Andolana originals

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್

ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ 

ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ ೧೨ ನಿರ್ದೇಶಕ ಸ್ಥಾನಗಳಿಗೆ ಜುಲೈ ೨೬ ರಂದು ಚುನಾವಣೆ ನಡೆಯಲಿದ್ದು, ಭಾನುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.

ನಾಮಪತ್ರ ಸಲ್ಲಿಕೆಗೆ ಜುಲೈ ೧೮ರ ಶನಿವಾರ ಕಡೆಯ ದಿನವಾಗಿದ್ದು, ಜುಲೈ ೧೯ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ ೨೦ರ ಸೋಮವಾರ ಮಧ್ಯಾಹ್ನ ೩ ಗಂಟೆಯೊಳಗೆ ನಾಮಪತ್ರಗಳನ್ನು ವಾಪಸ್ ಪಡೆಯಬಹುದಾಗಿದೆ. ಜುಲೈ ೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೪ ಗಂಟೆಯವರೆಗೆ ಪಟ್ಟಣದ ಟಿಎಪಿಸಿ ಎಂಎಸ್ ಆವರಣದಲ್ಲಿ ಚುನಾವಣೆ ನಡೆಯಲಿದೆ.

ತಾಲ್ಲೂಕಿನ ಟಿಎಪಿಸಿಎಂಎಸ್ ೧೨ ನಿರ್ದೇಶಕ ಸ್ಥಾನಗಳ ಪೈಕಿ ಎ ತರಗತಿಯ ೫ ನಿರ್ದೇಶಕ ಸ್ಥಾನಗಳಿಗೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ೨೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಡೆಲಿಗೇಟ್ ಆಗಿ ಆಯ್ಕೆ ಗೊಂಡವರು ಮತದಾನ ಮಾಡಲಿದ್ದಾರೆ.

೨೪ ಸಹಕಾರ ಸಂಘಗಳಿದ್ದು, ಈ ಪೈಕಿ ೨೧ ಸಹಕಾರ ಸಂಘಗಳು ಮಾತ್ರ ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ ಮತದಾನ ಮಾಡುವ ಹಕ್ಕನ್ನು ಪಡೆದುಕೊಂಡಿವೆ. ಈ ಪೈಕಿ ಭೇರ್ಯ, ಸಾಲಿಗ್ರಾಮ, ಅಂಕನಹಳ್ಳಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತದಾನದಿಂದ ವಂಚಿತಗೊಂಡಿವೆ. ಟಿಎಪಿಸಿಎಂಎಸ್ ಸಂಘದಲ್ಲಿ ಇದುವರೆಗೂ ಈ ಗ್ರಾಮಗಳು ಯಾವುದೇ ವ್ಯವಹಾರದ ವಹಿ ವಾಟು ನಡೆಸಿಲ್ಲ. ಆದ್ದರಿಂದ ಮತದಾನದ ಹಕ್ಕನ್ನು ಹೊಂದಿಲ್ಲ.

ಬಿ ತರಗತಿಗೆ ೨,೦೪೯ ಅರ್ಹ ಮತದಾರರು ಇದ್ದು, ಈ ಪೈಕಿ ೭ ನಿರ್ದೇಶಕ ಸ್ಥಾನಗಳಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಒಂದು ಸ್ಥಾನ, ಹಿಂದುಳಿದ ಎ ಪ್ರವರ್ಗ(ಅ) ಕ್ಷೇತ್ರಕ್ಕೆ ಒಂದು ಸ್ಥಾನ, ಹಿಂದುಳಿದ ಬಿ ಪ್ರವರ್ಗ (ಬ) ಕ್ಷೇತ್ರಕ್ಕೆ ಒಂದು ಸ್ಥಾನ, ಪರಿಶಿಷ್ಟ ಜಾತಿಗೆ ಒಂದು ಸ್ಥಾನ, ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನ ಹಾಗೂ ಮಹಿಳೆಯರಿಗೆ ಎರಡು ಸ್ಥಾನಗಳ ಮೀಸಲಾತಿ ಘೋಷಣೆ ಮಾಡಲಾಗಿದೆ.

ಪಕ್ಷಗಳಿಗೆ ಪ್ರತಿಷ್ಠೆಯ ಕಣ: 

ಟಿಎಪಿಸಿಎಂಎಸ್ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಮತ್ತು ಜಾ.ದಳ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿ ಕೊಂಡಿದ್ದು, ಇದು ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಚುನಾವಣೆಯಾಗಿದೆ. ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ಹಲವು ಸುತ್ತಿನ ಸಭೆ ನಡೆಸಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹಂಪಾಪುರ ಪ್ರಶಾಂತ್ ಜೈನ್ ಅವರು ಬಿ ತರಗತಿಯ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

1 hour ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

1 hour ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

1 hour ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

1 hour ago

ಫುಟ್‌ಪಾತ್ ಒತ್ತುವರಿ ತೆರವು; ವ್ಯಾಪಾರಸ್ಥರ ನೋವು

ಚಿರಂಜೀವಿ ಸಿ ಹುಲ್ಲಹಳ್ಳಿ ಹಲವರಿಗೆ ಮಕ್ಕಳ ಶಾಲಾ ಶುಲ್ಕ ಕಟ್ಟುವುದಕ್ಕೂ ಫುಟ್‌ಪಾತ್ ಆಧಾರ! ಕೆಲವರಿಗೆ ಅರ್ಧ ಶತಮಾನದಿಂದಲೂ ಈ ವ್ಯಾಪಾರದಿಂದಲೇ…

1 hour ago