Andolana originals

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು

• ಕಾಂಗೀರ ಬೋಪಣ್ಣ

ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು ತಂದೊಡ್ಡುತ್ತದೆ ಎಂಬ ಕಾರಣಕ್ಕೆ ಸ್ಥಗಿತಗೊಂಡಿದ್ದ ಗಣಿಗಾರಿಕೆಯನ್ನು ಮತ್ತೆ ಆರಂಭಿಸುವ ಹುನ್ನಾರ ನಡೆಯುತ್ತಿದ್ದು, ಗಣಿಗಾರಿಕೆ ಆರಂಭಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ ತಾಲ್ಲೂಕಿನ ಅರಮೇರಿಮತ್ತು ಕಡಂಗಮೂರುರು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಅರಮೇರಿ ಮತ್ತು ಕಡಂಗಮೂರುರು ಗ್ರಾಮಗಳ ಗಡಿಯಂಚಿನ ಸರ್ವೆ ನಂ. 343ರ 4.50 ಎಕರೆ ಪ್ರದೇಶದಲ್ಲಿ ಹಲವು ವರ್ಷಗಳ ಹಿಂದೆ ಕಲ್ಲು ಗಣಿಗಾರಿಕೆ ನಡೆದಿತ್ತು. ನಂತರದ ದಿನಗಳಲ್ಲಿ ಗ್ರಾಮಸ್ಥರ ವಿರೋಧದ ಹಿನ್ನೆಲೆಯಲ್ಲಿ ಗಣಿಗಾರಿಕೆ ಸ್ತಗಿತಗೊಂಡಿತ್ತು. ಮತ್ತೆ 2022ರಲ್ಲಿ ಕೆಲವು ಪ್ರಭಾವಿಗಳು ಇದನ್ನು ಸಕ್ರಿಯಗೊಳಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಕೊಂಡಿದ್ದಾರೆ. 2024ರಲ್ಲಿ ಇಲ್ಲಿ ಕ್ರಷರ್ ಸ್ಥಾಪಿಸಿ ಬೃಹತ್ ಗಣಿಗಾರಿಕೆ ನಡೆಸಲು ಯತ್ನಿಸಿದ್ದಾರೆ.

ಇದಕ್ಕೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ, ಜಿಲ್ಲಾಡಳಿತ, ಅರಣ್ಯ ಇಲಾಖೆ, ಕಂದಾಯ ಇಲಾಖೆಗೆ ದೂರು ಸಲ್ಲಿಸಿದರೂ ಇಲ್ಲಿ ಗಣಿಗಾರಿಕೆ ಆರಂಭಿಸಲಾಗಿತ್ತು. ಕೆಲ ಸಮಯ ನಡೆದ ಗಣಿಗಾರಿಕೆಯಿಂದ ಸ್ಥಳೀಯರಿಗೆ ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಸ್ಥಳೀಯ ಶಾಸಕ ಎ.ಎಸ್.ಪೊನ್ನಣ್ಣ, ಸ್ಥಗಿತಕ್ಕೆ ಸೂಚಿಸಿದ ಪರಿಣಾಮ ಗಣಿಗಾರಿಕೆ ಸದ್ಯಕ್ಕೆ ನಿಂತಿದೆ. ಆದರೂ ತೆರೆಮರೆಯಲ್ಲಿ ಇದನ್ನು ಮತ್ತೆ ಆರಂಭಿಸಲು ಇನ್ನಿಲ್ಲದ ಕಸರತ್ತು ನಡೆಯುತ್ತಿದೆ.

ಇದಕ್ಕೆ ಪೂರಕವಾಗಿ ಸದನದಲ್ಲಿ ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯರೊಬ್ಬರು ಕೊಡಗು ಜಿಲ್ಲೆಯಲ್ಲಿ ಗಣಿಗಾರಿಕೆಯ ನಿಯಮಗಳನ್ನು ಸಡಿಲಿಸಬೇಕು, ವಸತಿ ಪ್ರದೇಶಗಳ ಇರುವಿಕೆಯ ಅಂತರವನ್ನು 500 ಮೀ.ನಿಂದ 100 ಮೀ.ಗೆ ಕಡಿಮೆ ಮಾಡಬೇಕೆಂದು ಪ್ರಸ್ತಾಪಿಸಿದ್ದರು. ಇದರ ಹಿಂದೆ ಗಣಿಗಾರಿಕೆ ಮತ್ತೆ ಆರಂಭಿಸುವ ಹುನ್ನಾರವಿದ್ದು, ಯಾವುದೇ ಕಾರಣಕ್ಕೂ ಗಣಿಗಾರಿಕೆ ಆರಂಭಿಸಬಾರದು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸದ್ಯ ಎರಡೂ ಗ್ರಾಮಗಳಲ್ಲಿ ಪೂಳಂಡ, ಬಲ್ಯಂಡ, ಕೋದಂಡ, ಚೋಳಂಡ ಬಲಟಿಕಾಳಂಡ ಮತ್ತು ತೆಲಗು ಬಣಜಿಗರ ಕುಟುಂಬದವರು ಹಾಗೂ ಇತರ ಗ್ರಾಮಗಳ ನಿವಾಸಿಗಳು ಗಣಿಗಾರಿಕೆ ನಡೆಸದಂತೆ ಹೋರಾಟ ನಡೆಸುತ್ತಿದ್ದಾರೆ. ಇವರ ಹೋರಾಟಕ್ಕೆ ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಕೊಡಗು ಏಕೀಕರಣ ರಂಗದಿಂದಲೂ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ.

ಒಟ್ಟಾರೆ ಸ್ಥಳೀಯರ ಹೆಸರಿನಲ್ಲಿ ಅನುಮತಿ ಪಡೆದು, ಕೇರಳ ರಾಜ್ಯದ ಪ್ರಭಾವಿಗಳು ಹಣ ಗಳಿಸುವ ಹುನ್ನಾರ ಇದರಲ್ಲಿದೆ. ಒಂದು ವೇಳೆ ಗಣಿಗಾರಿಕೆ ಆರಂಭ ಗೊಂಡರೆ, ಮನೆಗಳು ಮತ್ತು ಕೃಷಿ ಭೂಮಿಗೆ ಮುಳುವಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗಣಿಗಾರಿಕೆಯಿಂದ ಅಪಾಯ ನಿಶ್ಚಿತ..!
ನಿಯಮದಂತೆ 500 ಮೀ ವ್ಯಾಪ್ತಿಯಲ್ಲಿ ಎರಡು ಗ್ರಾಮಗಳೂ ಸೇರಿ ಸುಮಾರು 50 ಮನೆಗಳು ಹಾಗೂ ಕೃಷಿ ಭೂಮಿ ಇದ್ದು, ಸ್ಫೋಟದಿಂದ ಮತ್ತು ಗಣಿಗಾರಿಕೆಯ ದೂಳಿನಿಂದ ವ್ಯಾಪಕ ಹಾನಿ ಹಾಗೂ ಜಲ ಮೂಲ, ಪ್ರಾಣಿ ಸಂಕುಲಕ್ಕೆ ಅಪಾಯ ನಿಶ್ಚಿತ. ಹೀಗಿದ್ದರೂ ತಮ್ಮ ಸ್ವಾರ್ಥಕ್ಕಾಗಿ ಕೆಲವರು ಗಣಿಗಾರಿಕೆಗೆ ಯತ್ನ ನಡೆಸಿರುವುದರ ವಿರುದ್ದ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಣಿಗಾರಿಕೆಯನ್ನು ಮತ್ತೆ ಆರಂಭಿಸಬಾರದು ಎಂದಿರುವ ಗ್ರಾಮಸ್ಥರು, ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

10 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago