Andolana originals

ಜನಾಕರ್ಷಣೆಯ ದಸರಾ ವಸ್ತುಪ್ರದರ್ಶನಕ್ಕೆ ತೆರೆ

ಎಚ್.ಎಸ್.ದಿನೇಶ್ ಕುಮಾರ್

ಲಕ್ಷಾಂತರ ಜನರನ್ನು ಆಕರ್ಷಿಸಿದ ಮನರಂಜನಾ ತಾಣ; ನಿತ್ಯ ಸಾವಿರಾರು ಜನ ವೀಕ್ಷಣೆ

ಮೈಸೂರು: ಕಳೆದ ಮೂರು ತಿಂಗಳುಗಳಿಂದ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಹಾಗೂ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸಿದ ದಸರಾ ವಸ್ತುಪ್ರದರ್ಶನ ಭಾನುವಾರ ತೆರೆ ಕಂಡಿತು.

ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ವಸ್ತುಪ್ರದರ್ಶನವೂ ಒಂದು. ಮೂರು ತಿಂಗಳುಗಳ ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ಕೇರಳ, ಮಹಾರಾಷ್ಟ್ರ, ತಮಿಳುನಾಡು ಹಾಗೂ ರಾಜ್ಯದ ಹಲವಾರು ಜಿಲ್ಲೆಯ ಉದ್ಯಮಿಗಳು ಪಾಲ್ಗೊಳ್ಳುವುದುವಾಡಿಕೆ. ಅವರಿಗೆ ವಸ್ತುಪ್ರದರ್ಶನ ಆರಂಭವಾಯಿತು ಎಂದರೆ ಎಲ್ಲಿಲ್ಲದ ಸಂತಸ.

ಲಕ್ಷಾಂತರ ರೂ. ಬಂಡವಾಳ ಹೂಡುವ ವ್ಯಾಪಾರಿಗಳು ಸಾಕಷ್ಟು ಲಾಭ ಮಾಡಿಕೊಂಡು ತಮ್ಮ ಊರಿನತ್ತ ಪಯಣ ಬೆಳೆಸುತ್ತಾರೆ. ಇದರ ಜೊತೆಗೆ ವಿವಿಧ ಬಗೆಯ ತಿಂಡಿ, ತಿನಿಸುಗಳ ಮಾರಾಟಗಾರರು ಹಾಗೂ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಗಳು ಕೂಡ ಆಹಾರ ಪದಾರ್ಥಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿವೆ.

ಹಲವು ವಿಶೇಷ: ಈ ಬಾರಿಯ ವಸ್ತು ಪ್ರದರ್ಶನದ ಆವರಣವು ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಹಿಮಕರಡಿ, ಡ್ರ್ಯಾಗನ್ ಪಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಗಳನ್ನು ಬಿಂಬಿಸುವ ಮಳಿಗೆ, ಸಂಗೀತ ಕಾರಂಜಿ… ಹೀಗೆ ಹಲವು ಹೊಸತನಗಳನ್ನು ನೋಡುಗರು ಕಣ್ತುಂಬಿಕೊಂಡರು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಗೆ ಎರಡು ಬಾರಿ ಭೇಟಿ ನೀಡಿದ್ದು ವಿಶೇಷ.

ಕೊನೆಯ ದಿನ ವ್ಯಾಪಾರ ಬಲೂ ಜೋರು: ಭಾನುವಾರ ರಾತ್ರಿಯೇ ದಸರಾ ವಸ್ತುಪ್ರದರ್ಶನ ಅಧಿಕೃತವಾಗಿ ಕೊನೆಗೊಂಡರೂ, ಸೋಮವಾರವೂ ವ್ಯಾಪಾರಸ್ಥರು ಭಾರೀ ರಿಯಾಯಿತಿ ಮೂಲಕ ವ್ಯಾಪಾರ ಮಾಡಿ ಕೊಂಡರು. ಅವರ ವ್ಯಾಪಾರಕ್ಕೆ ವಸ್ತುಪ್ರದರ್ಶನದ ಅಧಿಕಾರಿಗಳು ಕೂಡ ಅಡ್ಡಿಪಡಿಸಲಿಲ್ಲ.

ಸಾರ್ವಜನಿಕರು ಯಾವುದೇ ಪ್ರವೇಶ ಶುಲ್ಕವಿಲ್ಲದೆ ಸೋಮವಾರ ವಸ್ತುಪ್ರದರ್ಶನ ಆವರಣಕ್ಕೆ ಲಗ್ಗೆ ಇಟ್ಟರು. ರಸ್ತೆ ಬದಿ ವ್ಯಾಪಾರಿಗಳು ವಸ್ತುಪ್ರದರ್ಶನ ಆವರಣದ ಮುಂಭಾಗ ವ್ಯಾಪಾರ ಮಾಡಿಕೊಂಡರು.

ಇದೇ ವೇಳೆ ೨೦೨೫ರ ದಸರಾ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ನಿಗಮ, ಮಂಡಳಿಗಳು ಹಾಗೂ ಜಿಲ್ಲಾ ಪಂಚಾಯತ್‌ಗಳಿಂದ ತೆರೆಯಲಾಗಿದ್ದ ಮಳಿಗೆಗಳಲ್ಲಿ ಬಹುಮಾನಕ್ಕೆ ಆಯ್ಕೆಯಾದ ಮಳಿಗೆಗಳಿಗೆ ಮುಂದಿನ ವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಸೆ, ಅಧಿಕಾರಿಗಳ ಸಹಕಾರದಿಂದ ಈ ಬಾರಿಯ ವಸ್ತುಪ್ರರ್ದಶನ ಯಶಸ್ವಿಯಾಗಿ ಮುಗಿದಿದೆ. ದೇಶವಿದೇಶಗಳ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡಿ ಖುಷಿಪಟ್ಟಿದ್ದಾರೆ. ವಸ್ತುಪ್ರದರ್ಶನ ಅಂತ್ಯಗೊಂಡರೂ ಡ್ರ್ಯಾಗನ್ ಪಾಂಡ್ ಜನರ ವೀಕ್ಷಣೆಗೆ ಲಭ್ಯವಿರುತ್ತದೆ. ವಸ್ತುಪ್ರದರ್ಶನದ ಯಶಸ್ಸಿಗೆ ಕಾರಣರಾದ ಮೈಸೂರು ಜನತೆ ಹಾಗೂ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ.”

ಅಯೂಬ್ ಖಾನ್, ಅಧ್ಯಕ್ಷರು, ವಸ್ತುಪ್ರದರ್ಶನ ಪ್ರಾಧಿಕಾರ

” ಕಳೆದ ಮೂರು ತಿಂಗಳುಗಳಿಂದ ಮಳಿಗೆಯನ್ನು ನಡೆಸಿಕೊಂಡು ಬಂದಿದ್ದೇವೆ. ಹೆಚ್ಚು ಲಾಭವಿಲ್ಲದಿದ್ದರೂ ನಷ್ಟವಂತೂ ಆಗಿಲ್ಲ. ಮುಂದಿನ ಬಾರಿಯೂ ಮಳಿಗೆಯನ್ನು ಹೊಂದುವ ಇಚ್ಛೆ ಇದೆ.”

ನಯಾಜ್, ವ್ಯಾಪಾರಿ

” ಬೀಜಾಪುರದಿಂದ ಬಂದು ಇಲ್ಲಿ ಮೂರು ತಿಂಗಳುಗಳಿಂದ ವ್ಯಾಪಾರ ಮಾಡಿದ್ದೇವೆ. ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದಾರೆ. ನಿರೀಕ್ಷೆಯಂತೆ ನಮ್ಮ ವಸ್ತುಗಳು ಬಿಕರಿಯಾಗಿವೆ.”

ಭಾಗ್ಯಶ್ರೀ, ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago