Andolana originals

ಮೃಗಾಲಯ ಪ್ರವೇಶ ದರ ಹೆಚ್ಚಳಕ್ಕೆ ವಿರೋಧ

‘ಆಂದೋಲನ’ದೊಂದಿಗೆ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ಪ್ರವಾಸಿಗರು

ಮೈಸೂರು: ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರವೇಶ ದರ ಪರಿಷ್ಕರಣೆ ಮಾಡುವ ಕುರಿತು ಸರ್ಕಾರದಿಂದ ಆದೇಶವಾಗಿದ್ದು, ಮೃಗಾಲಯ ಪ್ರಾಧಿಕಾರ ಈ ಕುರಿತು ಈಗಾಗಲೇ ಕ್ರಮಕೈಗೊಂಡಿದೆ. ಮೃಗಾಲಯದ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಲು ನಿರ್ಧಾರ ಕೈಗೊಂಡಿದ್ದು, ಆ.೧ರಿಂದ ಅಧಿಕೃತವಾಗಿ ಹೊಸ ದರ ಜಾರಿಗೆ ಬರಲಿದೆ. ಮೃಗಾಲಯ ಪ್ರಾಧಿಕಾರದ ಈ ತೀರ್ಮಾನದ ಬಗ್ಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಸಂಬಂಧ ‘ಆಂದೋಲನ’ದೊಂದಿಗೆ ಪ್ರವಾಸಿಗರು, ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

” ಈಗಿನ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹಣ ತುಂಬಿಸಲು ಮೃಗಾಲಯ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಿದೆ. ಇದು ಸರಿಯಲ್ಲ.”

-ಮೀನಾಕ್ಷಿ ಕುಮಾರ್, ದಟ್ಟಗಳ್ಳಿ, ಮೈಸೂರು

” ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮತು ಹೊರ ರಾಜ್ಯಗಳಿಂದ ಮೃಗಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಹಾಗಾಗಿ ದಸರಾ ಸಮಯ ಬಿಟ್ಟು ಬೇರೆ ದಿನಗಳಲ್ಲಿ ಅದರ ಬಗ್ಗೆ ಚರ್ಚಿಸಿ ದರ ಹೆಚ್ಚಿಸಬೇಕೋ ಬೇಡವೋ ಎಂಬುದರ ಬಗ್ಗೆ ಗಮನಹರಿಸಲಿ.”

-ಶಿಲ್ಪಶ್ರೀ ಬೈಸಾನಿ

” ದಸರಾ ಮಹೋತ್ಸವದ ವೇಳೆ ಮೃಗಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಿರುತ್ತದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿರುವುದು ಒಂದೆಡೆಯಾದರೆ, ನಿರ್ವಹಣೆ ವೆಚ್ಚದ ನೆಪವೊಡ್ಡಿ ಮೃಗಾಲಯ ಪ್ರವೇಶ ದರ ಏರಿಕೆ ಮಾಡಿರುವುದು ಸರಿಯಲ್ಲ.”

-ಶಶಿಕಲಾ, ವಿಜಯನಗರ

” ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ, ಮತ್ತೊಂದೆಡೆ ಮೃಗಾಲಯದ ಪ್ರವೇಶ ದರವನ್ನೂ ಹೆಚ್ಚು ಮಾಡಿರುವುದರಿಂದ ರಾಜ್ಯ ಸರ್ಕಾರ ಪ್ರವಾಸಿಗರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಅಧಿಕಾರಿಗಳು ಎಚ್ಚೆತ್ತುಕೊಂಡರೆ ಒಳಿತು.”

-ಸಿದ್ದರಾಜು, ಎಚ್.ಡಿ.ಕೋಟೆ

” ಮೃಗಾಲಯ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಅರಮನೆ, ಕಾರಂಜಿಕೆರೆ ಹಾಗೂ ಮೃಗಾಲಯ ವೀಕ್ಷಿಸುವವರ ಜೇಬಿಗೆ ಕತ್ತರಿ ಬೀಳುವುದು ನಿಶ್ಚಿತವಾಗಿದೆ. ದರ ಹೆಚ್ಚಳ ಖಂಡನೀಯ.”

-ಪ್ರಸನ್ನ ಸಂತೇಕಡೂರು, ಜೆ.ಪಿ.ನಗರ

” ಜನರಿಗೆ ರಾಜ್ಯ ಸರ್ಕಾರದ ಸಾಲು ಸಾಲು ದರ ಏರಿಕೆ ಬಿಸಿ ತಟ್ಟುತ್ತಿದೆ. ಬಸ್ ಟಿಕೆಟ್ ದರ, ನಂದಿನಿ ಹಾಲಿನ ದರ, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ಮೃಗಾಯಲ ಪ್ರವೇಶ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ”

-ಲಿಖಿತ್‌ರಾಜ್ ಅರಸ್, ಅರಕಲಗೂಡು

” ಮೈಸೂರು ಮೃಗಾಲಯದ ಆದಾಯ ಉತ್ತಮವಾಗಿದ್ದರೂ ಪ್ರವೇಶ ದರ ಏರಿಕೆಯಿಂದ ಪ್ರವಾಸಿಗರಿಗೆ ಹೊರೆಯಾಗಲಿದೆ. ಇದರಿಂದ ಮೃಗಾಲಯಕ್ಕೆ ಭೇಟಿ ನೀಡುವವವರ ಸಂಖ್ಯೆಯ ಮೇಲೂ ಪರಿಣಾಮ ಬೀರಲಿದೆ.”

-ಮಲ್ಲಮ್ಮ, ಎರಡನೇ ಹಂತ, ವಿಜಯನಗರ

” ಮೃಗಾಲಯ ಪ್ರಾಣಿಗಳ ನಿರ್ವಹಣೆಗೆ ಸರ್ಕಾರ ಅನುದಾನ ನೀಡಬೇಕು. ಆದರೆ, ಸರ್ಕಾರದ ಬಳಿ ಹಣವಿಲ್ಲ, ಇದನ್ನು ಸರಿದೂಗಿಸಲು ಪ್ರವೇಶ ದರ ಏರಿಕೆ ಮಾಡಿರುವುದು ಪ್ರಾಣಿಗಳನ್ನು ನೋಡಲು ಬರುವವರ ಆಸೆಗೆ ತಣ್ಣೀರು ಎರಚಿದಂತಾಗುತ್ತದೆ.”

-ಇಂದ್ರಾಣಿ, ಗಿರಿದರ್ಶಿನಿ ಬಡಾವಣೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 hours ago