Andolana originals

ಜನಾಕರ್ಷಣೆಯ ದಸರಾ ವಸ್ತುಪ್ರದರ್ಶನಕ್ಕೆ ತೆರೆ

ಎಚ್.ಎಸ್.ದಿನೇಶ್ ಕುಮಾರ್

ಲಕ್ಷಾಂತರ ಜನರನ್ನು ಆಕರ್ಷಿಸಿದ ಮನರಂಜನಾ ತಾಣ; ನಿತ್ಯ ಸಾವಿರಾರು ಜನ ವೀಕ್ಷಣೆ

ಮೈಸೂರು: ಕಳೆದ ಮೂರು ತಿಂಗಳುಗಳಿಂದ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಹಾಗೂ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸಿದ ದಸರಾ ವಸ್ತುಪ್ರದರ್ಶನ ಭಾನುವಾರ ತೆರೆ ಕಂಡಿತು.

ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ವಸ್ತುಪ್ರದರ್ಶನವೂ ಒಂದು. ಮೂರು ತಿಂಗಳುಗಳ ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ಕೇರಳ, ಮಹಾರಾಷ್ಟ್ರ, ತಮಿಳುನಾಡು ಹಾಗೂ ರಾಜ್ಯದ ಹಲವಾರು ಜಿಲ್ಲೆಯ ಉದ್ಯಮಿಗಳು ಪಾಲ್ಗೊಳ್ಳುವುದುವಾಡಿಕೆ. ಅವರಿಗೆ ವಸ್ತುಪ್ರದರ್ಶನ ಆರಂಭವಾಯಿತು ಎಂದರೆ ಎಲ್ಲಿಲ್ಲದ ಸಂತಸ.

ಲಕ್ಷಾಂತರ ರೂ. ಬಂಡವಾಳ ಹೂಡುವ ವ್ಯಾಪಾರಿಗಳು ಸಾಕಷ್ಟು ಲಾಭ ಮಾಡಿಕೊಂಡು ತಮ್ಮ ಊರಿನತ್ತ ಪಯಣ ಬೆಳೆಸುತ್ತಾರೆ. ಇದರ ಜೊತೆಗೆ ವಿವಿಧ ಬಗೆಯ ತಿಂಡಿ, ತಿನಿಸುಗಳ ಮಾರಾಟಗಾರರು ಹಾಗೂ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಗಳು ಕೂಡ ಆಹಾರ ಪದಾರ್ಥಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿವೆ.

ಹಲವು ವಿಶೇಷ: ಈ ಬಾರಿಯ ವಸ್ತು ಪ್ರದರ್ಶನದ ಆವರಣವು ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಹಿಮಕರಡಿ, ಡ್ರ್ಯಾಗನ್ ಪಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಗಳನ್ನು ಬಿಂಬಿಸುವ ಮಳಿಗೆ, ಸಂಗೀತ ಕಾರಂಜಿ… ಹೀಗೆ ಹಲವು ಹೊಸತನಗಳನ್ನು ನೋಡುಗರು ಕಣ್ತುಂಬಿಕೊಂಡರು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಗೆ ಎರಡು ಬಾರಿ ಭೇಟಿ ನೀಡಿದ್ದು ವಿಶೇಷ.

ಕೊನೆಯ ದಿನ ವ್ಯಾಪಾರ ಬಲೂ ಜೋರು: ಭಾನುವಾರ ರಾತ್ರಿಯೇ ದಸರಾ ವಸ್ತುಪ್ರದರ್ಶನ ಅಧಿಕೃತವಾಗಿ ಕೊನೆಗೊಂಡರೂ, ಸೋಮವಾರವೂ ವ್ಯಾಪಾರಸ್ಥರು ಭಾರೀ ರಿಯಾಯಿತಿ ಮೂಲಕ ವ್ಯಾಪಾರ ಮಾಡಿ ಕೊಂಡರು. ಅವರ ವ್ಯಾಪಾರಕ್ಕೆ ವಸ್ತುಪ್ರದರ್ಶನದ ಅಧಿಕಾರಿಗಳು ಕೂಡ ಅಡ್ಡಿಪಡಿಸಲಿಲ್ಲ.

ಸಾರ್ವಜನಿಕರು ಯಾವುದೇ ಪ್ರವೇಶ ಶುಲ್ಕವಿಲ್ಲದೆ ಸೋಮವಾರ ವಸ್ತುಪ್ರದರ್ಶನ ಆವರಣಕ್ಕೆ ಲಗ್ಗೆ ಇಟ್ಟರು. ರಸ್ತೆ ಬದಿ ವ್ಯಾಪಾರಿಗಳು ವಸ್ತುಪ್ರದರ್ಶನ ಆವರಣದ ಮುಂಭಾಗ ವ್ಯಾಪಾರ ಮಾಡಿಕೊಂಡರು.

ಇದೇ ವೇಳೆ ೨೦೨೫ರ ದಸರಾ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ನಿಗಮ, ಮಂಡಳಿಗಳು ಹಾಗೂ ಜಿಲ್ಲಾ ಪಂಚಾಯತ್‌ಗಳಿಂದ ತೆರೆಯಲಾಗಿದ್ದ ಮಳಿಗೆಗಳಲ್ಲಿ ಬಹುಮಾನಕ್ಕೆ ಆಯ್ಕೆಯಾದ ಮಳಿಗೆಗಳಿಗೆ ಮುಂದಿನ ವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಸೆ, ಅಧಿಕಾರಿಗಳ ಸಹಕಾರದಿಂದ ಈ ಬಾರಿಯ ವಸ್ತುಪ್ರರ್ದಶನ ಯಶಸ್ವಿಯಾಗಿ ಮುಗಿದಿದೆ. ದೇಶವಿದೇಶಗಳ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡಿ ಖುಷಿಪಟ್ಟಿದ್ದಾರೆ. ವಸ್ತುಪ್ರದರ್ಶನ ಅಂತ್ಯಗೊಂಡರೂ ಡ್ರ್ಯಾಗನ್ ಪಾಂಡ್ ಜನರ ವೀಕ್ಷಣೆಗೆ ಲಭ್ಯವಿರುತ್ತದೆ. ವಸ್ತುಪ್ರದರ್ಶನದ ಯಶಸ್ಸಿಗೆ ಕಾರಣರಾದ ಮೈಸೂರು ಜನತೆ ಹಾಗೂ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ.”

ಅಯೂಬ್ ಖಾನ್, ಅಧ್ಯಕ್ಷರು, ವಸ್ತುಪ್ರದರ್ಶನ ಪ್ರಾಧಿಕಾರ

” ಕಳೆದ ಮೂರು ತಿಂಗಳುಗಳಿಂದ ಮಳಿಗೆಯನ್ನು ನಡೆಸಿಕೊಂಡು ಬಂದಿದ್ದೇವೆ. ಹೆಚ್ಚು ಲಾಭವಿಲ್ಲದಿದ್ದರೂ ನಷ್ಟವಂತೂ ಆಗಿಲ್ಲ. ಮುಂದಿನ ಬಾರಿಯೂ ಮಳಿಗೆಯನ್ನು ಹೊಂದುವ ಇಚ್ಛೆ ಇದೆ.”

ನಯಾಜ್, ವ್ಯಾಪಾರಿ

” ಬೀಜಾಪುರದಿಂದ ಬಂದು ಇಲ್ಲಿ ಮೂರು ತಿಂಗಳುಗಳಿಂದ ವ್ಯಾಪಾರ ಮಾಡಿದ್ದೇವೆ. ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದಾರೆ. ನಿರೀಕ್ಷೆಯಂತೆ ನಮ್ಮ ವಸ್ತುಗಳು ಬಿಕರಿಯಾಗಿವೆ.”

ಭಾಗ್ಯಶ್ರೀ, ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

6 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

20 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

21 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

22 hours ago