‘ಆಂದೋಲನ’ದೊಂದಿಗೆ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ಪ್ರವಾಸಿಗರು
ಮೈಸೂರು: ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರವೇಶ ದರ ಪರಿಷ್ಕರಣೆ ಮಾಡುವ ಕುರಿತು ಸರ್ಕಾರದಿಂದ ಆದೇಶವಾಗಿದ್ದು, ಮೃಗಾಲಯ ಪ್ರಾಧಿಕಾರ ಈ ಕುರಿತು ಈಗಾಗಲೇ ಕ್ರಮಕೈಗೊಂಡಿದೆ. ಮೃಗಾಲಯದ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಲು ನಿರ್ಧಾರ ಕೈಗೊಂಡಿದ್ದು, ಆ.೧ರಿಂದ ಅಧಿಕೃತವಾಗಿ ಹೊಸ ದರ ಜಾರಿಗೆ ಬರಲಿದೆ. ಮೃಗಾಲಯ ಪ್ರಾಧಿಕಾರದ ಈ ತೀರ್ಮಾನದ ಬಗ್ಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಸಂಬಂಧ ‘ಆಂದೋಲನ’ದೊಂದಿಗೆ ಪ್ರವಾಸಿಗರು, ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
” ಈಗಿನ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹಣ ತುಂಬಿಸಲು ಮೃಗಾಲಯ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಿದೆ. ಇದು ಸರಿಯಲ್ಲ.”
-ಮೀನಾಕ್ಷಿ ಕುಮಾರ್, ದಟ್ಟಗಳ್ಳಿ, ಮೈಸೂರು
” ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮತು ಹೊರ ರಾಜ್ಯಗಳಿಂದ ಮೃಗಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಹಾಗಾಗಿ ದಸರಾ ಸಮಯ ಬಿಟ್ಟು ಬೇರೆ ದಿನಗಳಲ್ಲಿ ಅದರ ಬಗ್ಗೆ ಚರ್ಚಿಸಿ ದರ ಹೆಚ್ಚಿಸಬೇಕೋ ಬೇಡವೋ ಎಂಬುದರ ಬಗ್ಗೆ ಗಮನಹರಿಸಲಿ.”
-ಶಿಲ್ಪಶ್ರೀ ಬೈಸಾನಿ
” ದಸರಾ ಮಹೋತ್ಸವದ ವೇಳೆ ಮೃಗಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಿರುತ್ತದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿರುವುದು ಒಂದೆಡೆಯಾದರೆ, ನಿರ್ವಹಣೆ ವೆಚ್ಚದ ನೆಪವೊಡ್ಡಿ ಮೃಗಾಲಯ ಪ್ರವೇಶ ದರ ಏರಿಕೆ ಮಾಡಿರುವುದು ಸರಿಯಲ್ಲ.”
-ಶಶಿಕಲಾ, ವಿಜಯನಗರ
” ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ, ಮತ್ತೊಂದೆಡೆ ಮೃಗಾಲಯದ ಪ್ರವೇಶ ದರವನ್ನೂ ಹೆಚ್ಚು ಮಾಡಿರುವುದರಿಂದ ರಾಜ್ಯ ಸರ್ಕಾರ ಪ್ರವಾಸಿಗರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಅಧಿಕಾರಿಗಳು ಎಚ್ಚೆತ್ತುಕೊಂಡರೆ ಒಳಿತು.”
-ಸಿದ್ದರಾಜು, ಎಚ್.ಡಿ.ಕೋಟೆ
” ಮೃಗಾಲಯ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಅರಮನೆ, ಕಾರಂಜಿಕೆರೆ ಹಾಗೂ ಮೃಗಾಲಯ ವೀಕ್ಷಿಸುವವರ ಜೇಬಿಗೆ ಕತ್ತರಿ ಬೀಳುವುದು ನಿಶ್ಚಿತವಾಗಿದೆ. ದರ ಹೆಚ್ಚಳ ಖಂಡನೀಯ.”
-ಪ್ರಸನ್ನ ಸಂತೇಕಡೂರು, ಜೆ.ಪಿ.ನಗರ
” ಜನರಿಗೆ ರಾಜ್ಯ ಸರ್ಕಾರದ ಸಾಲು ಸಾಲು ದರ ಏರಿಕೆ ಬಿಸಿ ತಟ್ಟುತ್ತಿದೆ. ಬಸ್ ಟಿಕೆಟ್ ದರ, ನಂದಿನಿ ಹಾಲಿನ ದರ, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ಮೃಗಾಯಲ ಪ್ರವೇಶ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ”
-ಲಿಖಿತ್ರಾಜ್ ಅರಸ್, ಅರಕಲಗೂಡು
” ಮೈಸೂರು ಮೃಗಾಲಯದ ಆದಾಯ ಉತ್ತಮವಾಗಿದ್ದರೂ ಪ್ರವೇಶ ದರ ಏರಿಕೆಯಿಂದ ಪ್ರವಾಸಿಗರಿಗೆ ಹೊರೆಯಾಗಲಿದೆ. ಇದರಿಂದ ಮೃಗಾಲಯಕ್ಕೆ ಭೇಟಿ ನೀಡುವವವರ ಸಂಖ್ಯೆಯ ಮೇಲೂ ಪರಿಣಾಮ ಬೀರಲಿದೆ.”
-ಮಲ್ಲಮ್ಮ, ಎರಡನೇ ಹಂತ, ವಿಜಯನಗರ
” ಮೃಗಾಲಯ ಪ್ರಾಣಿಗಳ ನಿರ್ವಹಣೆಗೆ ಸರ್ಕಾರ ಅನುದಾನ ನೀಡಬೇಕು. ಆದರೆ, ಸರ್ಕಾರದ ಬಳಿ ಹಣವಿಲ್ಲ, ಇದನ್ನು ಸರಿದೂಗಿಸಲು ಪ್ರವೇಶ ದರ ಏರಿಕೆ ಮಾಡಿರುವುದು ಪ್ರಾಣಿಗಳನ್ನು ನೋಡಲು ಬರುವವರ ಆಸೆಗೆ ತಣ್ಣೀರು ಎರಚಿದಂತಾಗುತ್ತದೆ.”
-ಇಂದ್ರಾಣಿ, ಗಿರಿದರ್ಶಿನಿ ಬಡಾವಣೆ
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…