Andolana originals

ಇಂದು ಕಂದೇಗಾಲದಲ್ಲಿ ಪಾರ್ವತಾಂಬೆ ಜಾತ್ರೆ

ಮಹೇಂದ್ರ ಹಸಗೂಲಿ

ರಥೋತ್ಸವ ಕಣ್ತುಂಬಿಕೊಳ್ಳಲು ಉತ್ಸುಕರಾಗಿರುವ ಜನರು; ಭಾರೀ ನೂಕು ನುಗ್ಗಲು, ಎಚ್ಚರಿಕೆ ವಹಿಸಲು ಸೂಚನೆ 

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲದ ಬಳಿ ಇರುವ ಸ್ಕಂದಗಿರಿ ಪಾರ್ವತಾಂಬೆ ಜಾತ್ರಾ ಮಹೋತ್ಸವ ಶುಕ್ರವಾರ ಅದ್ಧೂರಿಯಾಗಿ ನಡೆಯಲಿದೆ.

ಮಧ್ಯಾಹ್ನ ೧೨.೨೦ರಿಂದ ೧.೨೦ರ ಶುಭ ಲಗ್ನದಲ್ಲಿ ರಥದಲ್ಲಿ ಪಾರ್ವತಾಂಬೆ ಮೂರ್ತಿಯನ್ನು ಕೂರಿಸಿ ವಿವಿಧ ಫಲಪುಷ್ಪಗಳಿಂದ ಅಲಂಕರಿಸಲಾಗುವುದು. ನಂತರ ಪಾರ್ವತಿ ಮತ್ತು ಸೋಮೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವ ನಡೆಸಲಾಗುವುದು. ಬಳಿಕ ಅರ್ಚಕರಿಂದ ವಿವಿಧ ಪೂಜೆಗಳನ್ನು ಸಲ್ಲಿಸಿ ರಥದ ಸುತ್ತಲೂ ಪ್ರದಕ್ಷಿಣೆ ಹಾಕಿ ರಥವನ್ನು ಎಳೆಯಲಾಗುವುದು. ತಹಸಿಲ್ದಾರ್ ತನ್ಮಯ್ ಅವರು ಕಲ್ಯಾಣೋತ್ಸವದಲ್ಲಿ ಭಾಗಿಯಾಗಿ ಪೂಜೆಯನ್ನು ನೆರವೇರಿಸುವರು.

ಸ್ಕಂದಗಿರಿ ಪಾರ್ವತಿ ಬೆಟ್ಟದ ಹಿನ್ನೆಲೆ: ಸ್ಕಂದಗಿರಿ ಕಂದೇಗಾಲ ಬೆಟ್ಟದಲ್ಲಿ ಬೊಮ್ಮರಸ ಮತ್ತು ತಿಮ್ಮರಸ ಕಾಲದಲ್ಲಿ ದೇವಾಲಯ ನಿರ್ಮಾಣವಾಗಿರಬಹುದು ಎಂದು ಉಲ್ಲೇಖ ಇದೆ. ಈ ಕ್ಷೇತ್ರ ಪರಮೇಶ್ವರನು ನೆಲೆನಿಂತ ಸ್ಥಳವಾಗಿದು, ಅಗಸ್ತ್ಯ ಮುನಿಗಳು ಪಾರ್ವತಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ ಎಂಬ ಪ್ರತೀತಿ ಇದೆ.

ಅಗಸ್ತ್ಯರು ಪಾರ್ವತಿ ಪರಮೇಶ್ವರರನ್ನು ಕುರಿತು ಈ ಸ್ಥಳದಲ್ಲಿ ತಪಸ್ಸು ಮಾಡಿದ್ದರು. ಅವರ ತಪಸ್ಸಿಗೆ ಮೆಚ್ಚಿ ಪರಮೇಶ್ವರನು ಪಾರ್ವತಿಯ ಸಮೇತ ಪ್ರತ್ಯಕ್ಷನಾಗಿದ್ದ ಎನ್ನಲಾಗಿದೆ. ಪಾರ್ವತಿ ದೇವಿ ಯಾವ ರೂಪದಲ್ಲಿ ಪ್ರತ್ಯಕ್ಷಳಾದಳೋ ಅದೇ ರೂಪದಲ್ಲಿಯೇ ವಿಗ್ರಹವನ್ನು ಕೆತ್ತಿಸಿ ಪ್ರತಿಷ್ಠಾಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಗಸ್ತ್ಯರ ಒತ್ತಾಯದ ಮೇರೆಗೆ ಪಾರ್ವತಿ ಪರಮೇಶ್ವರರು ಮತ್ತೊಮ್ಮೆ ವಿವಾಹವಾದರು ಎಂಬ ಪ್ರತೀತಿ ಇದೆ. ಹಾಗಾಗಿ ಕಲ್ಯಾಣೋತ್ಸವ ರಥೋತ್ಸವಕ್ಕೂ ಮುನ್ನ ನಡೆಯುತ್ತದೆ. ಈ ಕ್ಷೇತ್ರದಲ್ಲಿ ಮದುವೆಯಾಗದವರು ಹರಕೆ ಹೊತ್ತರೆ ಕಲ್ಯಾಣವಾಗುತ್ತದೆ ಎಂಬ ನಂಬಿಕೆ ಇದೆ.

ಈ ಕ್ಷೇತ್ರದಲ್ಲಿ ಸೋಮೇಶ್ವರ ಲಿಂಗ ಹಾಗೂ ಬಸವನ ಮೂರ್ತಿ ಮೂರು ವರ್ಷಕ್ಕೊಮ್ಮೆ ಭತ್ತದ ಕಾಳಿನಷ್ಟು ಎತ್ತರಕ್ಕೆ ಬೆಳೆಯುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ನಡೆಯುವ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಕಂದೇಗಾಲ, ಮೊಳ್ಳಯ್ಯನಹುಂಡಿ, ಶಿಂಡನಪುರ, ಕೊಡಸೋಗೆ, ಚಿಕ್ಕತುಪ್ಪೂರು, ಕೆಲಸಿಪುರ, ತೆರಕಣಾಂಬಿ, ಚಾಮರಾಜನಗರ, ಮೈಸೂರು ಭಾಗಗಗಳಿಂದ ಜನರು ಆಗಮಿಸುತ್ತಾರೆ. ನವ ದಂಪತಿಗಳು ಚಲಿಸುವ ರಥಕ್ಕೆ ಹಣ್ಣು-ಜವನ ಸಮರ್ಪಿಸುತ್ತಾರೆ. ಬೆಟ್ಟದ ಮೇಲೆ ನಿಂತು ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಜನರು ಉತ್ಸುಕರಾಗಿದ್ದಾರೆ.

ಸಹಸ್ರಾರು ಭಕ್ತರಿಗೆ ಪ್ರಸಾದ ವ್ಯವಸ್ಥೆ: ಪಾರ್ವತಾಂಬೆ ರಥೋತ್ಸವ ಕಣ್ತುಂಬಿಕೊಳ್ಳಲು ಬರುವ ಸಾವಿರಾರು ಸಂಖ್ಯೆಯ ಭಕ್ತರಿಗೆ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿದೆ.

ಮುಜಾಗ್ರತಾ ಕ್ರಮ…. ಜಾತ್ರೆಯಲ್ಲಿ ಯಾವುದೇ ಅವಘಡ ನಡೆಯದಂತೆ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಲಿದೆ. ಭಕ್ತಾದಿಗಳು ದೇವರ ದರ್ಶನ ಮಾಡಿ, ರಥೋತ್ಸವದ ಸಂದರ್ಭದಲ್ಲಿ ರಥದಿಂದ ದೂರ ನಿಂತು ಕೈ ಮುಗಿಯಬೇಕು. ರಥ ಬರುವ ಸಂದರ್ಭದಲ್ಲಿ ಭಾರೀ ನೂಕುನುಗ್ಗಲು ಇರುವುದರಿಂದ ಮಕ್ಕಳ ಕಡೆ ಪೋಷಕರು ಗಮನಕೊಡಬೇಕು. ೩-೪ ವರ್ಷಗಳ ಹಿಂದೆ ರಥೋತ್ಸವದಲ್ಲಿ ಚಕ್ರಕ್ಕೆ ಸಿಲುಕಿ ದುರ್ಘಟನೆ ನಡೆದು, ಸಾವು ನೋವು ಸಂಭವಿಸಿತ್ತು. ಹಾಗಾಗಿ ಮುಂಜಾಗ್ರತಾ ಕ್ರಮವಹಿಸುವುದು ಸೂಕ್ತ.

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

8 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago