Andolana originals

ಮೃಗಾಲಯ ಪ್ರವೇಶ ದರ ಹೆಚ್ಚಳಕ್ಕೆ ವಿರೋಧ

‘ಆಂದೋಲನ’ದೊಂದಿಗೆ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ಪ್ರವಾಸಿಗರು

ಮೈಸೂರು: ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರವೇಶ ದರ ಪರಿಷ್ಕರಣೆ ಮಾಡುವ ಕುರಿತು ಸರ್ಕಾರದಿಂದ ಆದೇಶವಾಗಿದ್ದು, ಮೃಗಾಲಯ ಪ್ರಾಧಿಕಾರ ಈ ಕುರಿತು ಈಗಾಗಲೇ ಕ್ರಮಕೈಗೊಂಡಿದೆ. ಮೃಗಾಲಯದ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಲು ನಿರ್ಧಾರ ಕೈಗೊಂಡಿದ್ದು, ಆ.೧ರಿಂದ ಅಧಿಕೃತವಾಗಿ ಹೊಸ ದರ ಜಾರಿಗೆ ಬರಲಿದೆ. ಮೃಗಾಲಯ ಪ್ರಾಧಿಕಾರದ ಈ ತೀರ್ಮಾನದ ಬಗ್ಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಸಂಬಂಧ ‘ಆಂದೋಲನ’ದೊಂದಿಗೆ ಪ್ರವಾಸಿಗರು, ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

” ಈಗಿನ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಿಸಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹಣ ತುಂಬಿಸಲು ಮೃಗಾಲಯ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಿದೆ. ಇದು ಸರಿಯಲ್ಲ.”

-ಮೀನಾಕ್ಷಿ ಕುಮಾರ್, ದಟ್ಟಗಳ್ಳಿ, ಮೈಸೂರು

” ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮತು ಹೊರ ರಾಜ್ಯಗಳಿಂದ ಮೃಗಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಹಾಗಾಗಿ ದಸರಾ ಸಮಯ ಬಿಟ್ಟು ಬೇರೆ ದಿನಗಳಲ್ಲಿ ಅದರ ಬಗ್ಗೆ ಚರ್ಚಿಸಿ ದರ ಹೆಚ್ಚಿಸಬೇಕೋ ಬೇಡವೋ ಎಂಬುದರ ಬಗ್ಗೆ ಗಮನಹರಿಸಲಿ.”

-ಶಿಲ್ಪಶ್ರೀ ಬೈಸಾನಿ

” ದಸರಾ ಮಹೋತ್ಸವದ ವೇಳೆ ಮೃಗಾಲಯಕ್ಕೆ ಬರುವವರ ಸಂಖ್ಯೆ ಹೆಚ್ಚಿರುತ್ತದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿರುವುದು ಒಂದೆಡೆಯಾದರೆ, ನಿರ್ವಹಣೆ ವೆಚ್ಚದ ನೆಪವೊಡ್ಡಿ ಮೃಗಾಲಯ ಪ್ರವೇಶ ದರ ಏರಿಕೆ ಮಾಡಿರುವುದು ಸರಿಯಲ್ಲ.”

-ಶಶಿಕಲಾ, ವಿಜಯನಗರ

” ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ, ಮತ್ತೊಂದೆಡೆ ಮೃಗಾಲಯದ ಪ್ರವೇಶ ದರವನ್ನೂ ಹೆಚ್ಚು ಮಾಡಿರುವುದರಿಂದ ರಾಜ್ಯ ಸರ್ಕಾರ ಪ್ರವಾಸಿಗರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಅಧಿಕಾರಿಗಳು ಎಚ್ಚೆತ್ತುಕೊಂಡರೆ ಒಳಿತು.”

-ಸಿದ್ದರಾಜು, ಎಚ್.ಡಿ.ಕೋಟೆ

” ಮೃಗಾಲಯ ಪ್ರವೇಶ ದರವನ್ನು ಶೇ.೨೦ರಷ್ಟು ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಅರಮನೆ, ಕಾರಂಜಿಕೆರೆ ಹಾಗೂ ಮೃಗಾಲಯ ವೀಕ್ಷಿಸುವವರ ಜೇಬಿಗೆ ಕತ್ತರಿ ಬೀಳುವುದು ನಿಶ್ಚಿತವಾಗಿದೆ. ದರ ಹೆಚ್ಚಳ ಖಂಡನೀಯ.”

-ಪ್ರಸನ್ನ ಸಂತೇಕಡೂರು, ಜೆ.ಪಿ.ನಗರ

” ಜನರಿಗೆ ರಾಜ್ಯ ಸರ್ಕಾರದ ಸಾಲು ಸಾಲು ದರ ಏರಿಕೆ ಬಿಸಿ ತಟ್ಟುತ್ತಿದೆ. ಬಸ್ ಟಿಕೆಟ್ ದರ, ನಂದಿನಿ ಹಾಲಿನ ದರ, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ಮೃಗಾಯಲ ಪ್ರವೇಶ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ”

-ಲಿಖಿತ್‌ರಾಜ್ ಅರಸ್, ಅರಕಲಗೂಡು

” ಮೈಸೂರು ಮೃಗಾಲಯದ ಆದಾಯ ಉತ್ತಮವಾಗಿದ್ದರೂ ಪ್ರವೇಶ ದರ ಏರಿಕೆಯಿಂದ ಪ್ರವಾಸಿಗರಿಗೆ ಹೊರೆಯಾಗಲಿದೆ. ಇದರಿಂದ ಮೃಗಾಲಯಕ್ಕೆ ಭೇಟಿ ನೀಡುವವವರ ಸಂಖ್ಯೆಯ ಮೇಲೂ ಪರಿಣಾಮ ಬೀರಲಿದೆ.”

-ಮಲ್ಲಮ್ಮ, ಎರಡನೇ ಹಂತ, ವಿಜಯನಗರ

” ಮೃಗಾಲಯ ಪ್ರಾಣಿಗಳ ನಿರ್ವಹಣೆಗೆ ಸರ್ಕಾರ ಅನುದಾನ ನೀಡಬೇಕು. ಆದರೆ, ಸರ್ಕಾರದ ಬಳಿ ಹಣವಿಲ್ಲ, ಇದನ್ನು ಸರಿದೂಗಿಸಲು ಪ್ರವೇಶ ದರ ಏರಿಕೆ ಮಾಡಿರುವುದು ಪ್ರಾಣಿಗಳನ್ನು ನೋಡಲು ಬರುವವರ ಆಸೆಗೆ ತಣ್ಣೀರು ಎರಚಿದಂತಾಗುತ್ತದೆ.”

-ಇಂದ್ರಾಣಿ, ಗಿರಿದರ್ಶಿನಿ ಬಡಾವಣೆ

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

4 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

5 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

9 hours ago