ಓದುಗರ ಪತ್ರ
ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ, ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯ ೨೦೨೪-೨೫ನೇ ವಿತ್ತೀಯ ವರ್ಷದಲ್ಲಿ ದೇಶದ ಉಳಿದ ಎಲ್ಲಾ ರಾಜ್ಯಗಳನ್ನು ಮೀರಿಸಿದೆ ಎಂಬ ವಿಚಾರವನ್ನು ಲೋಕಸಭೆಯಲ್ಲಿ ಮಂಡಿಸಲಾಗಿರುವ ಕೇಂದ್ರ ಹಣಕಾಸು ಇಲಾಖೆಯ ಅಂಕಿ ಅಂಶಗಳು ಸ್ಪಷ್ಟಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯ ಸರ್ಕಾರದ ತಲಾ ಆದಾಯ ಒಟ್ಟಾರೆ ರಾಜ್ಯ ಆಂತರಿಕ ಉತ್ಪನ್ನವು (ಎನ್ಎಸ್ ಡಿಪಿ) ರೂ.೨,೦೪,೬೦೫.೦೦ಗೆ ತಲುಪಿದ್ದು, ೨೦೧೪-೧೫ ರಲ್ಲಿದ್ದ ರೂ. ೧,೦೫,೬೯೭ ಮೀರಿಸಿ, ಶೇ. ೯೩.೬ ರಷ್ಟು ಬೆಳವಣಿಗೆ ಕಂಡಿದೆ. ಈ ರೀತಿ ರಾಜ್ಯದ ಜನರ ಆದಾಯವು ಗಣನೀಯವಾಗಿ ಏರಿಕೆ ಕಂಡಿರುವುದನ್ನು ಕೇಂದ್ರ ಸರ್ಕಾರದ ವಿತ್ತ ಸಚಿವಾಲಯವೇ ಹೇಳಿದೆ. ಕಳೆದ ಒಂದು ದಶಕದಲ್ಲಿ ರಾಜ್ಯದ ಆದಾಯವು ಬಹುತೇಕ ದ್ವಿಗುಣ ಗೊಂಡಿದೆಯೆಂದು ವಿತ್ತ ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರ್ಥಿಕ ಆರೋಗ್ಯದ ಬಗ್ಗೆ ವಿರೋಧ ಪಕ್ಷಗಳ ಟೀಕೆ-ಟಿಪ್ಪಣಿಗಳು ವಸ್ತು ನಿಷ್ಠವಾಗಿರದೇ ರಾಜಕೀಯ ಪ್ರೇರಿತವಾಗಿವೆ ಎಂದು ಭಾವಿಸಬಹುದಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…