ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಕೆಲವು -ಟ್ಪಾತ್ ಹೋಟೆಲ್ಗಳ ಎದುರು ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ಸಂಚಾರ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಪ್ರಸಾದ್ ಪೊಲೀಸರಿಗೆ ವಾಹನ ನಿಲುಗಡೆ ನಿಯಂತ್ರಿಸಲು ಸೂಚನೆ ನೀಡಿದ್ದರು.
ಬಳಿಕ ಎಚ್ಚೆತ್ತ ಪೊಲೀಸರು ಬ್ಯಾಂಕ್ ಮುಂಭಾಗ ವಾಹನ ನಿಲುಗಡೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ, ಅದಕ್ಕೆ ಹಗ್ಗ ಕಟ್ಟಿದ್ದು, ಪಾದಚಾರಿ ಮಾರ್ಗದಲ್ಲಿ ಸಂಚರಿಸುವ ಹಿರಿಯ ನಾಗರಿಕರಿಗೆ ಸಮಸ್ಯೆಯಾಗಿದೆ. ಬ್ಯಾರಿಕೇಡ್ಗೆ ಎಲ್ಇಡಿ ರಿಪ್ಲೆಕ್ಟರ್ ಹಾಕದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಇದರ ಬದಲು ನೋ ಪಾರ್ಕಿಂಗ್ ಫಲಕ ಅಳವಡಿಸಿ, ಆ ಸ್ಥಳದಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ದಂಡ ವಿಽಸಿದಾಗ ಮಾತ್ರ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಇತ್ತ ಪಾದಚಾರಿಗಳು ಓಡಾಡದ ಹಾಗೆ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳವರು, ರಸ್ತೆ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ವಾಹನಗಳು ಮತ್ತು ವ್ಯಾಪಾರದ ಗಾಡಿಗಳು ನಿಲ್ಲುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗಿದೆ. ಈಗಲಾದರೂ ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಡಳಿತ ಎಚ್ಚೆತ್ತು ವಾಹನ ನಿಲುಗಡೆ ಸಮಸ್ಯೆಗೆ ಪರಿಹಾರ ನೀಡಬೇಕಿದೆ.
” ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸುವವರಿಗೆ ದಂಡ ಹಾಕದೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ ಅದಕ್ಕೆ ಎಲ್ಇಡಿ ಸ್ಟಿಕ್ಕರ್ ಹಾಕದೆ ಹಗ್ಗ ಕಟ್ಟಿದ್ದಾರೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ಸ್ಥಳವಿಲ್ಲದಂತಾಗಿದೆ. ಹಿರಿಯ ನಾಗರಿಕರು ಹಗ್ಗ ದಾಟಿ ಓಡಾಡಲು ಪರದಾಡಬೇಕಿದೆ. ನೋ ಪಾರ್ಕಿಂಗ್ -ಲಕ ಅಳವಡಿಸಿ, ನಿಯಮ ಉಲ್ಲಂಸುವವರಿಗೆ ದಂಡ ಹಾಕಬೇಕಿದೆ.”
-ವೆಂಕಟೇಶ್, ಪಟ್ಟಣ ನಿವಾಸಿ
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…