Andolana originals

ಓದುಗರ ಪತ್ರ: ವಿಪಕ್ಷಗಳ ಆರೋಪ ರಾಜಕೀಯ ಪ್ರೇರಿತ

ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ, ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯ ೨೦೨೪-೨೫ನೇ ವಿತ್ತೀಯ ವರ್ಷದಲ್ಲಿ ದೇಶದ ಉಳಿದ ಎಲ್ಲಾ ರಾಜ್ಯಗಳನ್ನು ಮೀರಿಸಿದೆ ಎಂಬ ವಿಚಾರವನ್ನು ಲೋಕಸಭೆಯಲ್ಲಿ ಮಂಡಿಸಲಾಗಿರುವ ಕೇಂದ್ರ ಹಣಕಾಸು ಇಲಾಖೆಯ ಅಂಕಿ ಅಂಶಗಳು ಸ್ಪಷ್ಟಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯ ಸರ್ಕಾರದ ತಲಾ ಆದಾಯ  ಒಟ್ಟಾರೆ ರಾಜ್ಯ ಆಂತರಿಕ ಉತ್ಪನ್ನವು (ಎನ್‌ಎಸ್ ಡಿಪಿ) ರೂ.೨,೦೪,೬೦೫.೦೦ಗೆ ತಲುಪಿದ್ದು, ೨೦೧೪-೧೫ ರಲ್ಲಿದ್ದ ರೂ. ೧,೦೫,೬೯೭ ಮೀರಿಸಿ, ಶೇ. ೯೩.೬ ರಷ್ಟು ಬೆಳವಣಿಗೆ ಕಂಡಿದೆ. ಈ ರೀತಿ ರಾಜ್ಯದ ಜನರ ಆದಾಯವು ಗಣನೀಯವಾಗಿ ಏರಿಕೆ ಕಂಡಿರುವುದನ್ನು ಕೇಂದ್ರ ಸರ್ಕಾರದ ವಿತ್ತ ಸಚಿವಾಲಯವೇ ಹೇಳಿದೆ. ಕಳೆದ ಒಂದು ದಶಕದಲ್ಲಿ ರಾಜ್ಯದ ಆದಾಯವು ಬಹುತೇಕ ದ್ವಿಗುಣ ಗೊಂಡಿದೆಯೆಂದು ವಿತ್ತ ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರ್ಥಿಕ ಆರೋಗ್ಯದ ಬಗ್ಗೆ ವಿರೋಧ ಪಕ್ಷಗಳ ಟೀಕೆ-ಟಿಪ್ಪಣಿಗಳು ವಸ್ತು ನಿಷ್ಠವಾಗಿರದೇ ರಾಜಕೀಯ ಪ್ರೇರಿತವಾಗಿವೆ ಎಂದು ಭಾವಿಸಬಹುದಾಗಿದೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

17 seconds ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

14 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

36 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

56 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

1 hour ago