Andolana originals

ಸುಂದರ ಪರಿಸರದಲ್ಲಿರುವ ಪರಶುರಾಮ ದೇವಸ್ಥಾನ

ಆರ್.ಎಲ್.ಮಂಜುನಾಥ್‌ 

ನಂಜನಗೂಡು ಎಂದರೆ ತಕ್ಷಣ ಕಪಿಲಾ ನದಿ, ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ, ಇದೇ ಶ್ರೀಕಂಠೇಶ್ವರ ದೇವ ಸ್ಥಾನದ ಸಮೀಪವೇ ಮತ್ತೊಂದು ಪುರಾಣ ಪ್ರಸಿದ್ಧ ಚಿಕ್ಕ ದೇಗುಲವಿರುವುದು ಅನೇಕರಿಗೆ ಗೊತ್ತಿಲ್ಲ.

ಈ ದೇವಸ್ಥಾನ ಇರುವುದು ನಂಜನಗೂಡು- ಚಾಮರಾಜನಗರ ಹೆದ್ದಾರಿಯ ಸಮೀಪ. ನಂಜನಗೂಡು ಕಪಿಲಾ ನದಿಯ ಸ್ನಾನಘಟ್ಟದಿಂದ ಸುಮಾರು ೧ ಕಿ.ಮೀ. ದೂರದಲ್ಲಿರುವ ಈ ಗುಡಿಯ ಹೆಸರು ಪರಶುರಾಮ ದೇವಸ್ಥಾನ. ಸುತ್ತಲೂ ಹಸಿರಿನಿಂದ ಕಂಗೊಳಿಸುವ ಗದ್ದೆ ಬಯಲು, ಮರಗಿಡಗಳು, ದೇಗುಲದ ಪಕ್ಕವೇ ಹರಿಯುವ ಕಪಿಲಾ ನದಿಯ ನೀರಿನ ವೈಯ್ಯಾರ ಕಣ್ಣಿಗೆ, ಮನಸ್ಸಿಗೆ ತಂಪಿನ ಅನುಭವ ನೀಡುತ್ತದೆ.

ಐತಿಹ್ಯದ ಪ್ರಕಾರ ತನ್ನ ತಂದೆ ಜಮ ದಗ್ನಿಯ ಸೂಚನೆಯಂತೆ ತಾಯಿಯನ್ನು ಹತ್ಯೆಗೈದ ಪರಶು ರಾಮ. ಪಾಪ ಪರಿಹಾರಕ್ಕಾಗಿ ಇದೇ ಸ್ಥಳದಲ್ಲಿ ತಪಸ್ಸು ಮಾಡಿದ್ದ ಎಂಬ ನಂಬಿಕೆಯಿದೆ. ತಪಸ್ಸಿಗೆ ಒಲಿದ ನಂಜುಂಡೇಶ್ವರನು ತನಗೊಂದು ದೇವಸ್ಥಾನ ಕಟ್ಟಿಕೊಡುವಂತೆ ಕೇಳಿಕೊಂಡಿದ್ದನು. ನಂಜುಂಡೇಶ್ವರನ ಮಾತಿನಂತೆ ಪರಶುರಾಮನೇ ಇಲ್ಲಿನ ನಂಜುಂಡೇಶ್ವರನ ದೇಗುಲವನ್ನು ಕಟ್ಟಿಸಿದ ಎಂದು ಹೇಳಲಾಗುತ್ತದೆ.

ಪರಶುರಾಮ ಕ್ಷೇತ್ರದಲ್ಲಿ ತಮ್ಮ ಯಾವುದೇ ಕಷ್ಟ, ಸಮಸ್ಯೆಗಳು ಪರಿಹಾರವಾಗಬೇಕೆಂದುಭಕ್ತರು ಪ್ರಾರ್ಥಿಸಿಕೊಂಡು ಒಂದು ಬೆಲ್ಲ ಹಾಗೂ ಒಂದು ಹಿಡಿ ಉಪ್ಪನ್ನು ಕಪಿಲೆಯಲ್ಲಿ ಹಾಕಿದರೆ ಅವುಗಳು ನೀರಿನಲ್ಲಿ ಕರಗುವಂತೆ, ಅಂತೆಯೇ ಭಕ್ತರಿಗೆ ಎದುರಾದ ಕಷ್ಟಗಳೂ ಕರಗಿ ಹೋಗುತ್ತವೆ ಎಂಬ ನಂಬಿಕೆ ಇದ್ದು, ಪ್ರತಿನಿತ್ಯ ನೂರಾರು ಜನರು ಇಲ್ಲಿಗೆ ಆಗಮಿಸಿ ಪ್ರಾರ್ಥಿಸಿಕೊಳ್ಳುತ್ತಾರೆ.

ಮಾಹಿತಿ ಫಲಕ ಅಳವಡಿಸಬೇಕು: 

ಪರಶುರಾಮ ದೇವಸ್ಥಾನ ಬಗ್ಗೆ ಬಹುತೇಕರಿಗೆ ಸಮರ್ಪಕ ಮಾಹಿತಿ ಇಲ್ಲ. ಶ್ರೀಕಂಠೇಶ್ವರ ದೇಗುಲದ ಬಳಿ ಈ ಪುರಾತನ ದೇವಸ್ಥಾನ, ತೆರಳುವ ಮಾರ್ಗ ಕುರಿತು ಮಾಹಿತಿ ನೀಡಿದರೆ ಇಲ್ಲಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚುತ್ತದೆ. ನಂಜನಗೂಡಿಗೆ ಭೇಟಿ ನೀಡುವವರು ಪರಶುರಾಮ ಕ್ಷೇತ್ರಕ್ಕೂ ಬರುತ್ತಾರೆ. ಆಗ ನಮ್ಮ ಪರಂಪರೆಯ ಇತಿಹಾಸದ ಅರಿವಿನ ಜತೆಗೆ ಆಹ್ಲಾದಕರ ಪರಿಸರದ ಅನುಭವವನ್ನೂ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಅಥವಾ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು ಎಂಬ ಆಶಯ ಸ್ಥಳೀಯರದ್ದಾಗಿದೆ.

ಪ್ರವಾಸಿ ತಾಣವಾಗಿಸಲು ಅಭಿವೃದ್ಧಿ:  ಹಸಿರಿನ ಮಧ್ಯೆ ಕಂಗೊಳಿಸುವಈ ದೇವಸ್ಥಾನವನ್ನು ಇನ್ನಷ್ಟು ಅಭಿವೃದ್ಧಿಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗಿ ರೂಪಿಸಬಹುದಾಗಿದೆ. ಈ ಸ್ಥಳದಲ್ಲಿ ಅನೇಕ ಭಕ್ತರು ಹರಕೆ ಕಟ್ಟಿಕೊಂಡು ವಿಶೇಷ ಪೂಜೆ ಸಲ್ಲಿಸಿ ಪರ ಮಾಡುತ್ತಾರೆ. ಇದು ದೇವಾಲಯದ ಆವರಣದಲ್ಲೇ ನಡೆಯುತ್ತಿದೆ. ಇದಕ್ಕೆ ಪ್ರತ್ಯೇಕವಾಗಿ ಸೌಲಭ್ಯ ಕಲ್ಪಿಸಿದರೆ ಅವರಿಗೆಲ್ಲಾ ಅನುಕೂಲವಾಗಲಿದೆ. ಕುಡಿಯುವ ನೀರು, ಶೌಚಾಲಯ ಮತ್ತಿತರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕಿದೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

11 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

13 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

15 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

15 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

17 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

18 hours ago