ರಾತ್ರಿ ೧೨ ಗಂಟೆಯಾದರೂ ನಿಲ್ದಾಣದಲ್ಲೇ ಕಾದಿದ್ದ ಜನರು
ಮೈಸೂರು: ಮಧ್ಯರಾತ್ರಿಯಾದರೂ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಸ್ಗಳು ಬರದೆ ನಂಜನಗೂಡು, ಚಾಮರಾಜನಗರ, ಹುಣಸೂರು, ಪಿರಿಯಾಪಟ್ಟಣ, ಕುಶಾಲನಗರ, ಗೋಣಿಕೊಪ್ಪ, ಕೇರಳ, ತಮಿಳುನಾಡು ಕಡೆಗೆ ತೆರಳುವ ಜನರು ಬಸ್ ನಿಲ್ದಾಣದಲ್ಲೇ ಪರದಾಡಿದರು.
ದಸರಾ ಮಹೋತ್ಸವದ ಅಂಗವಾಗಿ ನಗರಕ್ಕೆ ಹೆಚ್ಚು ಜನರು ಬರುತ್ತಿದ್ದಾರೆ. ಆದರೆ ಮತ್ತೆ ಅವರ ಸ್ಥಳಗಳಿಗೆ ತೆರಳಲು ಸೂಕ್ತ ಬಸ್ಗಳ ವ್ಯವಸ್ಥೆ ಇಲ್ಲದ ಕಾರಣ ನಿಲ್ದಾಣದಲ್ಲೇ ಕಾಲ ಕಳೆಯುವಂತಾಯಿತು. ರಾತ್ರಿ ೧೦ ಗಂಟೆಗೆ ಬಸ್ ನಿಲ್ದಾಣಕ್ಕೆ ಬಂದಿದ್ದೇವೆ. ೧೨ ಗಂಟೆಯಾದರೂ ನಮ್ಮ ಊರುಗಳಿಗೆ ತೆರಳಲು ಬಸ್ಸಿಲ್ಲ. ಈ ಸಂಬಂಧ ಅಧಿಕಾರಿಗಳನ್ನು ವಿಚಾರಿಸಿದರೆ ಬಸ್ ಬರುತ್ತವೆ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ಬಸ್ಸುಗಳು ನಿಲ್ದಾಣಕ್ಕೆ ಬಂದೇ ಇಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು
” ಟ್ರಾಫಿಕ್ ಸಮಸ್ಯೆಯಿಂದ ಬಸ್ಗಳು ನಿಗದಿತ ಸಮಯಕ್ಕೆ ನಿಲ್ದಾಣಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಜನದಟ್ಟಣೆ ಹೆಚ್ಚಿರುವುದರಿಂದ ದಸರಾ ವಿಶೇಷ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ.”
-ಶಿವಣ್ಣ, ಸಂಚಾರ ನಿಯಂತ್ರಕ,
” ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ಬಸ್ ನಿಲ್ದಾಣಕ್ಕೆ ರಾತ್ರಿ ೧೧ ಗಂಟೆಗೇ ಬಂದಿದ್ದೇನೆ. ಸುಮಾರು ಒಂದು ಗಂಟೆಯಾದರೂ ಹುಣಸೂರಿಗೆ ಹೋಗಲು ಯಾವುದೇ ಬಸ್ ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಬಸ್ ಬರುತ್ತದೆ ಎಂದು ಹೇಳುತ್ತಾರೆ. ಆದರೆ ರಾತ್ರಿ ೧೨ ಗಂಟೆಯಾದರೂ ಬಸ್ ಬಂದಿಲ್ಲ. ಊರಿಗೆ ಹೋಗಲು ತೊಂದರೆಯಾಗುತ್ತಿದೆ.”
-ಶಂಕರ್, ಹುಣಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…