಹೊಸ ಸೇತುವೆಯ ನಿರ್ಮಾಣದಿಂದಾಗಿ ನನಸಾಗಲಿದೆ.

ಈ ಸೇತುವೆ ನಿರ್ಮಾಣದಿಂದಾಗಿ ಬಿದರಗೂಡು ಮತ್ತು ನಂಜನಗೂಡಿನ ಮಧ್ಯದ ೨೪ ಕಿ. ಮೀ. ನಲ್ಲಿ ೧೨ ಕಿ. ಮೀ. ದೂರ ಉಳಿತಾಯವಾದರೆ, ಹೆಗ್ಗಡಹಳ್ಳಿಯಿಂದ ಜಿಲ್ಲಾ ಕೇಂದ್ರ ಮೈಸೂರಿಗೆ ೩೨ ಕಿ. ಮೀ. ಕ್ರಮಿಸಬೇಕಿದ್ದು, ಹೊಸ ಸೇತುವೆ ನಿರ್ಮಾಣದಿಂದಾಗಿ ೧೨ ಕಿ. ಮೀ. ದೂರ ಕಡಿಮೆಯಾಗಲಿದೆ. ವರುಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಪಿಲೆಗೆ ನೂತನ ಸೇತುವೆ ಮಂಜೂರು ಮಾಡಿದ್ದು, ಈ ಕುರಿತು ಇದೇ ತಿಂಗಳು ೧೦ರಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸದ್ಯದಲ್ಲೇ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ೨೯. ೩೫ ಕೋಟಿ ರೂ. ವೆಚ್ಚದ ಈ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಹೊಸ ಸೇತುವೆಯನ್ನು ಮಂಜೂರು ಮಾಡಿದ್ದಕ್ಕಾಗಿ ಬಿದರಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಹಂಡುವಿನಹಳ್ಳಿ, ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಜನತೆ ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಎಚ್. ಸಿ. ಮಹದೇವಪ್ಪ, ಶಾಸಕ ದರ್ಶನ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರನ್ನು ಅಭಿನಂದಿಸಿದ್ದಾರೆ.

andolana

Recent Posts

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

52 seconds ago

ಮುಡಾ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ…

49 mins ago

ಮುಡಾ ಪ್ರಕರಣ ಸಿವಿಲ್ ಮ್ಯಾಟ್ರೂ ಎಂದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ…

1 hour ago

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ…

2 hours ago

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.…

2 hours ago

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

2 hours ago