ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಕೆಲವು -ಟ್ಪಾತ್ ಹೋಟೆಲ್ಗಳ ಎದುರು ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ಸಂಚಾರ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಪ್ರಸಾದ್ ಪೊಲೀಸರಿಗೆ ವಾಹನ ನಿಲುಗಡೆ ನಿಯಂತ್ರಿಸಲು ಸೂಚನೆ ನೀಡಿದ್ದರು.
ಬಳಿಕ ಎಚ್ಚೆತ್ತ ಪೊಲೀಸರು ಬ್ಯಾಂಕ್ ಮುಂಭಾಗ ವಾಹನ ನಿಲುಗಡೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ, ಅದಕ್ಕೆ ಹಗ್ಗ ಕಟ್ಟಿದ್ದು, ಪಾದಚಾರಿ ಮಾರ್ಗದಲ್ಲಿ ಸಂಚರಿಸುವ ಹಿರಿಯ ನಾಗರಿಕರಿಗೆ ಸಮಸ್ಯೆಯಾಗಿದೆ. ಬ್ಯಾರಿಕೇಡ್ಗೆ ಎಲ್ಇಡಿ ರಿಪ್ಲೆಕ್ಟರ್ ಹಾಕದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಇದರ ಬದಲು ನೋ ಪಾರ್ಕಿಂಗ್ ಫಲಕ ಅಳವಡಿಸಿ, ಆ ಸ್ಥಳದಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ದಂಡ ವಿಽಸಿದಾಗ ಮಾತ್ರ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಇತ್ತ ಪಾದಚಾರಿಗಳು ಓಡಾಡದ ಹಾಗೆ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳವರು, ರಸ್ತೆ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ವಾಹನಗಳು ಮತ್ತು ವ್ಯಾಪಾರದ ಗಾಡಿಗಳು ನಿಲ್ಲುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗಿದೆ. ಈಗಲಾದರೂ ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಡಳಿತ ಎಚ್ಚೆತ್ತು ವಾಹನ ನಿಲುಗಡೆ ಸಮಸ್ಯೆಗೆ ಪರಿಹಾರ ನೀಡಬೇಕಿದೆ.
” ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸುವವರಿಗೆ ದಂಡ ಹಾಕದೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ ಅದಕ್ಕೆ ಎಲ್ಇಡಿ ಸ್ಟಿಕ್ಕರ್ ಹಾಕದೆ ಹಗ್ಗ ಕಟ್ಟಿದ್ದಾರೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ಸ್ಥಳವಿಲ್ಲದಂತಾಗಿದೆ. ಹಿರಿಯ ನಾಗರಿಕರು ಹಗ್ಗ ದಾಟಿ ಓಡಾಡಲು ಪರದಾಡಬೇಕಿದೆ. ನೋ ಪಾರ್ಕಿಂಗ್ -ಲಕ ಅಳವಡಿಸಿ, ನಿಯಮ ಉಲ್ಲಂಸುವವರಿಗೆ ದಂಡ ಹಾಕಬೇಕಿದೆ.”
-ವೆಂಕಟೇಶ್, ಪಟ್ಟಣ ನಿವಾಸಿ
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…