Andolana originals

ಬ್ಯಾರಿಕೇಡ್ ಹಾಕಿದರೂ ನಿಲ್ಲದ ಪಾರ್ಕಿಂಗ್ ಕಿರಿಕಿರಿ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಕೆಲವು -ಟ್‌ಪಾತ್ ಹೋಟೆಲ್‌ಗಳ ಎದುರು ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ಸಂಚಾರ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಪ್ರಸಾದ್ ಪೊಲೀಸರಿಗೆ ವಾಹನ ನಿಲುಗಡೆ ನಿಯಂತ್ರಿಸಲು ಸೂಚನೆ ನೀಡಿದ್ದರು.

ಬಳಿಕ ಎಚ್ಚೆತ್ತ ಪೊಲೀಸರು ಬ್ಯಾಂಕ್ ಮುಂಭಾಗ ವಾಹನ ನಿಲುಗಡೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ, ಅದಕ್ಕೆ ಹಗ್ಗ ಕಟ್ಟಿದ್ದು, ಪಾದಚಾರಿ ಮಾರ್ಗದಲ್ಲಿ ಸಂಚರಿಸುವ ಹಿರಿಯ ನಾಗರಿಕರಿಗೆ ಸಮಸ್ಯೆಯಾಗಿದೆ. ಬ್ಯಾರಿಕೇಡ್‌ಗೆ ಎಲ್‌ಇಡಿ ರಿಪ್ಲೆಕ್ಟರ್ ಹಾಕದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಇದರ ಬದಲು ನೋ ಪಾರ್ಕಿಂಗ್ ಫಲಕ ಅಳವಡಿಸಿ, ಆ ಸ್ಥಳದಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ದಂಡ ವಿಽಸಿದಾಗ ಮಾತ್ರ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತ ಪಾದಚಾರಿಗಳು ಓಡಾಡದ ಹಾಗೆ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳವರು, ರಸ್ತೆ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ವಾಹನಗಳು ಮತ್ತು ವ್ಯಾಪಾರದ ಗಾಡಿಗಳು ನಿಲ್ಲುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗಿದೆ. ಈಗಲಾದರೂ ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಡಳಿತ ಎಚ್ಚೆತ್ತು ವಾಹನ ನಿಲುಗಡೆ ಸಮಸ್ಯೆಗೆ ಪರಿಹಾರ ನೀಡಬೇಕಿದೆ.

” ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸುವವರಿಗೆ ದಂಡ ಹಾಕದೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ ಅದಕ್ಕೆ ಎಲ್‌ಇಡಿ ಸ್ಟಿಕ್ಕರ್ ಹಾಕದೆ ಹಗ್ಗ ಕಟ್ಟಿದ್ದಾರೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ಸ್ಥಳವಿಲ್ಲದಂತಾಗಿದೆ. ಹಿರಿಯ ನಾಗರಿಕರು ಹಗ್ಗ ದಾಟಿ ಓಡಾಡಲು ಪರದಾಡಬೇಕಿದೆ. ನೋ ಪಾರ್ಕಿಂಗ್ -ಲಕ ಅಳವಡಿಸಿ, ನಿಯಮ ಉಲ್ಲಂಸುವವರಿಗೆ ದಂಡ ಹಾಕಬೇಕಿದೆ.”

-ವೆಂಕಟೇಶ್, ಪಟ್ಟಣ ನಿವಾಸಿ

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago