Andolana originals

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ.

ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ ರಾಜ್ಯ ಹೆದ್ದಾರಿ ೫೭ರ ಹೆಗ್ಗಡಹಳ್ಳಿಯಿಂದ ವರುಣ ಕ್ಷೇತ್ರದ ಬಿದರಗೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಕಪಿಲಾ ನದಿಯ ಎಡಬದಿಯ ಗ್ರಾಮಗಳಾದ ಬಿದರ ಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಅಂಡವಿನಹಳ್ಳಿ ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಬಹುದಿನಗಳ ಕನಸು ಈ ಹೊಸ ಸೇತುವೆಯ ನಿರ್ಮಾಣದಿಂದಾಗಿ ನನಸಾಗಲಿದೆ.

ಈ ಸೇತುವೆ ನಿರ್ಮಾಣದಿಂದಾಗಿ ಬಿದರಗೂಡು ಮತ್ತು ನಂಜನಗೂಡಿನ ಮಧ್ಯದ ೨೪ ಕಿ. ಮೀ. ನಲ್ಲಿ ೧೨ ಕಿ. ಮೀ. ದೂರ ಉಳಿತಾಯವಾದರೆ, ಹೆಗ್ಗಡಹಳ್ಳಿಯಿಂದ ಜಿಲ್ಲಾ ಕೇಂದ್ರ ಮೈಸೂರಿಗೆ ೩೨ ಕಿ. ಮೀ. ಕ್ರಮಿಸಬೇಕಿದ್ದು, ಹೊಸ ಸೇತುವೆ ನಿರ್ಮಾಣದಿಂದಾಗಿ ೧೨ ಕಿ. ಮೀ. ದೂರ ಕಡಿಮೆಯಾಗಲಿದೆ. ವರುಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಪಿಲೆಗೆ ನೂತನ ಸೇತುವೆ ಮಂಜೂರು ಮಾಡಿದ್ದು, ಈ ಕುರಿತು ಇದೇ ತಿಂಗಳು ೧೦ರಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸದ್ಯದಲ್ಲೇ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ೨೯. ೩೫ ಕೋಟಿ ರೂ. ವೆಚ್ಚದ ಈ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಹೊಸ ಸೇತುವೆಯನ್ನು ಮಂಜೂರು ಮಾಡಿದ್ದಕ್ಕಾಗಿ ಬಿದರಗೂಡು, ಮರಳೂರು, ಕೆಂಬಾಳು, ದೂರ, ರಾಂಪುರ ಬಲಬದಿಯ ಗ್ರಾಮಗಳಾದ ಹೆಗ್ಗಡಹಳ್ಳಿ, ಕೊಂಗಳ್ಳಿ, ಹಂಡುವಿನಹಳ್ಳಿ, ದೇಬೂರು, ಬ್ಯಾಳಾರು, ಹರತಲೆ ಗ್ರಾಮಗಳ ಜನತೆ ಸಿಎಂ ಸಿದ್ದರಾಮಯ್ಯ, ಸಚಿವ ಡಾ. ಎಚ್. ಸಿ. ಮಹದೇವಪ್ಪ, ಶಾಸಕ ದರ್ಶನ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರನ್ನು ಅಭಿನಂದಿಸಿದ್ದಾರೆ.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

15 hours ago