Andolana originals

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್

ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ 

ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ ೧೨ ನಿರ್ದೇಶಕ ಸ್ಥಾನಗಳಿಗೆ ಜುಲೈ ೨೬ ರಂದು ಚುನಾವಣೆ ನಡೆಯಲಿದ್ದು, ಭಾನುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.

ನಾಮಪತ್ರ ಸಲ್ಲಿಕೆಗೆ ಜುಲೈ ೧೮ರ ಶನಿವಾರ ಕಡೆಯ ದಿನವಾಗಿದ್ದು, ಜುಲೈ ೧೯ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ ೨೦ರ ಸೋಮವಾರ ಮಧ್ಯಾಹ್ನ ೩ ಗಂಟೆಯೊಳಗೆ ನಾಮಪತ್ರಗಳನ್ನು ವಾಪಸ್ ಪಡೆಯಬಹುದಾಗಿದೆ. ಜುಲೈ ೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೪ ಗಂಟೆಯವರೆಗೆ ಪಟ್ಟಣದ ಟಿಎಪಿಸಿ ಎಂಎಸ್ ಆವರಣದಲ್ಲಿ ಚುನಾವಣೆ ನಡೆಯಲಿದೆ.

ತಾಲ್ಲೂಕಿನ ಟಿಎಪಿಸಿಎಂಎಸ್ ೧೨ ನಿರ್ದೇಶಕ ಸ್ಥಾನಗಳ ಪೈಕಿ ಎ ತರಗತಿಯ ೫ ನಿರ್ದೇಶಕ ಸ್ಥಾನಗಳಿಗೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ೨೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಡೆಲಿಗೇಟ್ ಆಗಿ ಆಯ್ಕೆ ಗೊಂಡವರು ಮತದಾನ ಮಾಡಲಿದ್ದಾರೆ.

೨೪ ಸಹಕಾರ ಸಂಘಗಳಿದ್ದು, ಈ ಪೈಕಿ ೨೧ ಸಹಕಾರ ಸಂಘಗಳು ಮಾತ್ರ ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ ಮತದಾನ ಮಾಡುವ ಹಕ್ಕನ್ನು ಪಡೆದುಕೊಂಡಿವೆ. ಈ ಪೈಕಿ ಭೇರ್ಯ, ಸಾಲಿಗ್ರಾಮ, ಅಂಕನಹಳ್ಳಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತದಾನದಿಂದ ವಂಚಿತಗೊಂಡಿವೆ. ಟಿಎಪಿಸಿಎಂಎಸ್ ಸಂಘದಲ್ಲಿ ಇದುವರೆಗೂ ಈ ಗ್ರಾಮಗಳು ಯಾವುದೇ ವ್ಯವಹಾರದ ವಹಿ ವಾಟು ನಡೆಸಿಲ್ಲ. ಆದ್ದರಿಂದ ಮತದಾನದ ಹಕ್ಕನ್ನು ಹೊಂದಿಲ್ಲ.

ಬಿ ತರಗತಿಗೆ ೨,೦೪೯ ಅರ್ಹ ಮತದಾರರು ಇದ್ದು, ಈ ಪೈಕಿ ೭ ನಿರ್ದೇಶಕ ಸ್ಥಾನಗಳಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಒಂದು ಸ್ಥಾನ, ಹಿಂದುಳಿದ ಎ ಪ್ರವರ್ಗ(ಅ) ಕ್ಷೇತ್ರಕ್ಕೆ ಒಂದು ಸ್ಥಾನ, ಹಿಂದುಳಿದ ಬಿ ಪ್ರವರ್ಗ (ಬ) ಕ್ಷೇತ್ರಕ್ಕೆ ಒಂದು ಸ್ಥಾನ, ಪರಿಶಿಷ್ಟ ಜಾತಿಗೆ ಒಂದು ಸ್ಥಾನ, ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನ ಹಾಗೂ ಮಹಿಳೆಯರಿಗೆ ಎರಡು ಸ್ಥಾನಗಳ ಮೀಸಲಾತಿ ಘೋಷಣೆ ಮಾಡಲಾಗಿದೆ.

ಪಕ್ಷಗಳಿಗೆ ಪ್ರತಿಷ್ಠೆಯ ಕಣ: 

ಟಿಎಪಿಸಿಎಂಎಸ್ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಮತ್ತು ಜಾ.ದಳ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿ ಕೊಂಡಿದ್ದು, ಇದು ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಚುನಾವಣೆಯಾಗಿದೆ. ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ಹಲವು ಸುತ್ತಿನ ಸಭೆ ನಡೆಸಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹಂಪಾಪುರ ಪ್ರಶಾಂತ್ ಜೈನ್ ಅವರು ಬಿ ತರಗತಿಯ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

3 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

3 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

3 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago