Andolana originals

ಆದಿವಾಸಿಗಳ ಕಾಲೋನಿಯಲ್ಲಿ ಮದ್ಯ ನಿಷೇಧಕ್ಕೆ ಆದೇಶ

ಶ್ರೀಧರ್ ಆರ್ ಭಟ್

ನಂಜನಗೂಡು: ಆದಿವಾಸಿಗಳ ಕಾಲೋನಿಯಲ್ಲಿ ಮದ್ಯ ದೊರಕದಂತೆ ನೋಡಿಕೊಳ್ಳುವುದು ಅಬಕಾರಿ ಇಲಾಖಾ ಅಧಿಕಾರಿಗಳು ಹಾಗೂ ತಾಲ್ಲೂಕಿನ ಅಬಕಾರಿ ಸನ್ನದುದಾರರ ಕರ್ತವ್ಯವಾಗಿದೆ. ಆದಿವಾಸಿಗಳ ಕಾಲೋನಿಯಲ್ಲಿ ಮದ್ಯ ಕಂಡು ಬಂದರೆ ಅದಕ್ಕೆ ಅಧಿಕಾರಿಗಳು ಹಾಗೂ ಸನ್ನದುದಾರರೇ ಹೊಣೆ ಎಂದು ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತರಾದ ಮಹದೇವಿ ಬಾಯಿ ಎಚ್ಚರಿಕೆ ನೀಡಿದರು.

ಏ.೧ರ ಮಂಗಳವಾರದ ‘ಆಂದೋಲನ’ ದಿನಪತ್ರಿಕೆಯ ಮುಖಪುಟದಲ್ಲಿ ‘ಅಕ್ರಮ ಮದ್ಯ ಸೇವಿಸಿ ಆದಿವಾಸಿ ವ್ಯಕ್ತಿ ಸಾವು’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.

ಈ ಸಂಬಂಧ ನಂಜನಗೂಡು ಅಬಕಾರಿ ಇಲಾಖೆಯ ಕಾರ್ಯಾಲಯದಲ್ಲಿ ಗುರುವಾರ ಅಽಕಾರಿಗಳು, ಅಬಕಾರಿ ಮಾರಾಟದ ಸನ್ನದುದಾರರ ಸಭೆ ನಡೆಸಿ ಅವರು ಮಾತನಾಡಿದರು.

ತಾಲ್ಲೂಕಿನ ನಾಗಣಾಪುರದ ಆದಿವಾಸಿ ಕಾಲೋನಿಯಲ್ಲಿ ನಡೆದ ಘಟನೆಯು ಇಲಾಖೆ ತಲೆ ತಗ್ಗಿಸ ಬೇಕಾದ ವಿಷಯವಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡಲು ತಾಲ್ಲೂಕಿನ ಸನ್ನದುದಾರರೇ ಕಾರಣ ಎಂದು ಹೇಳಿದರು.

ಹಳ್ಳಿಗಳಲ್ಲಿರುವ ಪೆಟ್ಟಿಗೆ ಅಂಗಡಿ ಮತ್ತು ಕಿರಾಣಿ ಅಂಗಡಿಗಳಲ್ಲಿ ಕಂಡು ಬಂದ ಮದ್ಯದ ಬಾಟಲಿಗಳು ಹಾಗೂ ಮದ್ಯದ ಪ್ಯಾಕೇಟ್‌ಗಳು ಯಾವ ಸನ್ನದುದಾರರಿಂದ ಮಾರಾಟವಾದದ್ದು ಎಂಬುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾಮೀಣ ಪ್ರದೇಶದ ಅಂಗಡಿಗಳಲ್ಲಿ ಮದ್ಯ ಮಾರಾಟವಾಗದಂತೆ ಹಾಗೂ ಆದಿವಾಸಿಗಳ ಕೈ ಸೇರದಂತೆ ನೋಡಿಕೊಳ್ಳಬೇಕಾಗಿರುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.

ನಾಗಣಾಪುರದಲ್ಲಿ ಆದಿವಾಸಿ ರಾಜು ಎಂಬವರು ಅಕ್ರಮ ಮದ್ಯ ಸೇವಿಸಿ ಸಾವೀಗೀಡಾದ ಬಗ್ಗೆ ಇಲಾಖೆ ತನಿಖೆ ಆರಂಭಿಸಿದ್ದು, ಅಲ್ಲಿ ದೊರಕಿರುವ ಮದ್ಯದ ಕುರುಹುಗಳ ಜಾಡನ್ನು ಹಿಡಿದು ತಪ್ಪಿತಸ್ಥರನ್ನು ಜೈಲಿಗೆ ಕಳಿಸುವವರೆಗೂ ನಾವು ಬಿಡುವುದಿಲ್ಲ ಎಂದು ಅಧಿಕಾರಿಗಳು ಹಾಗೂ ಮಾರಾಟಗಾರರನ್ನು ಕಟುಕಿದರು.

ತಾಲ್ಲೂಕಿನ ಅಕ್ರಮ ಮದ್ಯ ಮಾರಾಟದ ತಡೆಗಾಗಿ ಈಗಾಗಲೇ ಮೂರು ತಂಡಗಳನ್ನು ರಚಿಸಲಾಗಿದ್ದು, ರಾತ್ರಿ ಹಾಗೂ ಬೆಳಗಿನ ಜಾವವೇ ಹಿಂಬದಿಯ ಬಾಗಿಲು ತೆರೆಯುವ ಮದ್ಯದಂಗಡಿಗಳು ಹಾಗೂ ಬಾರ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಈ ತಂಡಗಳ ಜವಾಬ್ದಾರಿಯಾಗಿದೆ ಎಂದರು.

ತಾಲ್ಲೂಕಿನ ಬಹುತೇಕ ಮದ್ಯ ಮಾರಾಟದ ಸನ್ನದುದಾರರು ಹಾಗೂ ಅಬಕಾರಿ ಉಪ ಅಧಿಕ್ಷಕ ನಟರಾಜ, ವಲಯ ನಿರೀಕ್ಷಕ ನಾಗೇಂದ್ರ, ಉಪ ನಿರೀಕ್ಷಕ ಅಬ್ದುಲ್, ಚಂದ್ರು, ಅಭಿ, ಮಧುಖೇಶ, ಶಿಲ್ಪಾ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

” ನಂಜನಗೂಡು ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟವನ್ನು ನಿಯಂತ್ರಿಸಲು ಈಗಾಗಲೇ ಮೂರು ತಂಡಗಳನ್ನು ನೇಮಿಸಲಾಗಿದ್ದು, ಸದ್ಯದಲ್ಲೇ ಇನ್ನೆರಡು ತಂಡಗಳನ್ನು ರಚಿಸಲಾಗುವುದು. ಅಕ್ರಮ ಮದ್ಯ ಮಾರಾಟ ತಾಲ್ಲೂಕಿನಲ್ಲಿ ಎಲ್ಲೇ ಕಂಡು ಬಂದರೂ ಸಾರ್ವಜನಿಕರು ದೂರವಾಣಿ ಸಂಖ್ಯೆ ೯೪೪೯೫೯೭೧೮೪ಅನ್ನು ಸಂಪರ್ಕಿಸಿ ದೂರು ನೀಡಿದರೆ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ.”

 -ಮಹದೇವಿ ತಾಯಿ, ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತರು

ಆಂದೋಲನ ಡೆಸ್ಕ್

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

34 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago