Andolana originals

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ ಒಪ್ಪುತ್ತದೆ. ಮಾನವ ಸಂಘಜೀವಿ. ಸಮಾಜದೊಳಗೆ ಸಮುದಾಯದ ಕಟ್ಟುಪಾಡುಗಳನ್ನು ಪಾಲಿಸಿ ಸಂಸ್ಕಾರ, ಸಂಪ್ರದಾಯವನ್ನು ಪಾಲಿಸಿ ಆರಾದಿಸಿ ಜೀವನ ನಡೆಸಿದಾಗ ಮಾತ್ರ ಸಮುದಾಯದಲ್ಲಿ ಆತ ಉತ್ತಮ ನಾಗರಿಕನಾಗಿ ಹೊರಹೊಮ್ಮುತ್ತಾನೆ.

ಇತ್ತೀಚಿನ ದಿನಮಾನಗಳಲ್ಲಿ ನಮ್ಮ ಸಮಾಜದಲ್ಲಿ ಬೇರೆಯವರ ಏಳಿಗೆಯನ್ನು ಸಹಿಸದಿರುವುದು, ಸ್ನೇಹದಲ್ಲಿ ನೈಜತೆ ಇಲ್ಲದಿರುವುದು, ಅಪನಂಬಿಕೆ ಮುಂತಾದ ಕೆಟ್ಟಗುಣಗಳು ಸಮಾಜದ ಪಿಡುಗುಗಳಾಗಿ ಜನರ ದಿಕ್ಕು ಬದಲಿಸುತ್ತಿವೆಯೇನೋ ಎಂಬ ಆತಂಕ ಪ್ರಜ್ಞಾವಂತರಲ್ಲಿ ಮೂಡುವಂತಾಗಿದೆ. ಹಿಂದೆ ಇದ್ದಂತಹ ಸಂಸ್ಕಾರವಿಲ್ಲ, ಆಚಾರವಿಲ್ಲ, ಬಲವಾದ ಸ್ನೇಹವಿಲ್ಲ, ನಂಬಿಕೆಯಿಲ್ಲ, ಪ್ರಾಮಾಣಿಕತೆಯಂತೂ ಮಾಯವಾಗುತ್ತಿದೆಯೆನೋ ಎಂಬ ಭಾವನೆ ಮೂಡುತ್ತಿದೆ. ಹೀಗೆ ನಮ್ಮನಮ್ಮ ಈ ಗುಣಗಳು ನಮ್ಮ ದಿಕ್ಕನ್ನು ಬೇರೆಡೆಗೆ ಬದಲಾಯಿಸಿ ಮಾನಸಿಕವಾಗಿ ಬಲಹೀನರಾಗಿ ಮಾಡುತ್ತಿದೆ.

ಹಾಗಾಗಿ ಮಾನವನಿಗೆ ಯಾವುದರಲ್ಲೂ ತೃಪ್ತಿ ಕಾಣದಾಗಿದೆ. ಯಾರಲ್ಲೂ ನಂಬಿಕೆಯಿಡಬೇಕೆಂಬ ಮನೋಭಾವವು ಬದಲಾಗುತ್ತಿದೆ. ಮೊದಲು ನಮ್ಮನ್ನು ನಾವು ತಿಳಿದು ನಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ನಾವೇ ಪ್ರಶಂಸಿಸಿಕೊಂಡು ಕೆಟ್ಟಗುಣಗಳನ್ನು ಬುಡಸಮೇತ ಕಿತ್ತುಹಾಕೋಣವಲ್ಲವೇ? ನಮಗಾಗಿ ಇಷ್ಟೇ ಎಂದು ನಿಶ್ಚಯಿಸಿರುವಾಗ ಅದರಲ್ಲಿಯೇ ಸಂತಸವನ್ನು ಕಾಣೋಣ. ನಮ್ಮಲ್ಲಿಲ್ಲದ ವಸ್ತುವಿನ ಬಗ್ಗೆ ಚಿಂತಿಸುವುದನ್ನು ಬಿಡೋಣ. ಹಾಸಿಗೆ ಇದ್ದಷ್ಟು ಕಾಲು ಚಾಚಿ, ಜೀವನ ನಡೆಸಿದರೆ ಉತ್ತಮ ಅಲ್ಲವೇ?!

-ಅನಿಲ್ ರಾಜ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

8 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago