Andolana originals

ಬಸ್‌ಗಳಿಲ್ಲದೇ ಪ್ರಯಾಣಿಕರ ಪರದಾಟ

ರಾತ್ರಿ ೧೨ ಗಂಟೆಯಾದರೂ ನಿಲ್ದಾಣದಲ್ಲೇ ಕಾದಿದ್ದ ಜನರು 

ಮೈಸೂರು: ಮಧ್ಯರಾತ್ರಿಯಾದರೂ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಸ್‌ಗಳು ಬರದೆ ನಂಜನಗೂಡು, ಚಾಮರಾಜನಗರ, ಹುಣಸೂರು, ಪಿರಿಯಾಪಟ್ಟಣ, ಕುಶಾಲನಗರ, ಗೋಣಿಕೊಪ್ಪ, ಕೇರಳ, ತಮಿಳುನಾಡು ಕಡೆಗೆ ತೆರಳುವ ಜನರು ಬಸ್ ನಿಲ್ದಾಣದಲ್ಲೇ ಪರದಾಡಿದರು.

ದಸರಾ ಮಹೋತ್ಸವದ ಅಂಗವಾಗಿ ನಗರಕ್ಕೆ ಹೆಚ್ಚು ಜನರು ಬರುತ್ತಿದ್ದಾರೆ. ಆದರೆ ಮತ್ತೆ ಅವರ ಸ್ಥಳಗಳಿಗೆ ತೆರಳಲು ಸೂಕ್ತ ಬಸ್‌ಗಳ ವ್ಯವಸ್ಥೆ ಇಲ್ಲದ ಕಾರಣ ನಿಲ್ದಾಣದಲ್ಲೇ ಕಾಲ ಕಳೆಯುವಂತಾಯಿತು. ರಾತ್ರಿ ೧೦ ಗಂಟೆಗೆ ಬಸ್ ನಿಲ್ದಾಣಕ್ಕೆ ಬಂದಿದ್ದೇವೆ. ೧೨ ಗಂಟೆಯಾದರೂ ನಮ್ಮ ಊರುಗಳಿಗೆ ತೆರಳಲು ಬಸ್ಸಿಲ್ಲ. ಈ ಸಂಬಂಧ ಅಧಿಕಾರಿಗಳನ್ನು ವಿಚಾರಿಸಿದರೆ ಬಸ್ ಬರುತ್ತವೆ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ಬಸ್ಸುಗಳು ನಿಲ್ದಾಣಕ್ಕೆ ಬಂದೇ ಇಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು

” ಟ್ರಾಫಿಕ್ ಸಮಸ್ಯೆಯಿಂದ ಬಸ್ಗಳು ನಿಗದಿತ ಸಮಯಕ್ಕೆ ನಿಲ್ದಾಣಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಜನದಟ್ಟಣೆ ಹೆಚ್ಚಿರುವುದರಿಂದ ದಸರಾ ವಿಶೇಷ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ.”

-ಶಿವಣ್ಣ, ಸಂಚಾರ ನಿಯಂತ್ರಕ,

” ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ಬಸ್ ನಿಲ್ದಾಣಕ್ಕೆ ರಾತ್ರಿ ೧೧ ಗಂಟೆಗೇ ಬಂದಿದ್ದೇನೆ. ಸುಮಾರು ಒಂದು ಗಂಟೆಯಾದರೂ ಹುಣಸೂರಿಗೆ ಹೋಗಲು ಯಾವುದೇ ಬಸ್ ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಬಸ್ ಬರುತ್ತದೆ ಎಂದು ಹೇಳುತ್ತಾರೆ. ಆದರೆ ರಾತ್ರಿ ೧೨ ಗಂಟೆಯಾದರೂ ಬಸ್ ಬಂದಿಲ್ಲ. ಊರಿಗೆ ಹೋಗಲು ತೊಂದರೆಯಾಗುತ್ತಿದೆ.”

-ಶಂಕರ್, ಹುಣಸೂರು

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

3 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago