Andolana originals

ಸುಂದರ ಪರಿಸರದಲ್ಲಿರುವ ಪರಶುರಾಮ ದೇವಸ್ಥಾನ

ಆರ್.ಎಲ್.ಮಂಜುನಾಥ್‌ 

ನಂಜನಗೂಡು ಎಂದರೆ ತಕ್ಷಣ ಕಪಿಲಾ ನದಿ, ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ, ಇದೇ ಶ್ರೀಕಂಠೇಶ್ವರ ದೇವ ಸ್ಥಾನದ ಸಮೀಪವೇ ಮತ್ತೊಂದು ಪುರಾಣ ಪ್ರಸಿದ್ಧ ಚಿಕ್ಕ ದೇಗುಲವಿರುವುದು ಅನೇಕರಿಗೆ ಗೊತ್ತಿಲ್ಲ.

ಈ ದೇವಸ್ಥಾನ ಇರುವುದು ನಂಜನಗೂಡು- ಚಾಮರಾಜನಗರ ಹೆದ್ದಾರಿಯ ಸಮೀಪ. ನಂಜನಗೂಡು ಕಪಿಲಾ ನದಿಯ ಸ್ನಾನಘಟ್ಟದಿಂದ ಸುಮಾರು ೧ ಕಿ.ಮೀ. ದೂರದಲ್ಲಿರುವ ಈ ಗುಡಿಯ ಹೆಸರು ಪರಶುರಾಮ ದೇವಸ್ಥಾನ. ಸುತ್ತಲೂ ಹಸಿರಿನಿಂದ ಕಂಗೊಳಿಸುವ ಗದ್ದೆ ಬಯಲು, ಮರಗಿಡಗಳು, ದೇಗುಲದ ಪಕ್ಕವೇ ಹರಿಯುವ ಕಪಿಲಾ ನದಿಯ ನೀರಿನ ವೈಯ್ಯಾರ ಕಣ್ಣಿಗೆ, ಮನಸ್ಸಿಗೆ ತಂಪಿನ ಅನುಭವ ನೀಡುತ್ತದೆ.

ಐತಿಹ್ಯದ ಪ್ರಕಾರ ತನ್ನ ತಂದೆ ಜಮ ದಗ್ನಿಯ ಸೂಚನೆಯಂತೆ ತಾಯಿಯನ್ನು ಹತ್ಯೆಗೈದ ಪರಶು ರಾಮ. ಪಾಪ ಪರಿಹಾರಕ್ಕಾಗಿ ಇದೇ ಸ್ಥಳದಲ್ಲಿ ತಪಸ್ಸು ಮಾಡಿದ್ದ ಎಂಬ ನಂಬಿಕೆಯಿದೆ. ತಪಸ್ಸಿಗೆ ಒಲಿದ ನಂಜುಂಡೇಶ್ವರನು ತನಗೊಂದು ದೇವಸ್ಥಾನ ಕಟ್ಟಿಕೊಡುವಂತೆ ಕೇಳಿಕೊಂಡಿದ್ದನು. ನಂಜುಂಡೇಶ್ವರನ ಮಾತಿನಂತೆ ಪರಶುರಾಮನೇ ಇಲ್ಲಿನ ನಂಜುಂಡೇಶ್ವರನ ದೇಗುಲವನ್ನು ಕಟ್ಟಿಸಿದ ಎಂದು ಹೇಳಲಾಗುತ್ತದೆ.

ಪರಶುರಾಮ ಕ್ಷೇತ್ರದಲ್ಲಿ ತಮ್ಮ ಯಾವುದೇ ಕಷ್ಟ, ಸಮಸ್ಯೆಗಳು ಪರಿಹಾರವಾಗಬೇಕೆಂದುಭಕ್ತರು ಪ್ರಾರ್ಥಿಸಿಕೊಂಡು ಒಂದು ಬೆಲ್ಲ ಹಾಗೂ ಒಂದು ಹಿಡಿ ಉಪ್ಪನ್ನು ಕಪಿಲೆಯಲ್ಲಿ ಹಾಕಿದರೆ ಅವುಗಳು ನೀರಿನಲ್ಲಿ ಕರಗುವಂತೆ, ಅಂತೆಯೇ ಭಕ್ತರಿಗೆ ಎದುರಾದ ಕಷ್ಟಗಳೂ ಕರಗಿ ಹೋಗುತ್ತವೆ ಎಂಬ ನಂಬಿಕೆ ಇದ್ದು, ಪ್ರತಿನಿತ್ಯ ನೂರಾರು ಜನರು ಇಲ್ಲಿಗೆ ಆಗಮಿಸಿ ಪ್ರಾರ್ಥಿಸಿಕೊಳ್ಳುತ್ತಾರೆ.

ಮಾಹಿತಿ ಫಲಕ ಅಳವಡಿಸಬೇಕು: 

ಪರಶುರಾಮ ದೇವಸ್ಥಾನ ಬಗ್ಗೆ ಬಹುತೇಕರಿಗೆ ಸಮರ್ಪಕ ಮಾಹಿತಿ ಇಲ್ಲ. ಶ್ರೀಕಂಠೇಶ್ವರ ದೇಗುಲದ ಬಳಿ ಈ ಪುರಾತನ ದೇವಸ್ಥಾನ, ತೆರಳುವ ಮಾರ್ಗ ಕುರಿತು ಮಾಹಿತಿ ನೀಡಿದರೆ ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚುತ್ತದೆ. ನಂಜನಗೂಡಿಗೆ ಭೇಟಿ ನೀಡುವವರು ಪರಶುರಾಮ ಕ್ಷೇತ್ರಕ್ಕೂ ಬರುತ್ತಾರೆ. ಆಗ ನಮ್ಮ ಪರಂಪರೆಯ ಇತಿಹಾಸದ ಅರಿವಿನ ಜತೆಗೆ ಆಹ್ಲಾದಕರ ಪರಿಸರದ ಅನುಭವವನ್ನೂ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಅಥವಾ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು ಎಂಬ ಆಶಯ ಸ್ಥಳೀಯರದ್ದಾಗಿದೆ.

ಪ್ರವಾಸಿ ತಾಣವಾಗಿಸಲು ಅಭಿವೃದ್ಧಿ:  ಹಸಿರಿನ ಮಧ್ಯೆ ಕಂಗೊಳಿಸುವಈ ದೇವಸ್ಥಾನವನ್ನು ಇನ್ನಷ್ಟು ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗಿ ರೂಪಿಸಬಹುದಾಗಿದೆ. ಈ ಸ್ಥಳದಲ್ಲಿ ಅನೇಕ ಭಕ್ತರು ಹರಕೆ ಕಟ್ಟಿಕೊಂಡು ವಿಶೇಷ ಪೂಜೆ ಸಲ್ಲಿಸಿ ಪರ ಮಾಡುತ್ತಾರೆ. ಇದು ದೇವಾಲಯದ ಆವರಣದಲ್ಲೇ ನಡೆಯುತ್ತಿದೆ. ಇದಕ್ಕೆ ಪ್ರತ್ಯೇಕವಾಗಿ ಸೌಲಭ್ಯ ಕಲ್ಪಿಸಿದರೆ ಅವರಿಗೆಲ್ಲಾ ಅನುಕೂಲವಾಗಲಿದೆ. ಕುಡಿಯುವ ನೀರು, ಶೌಚಾಲಯ ಮತ್ತಿತರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

3 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

3 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

6 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

6 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

7 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

7 hours ago