Andolana originals

ಅವಳಿ ತಾಲ್ಲೂಕುಗಳಲ್ಲಿ ಭತ್ತದ ನಾಟಿ ಶೇ.೮೦ರಷ್ಟು ಪೂರ್ಣ

ಭೇರ್ಯ ಮಹೇಶ್

ಈ ಬಾರಿ ಅಕ್ಕಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆ; ಟಿಲ್ಲರ್, ಟ್ರಾಕ್ಟರ್‌ಗೆ ಎಲ್ಲಿಲ್ಲದ ಬೇಡಿಕೆ

ಕೆ.ಆರ್.ನಗರ: ಭತ್ತದ ಕಣಜವೆಂದು ಪ್ರಸಿದ್ಧಿ ಪಡೆದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ನಾಟಿ ಕಾರ್ಯ ಚುರುಕುಗೊಂಡಿದ್ದು, ಶೇ.೮೦ರಷ್ಟು ಭತ್ತದ ನಾಟಿ ಕಾರ್ಯವನ್ನು ರೈತರು ಮುಗಿಸಿ ಸಂತಸದಲ್ಲಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ವ್ಯಾಪಕ ಮಳೆಯಾಗಿದ್ದು ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಜುಲೈ ತಿಂಗಳಲ್ಲಿ ಅವಳಿ ತಾಲ್ಲೂಕಿನ ಎಲ್ಲಾ ನಾಲೆಗಳಿಗೆ ನೀರು ಹರಿಸಲಾಗಿದ್ದು, ಕೊನೆಯ ಹಂತದವರೆಗೂ ನೀರು ಹರಿದಿದೆ. ರೈತರು ಭತ್ತದ ಸಸಿ ಮಡಿ ಕಾರ್ಯ ಮಾಡಿದ್ದು, ಈಗಾಗಲೇ ಭತ್ತದ ಪೈರು ಬಂದಿದೆ. ಅವಳಿ ತಾಲ್ಲೂಕುಗಳ ಎಲ್ಲೆಡೆ ಭತ್ತದ ನಾಟಿ ಕಾರ್ಯ ಜೋರಾಗಿದೆ.

ಟಿಲ್ಲರ್, ಟ್ರಾಕ್ಟರ್, ಎತ್ತು ಮತ್ತು ನೇಗಿಲು ಇತ್ಯಾದಿಗಳನ್ನು ಬಳಸಿ ರೈತರು ಭತ್ತದ ಗದ್ದೆ ಹದ ಮಾಡುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಟಿಲ್ಲರ್, ಟ್ರಾಕ್ಟರ್‌ಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಕಸಬಾ, ಹೊಸ ಅಗ್ರಹಾರ, ಹೆಬ್ಬಾಳು, ಚುಂಚನಕಟ್ಟೆ, ಸಾಲಿಗ್ರಾಮ, ಮಿರ್ಲೆ ಹೋಬಳಿ ಗಳಲ್ಲಿ ಭತ್ತದ ನಾಟಿ ಕಾರ್ಯವನ್ನು ರೈತರು ಮಾಡುತ್ತಿದ್ದಾರೆ. ಕಳೆದ ವರ್ಷ ಭತ್ತದ ಬೆಲೆ ಕುಸಿದಿತ್ತು. ಆದರೂ ಅಕ್ಕಿ ಬೆಲೆ ಹೆಚ್ಚಾಗಿದ್ದು, ಈ ಬಾರಿ ಕೂಡ ಅಕ್ಕಿಯ ಬೆಲೆ ಹೆಚ್ಚಾಗಬಹುದು ಎಂಬ ನಿರೀಕ್ಷೆ ಹೊಂದಿರುವ ರೈತರು ಉತ್ತಮ ಹೈಬ್ರೀಡ್ ಭತ್ತದ ತಳಿಯನ್ನು ಬಿತ್ತನೆ ಮಾಡಿದ್ದು, ಈಗಾಗಲೇ ಶೇ.೮೦ರಷ್ಟು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ.

ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಅಂದಾಜು ೨೫ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ನಿರೀಕ್ಷೆ ಹೊಂದಲಾಗಿದೆ.

ಕೃಷಿ ಇಲಾಖೆ ಸಜ್ಜು: ಈಗಾಗಲೇ ಕೃಷಿ ಇಲಾಖೆಯಿಂದ ರಸಗೊಬ್ಬರ, ಕೀಟನಾಶ ಕೀಟನಾಶಕದ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಜೆ. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಭತ್ತದ ನಾಟಿ ಮಾಡುವ ಮೊದಲು ೨೦-೨೦ ರಸ ಗೊಬ್ಬರ ಬಳಸುವಾಗ ಎಕರೆಗೆ ೧೫ ಕೆಜಿ ಪೊಟಾಷ್ ಹಾಗೂ ೮ ಕೆಜಿ ಜಿಂಕ್ ಸಲ್ಪೇಟ್ ಮಿಶ್ರಣ ಮಾಡಿ ಗದ್ದೆಗಳಲ್ಲಿ ಹಾಕಿ ಎಂದು ಸಲಹೆ ನೀಡಿದ್ದಾರೆ. ರೈತರು ತಪ್ಪದೇ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿ ಇದೇ ಆಗಸ್ಟ್ ೧೬ರಂದು ಭತ್ತದ ವಿಮೆ ಮಾಡಿಸಲು ಕೊನೆಯ ದಿನವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಲ್ಲೂಕಿನ ರಸಗೊಬ್ಬರ ಅಂಗಡಿಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಬೆಲೆ ಪಡೆಯದಂತೆ ಕ್ರಮ ವಹಿಸಲಾಗಿದೆ. ತಪ್ಪದೇ ಟ್ರೇಡರ್ಸ್ ಮಾಲೀಕರಿಂದ ಬಿಲ್ ಕೇಳಿ ಪಡೆಯಬೇಕು ಎಂದು ಕೃಷಿ ಇಲಾಖೆ ಜಾಗೃತಿ ಮೂಡಿಸಿದೆ.

ಯೂರಿಯಾ ದಾಸ್ತಾನು: ಅವಳಿ ತಾಲ್ಲೂಕುಗಳಲ್ಲಿ ಈಗಾಗಲೇ ಭತ್ತದ ನಾಟಿ ಮಾಡಲಾಗುತ್ತಿದ್ದು, ಆಗಸ್ಟ್ ಕೊನೆಯ ವಾರ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಯೂರಿಯಾ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಇದಕ್ಕೆ ತಕ್ಕಂತೆ ಯೂರಿಯಾ ಗೊಬ್ಬರ ದಾಸ್ತಾನು ಇದೆ. ಕೃಷಿ ಇಲಾಖೆಯ ಅಧಿಕಾರಿಗಳು ಯೂರಿಯಾ ಗೊಬ್ಬರದ ಅಭಾವ ಸೃಷ್ಟಿ ಮಾಡದಂತೆ ಟ್ರೇಡರ್ಸ್ ಮಾಲೀಕರೊಂದಿಗೆ ಈಗಾಗಲೇ ಸಭೆ ನಡೆಸಿ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

” ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಆದರೆ ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ನೀಡುವುದಿಲ್ಲ. ರೈತರು ಬಳಸುವ ರಸ ಗೊಬ್ಬರ, ಕ್ರಿಮಿನಾಶಕ ಔಷಧಗಳ ಬೆಲೆ ಏರಿಕೆಯಾಗಿದೆ. ಭತ್ತದ ನಾಟಿಗೆ ಕೂಲಿ ಕಾರ್ಮಿಕರ ವೆಚ್ಚ ಕೂಡ ಹೆಚ್ಚಾಗಿದ್ದು ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಆದ್ದರಿಂದ ಸರ್ಕಾರ ಈ ಬಾರಿ ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು.”

-ಜೆ.ಎಂ.ಕುಮಾರ್, ಗೌರವಾಧ್ಯಕ್ಷರು, ರೈತಪರ್ವ ಸಂಘ

” ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಹೀಗಾಗಿ, ಭತ್ತ ಬೆಳೆಯಲು ಆಸಕ್ತಿ ತೋರಿದ್ದೇನೆ. ಭತ್ತದ ಫಸಲು ಬರುವವರೆಗೂ ಸಮರ್ಪಕವಾಗಿ ನಾಲೆಯಿಂದ ನೀರು ಹರಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ಬೆಳೆ ಸಮೀಕ್ಷೆಯನ್ನು ಕಂದಾಯ ಇಲಾಖೆ ಅಽಕಾರಿಗಳಿಂದ ಮಾಡಿಸಬೇಕು. ಭತ್ತದ ಕಟಾವು ಮುನ್ನವೇ ಭತ್ತದ ಖರೀದಿ ಕೇಂದ್ರ ತೆರೆಯಬೇಕು. ಭತ್ತದ ಕಟಾವು ಮಾಡುವ ಯಂತ್ರಗಳಿಗೆ ದುಬಾರಿ ಹಣ ವಸೂಲಿ ಮಾಡುತ್ತಾರೆ. ಆದ್ದರಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಭತ್ತದ ಕಟಾವು ಯಂತ್ರಗಳಿಗೆ ನಿಗದಿ ದರವನ್ನು ಘೋಷಿಸಬೇಕು.”

-ಗಂಧನಹಳ್ಳಿ ಹೇಮಂತ್, ಪ್ರಗತಿಪರ ರೈತರು

ಆಂದೋಲನ ಡೆಸ್ಕ್

Recent Posts

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

18 mins ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

47 mins ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

2 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

2 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

3 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

3 hours ago