Categories: Andolana originals

ಗೋಕುಲಂ ಪೇ ಅಂಡ್ ಯೂಸ್ ಶೌಚಾಲಯಕ್ಕೆ ಬೀಗ

ದುರಸ್ತಿಗೆ ಗಮನ ಹರಿಸದ ನಗರಪಾಲಿಕೆ ಅಧಿಕಾರಿಗಳು

ಮೈಸೂರು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪೇ ಅಂಡ್ ಯೂಸ್ ಶೌಚಾಲಯ ಕಳೆದ ಎಂಟು ತಿಂಗಳಿನಿಂದ ಹಾಳಾಗಿದ್ದು, ಯಾರ ಬಳಕೆಗೂ ಬಾರದಂತಾಗಿದೆ.

ನಗರದ ಗೋಕುಲಂ ಮೂರನೇ ಹಂತದ ಕೆಆರ್‌ಎಸ್ ರಸ್ತೆ ಬದಿಯಲ್ಲಿ ಮೈಸೂರು ನಗರಪಾಲಿಕೆಯಿಂದ ನಿರ್ಮಿಸಿರುವ ಪಾವತಿಸಿ ಉಪಯೋಗಿಸುವ ಶೌಚಾಲಯಕ್ಕೆ ಕಳೆದ ಎಂಟು ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಕೊಳಕು ಮನೆ ಮಾಡಿದೆ.

ಗೋಕುಲಂ ರಸ್ತೆ ಮೂಲಕ ಜಯದೇವ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ಚಿಕಿತ್ಸೆಗೆ ಆಗಮಿಸುತ್ತಾರೆ. ಆಸ್ಪತ್ರೆಗಳು, ವಿವಿಧ ಇಲಾಖಾ ಕಚೇರಿ ಗಳು ಇಲ್ಲೇ ಇದ್ದು, ಬೇರೆ ಕಡೆಯಿಂದ ಆಗಮಿಸುವ ಜನರಿಗೆ ತಕ್ಷಣದ ಬಳಕೆಗಾಗಿ ಇದ್ದ ಈ ಒಂದು ಶೌಚಾಲಯವೂ ಸದ್ಯ ಮುಚ್ಚಿರುವುದರಿಂದ ಜನರಿಗೆ ತೀವ್ರ ತೊಂದರೆಯಾಗಿದೆ.

ಶೌಚಾಲಯವನ್ನು ಪುನರ್‌ ಬಳಕೆಗೆ ಯೋಗ್ಯ ವಾಗುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಹಾಳಾದ ಪಾರ್ಕ್:
ಈ ಶೌಚಾಲಯ ನಿರ್ಮಾಣವಾಗಿರುವ ಜಾಗ ಪಾಕ್‌ ೯ನ ಒಂದು ಭಾಗವಾಗಿದೆ. ಪಾವತಿಸಿ ಬಳಸುವ ಈ ಶೌಚಾಲಯ ಹಿಂಭಾಗದಲ್ಲಿರುವ ಚಿಕ್ಕ ಪಾರ್ಕ್ ಸಂಪೂರ್ಣವಾಗಿ ಹದಗೆಟ್ಟಿದೆ. ಪಾರ್ಕ್ ಬಳಿ ಭಾರೀ ಗಾತ್ರದ ಲಾರಿಗಳನ್ನು ನಿಲ್ಲಿಸಲಾಗುತ್ತಿದ್ದು, ಪಾರ್ಕ್ ಎಂಬುದರ ಕುರುಹೂ ಇಲ್ಲದಂತಾಗಿದೆ.

ಪಾರ್ಕ್‌ ಒಳಭಾಗದಲ್ಲಿ ಅನಗತ್ಯ ಸಸಿಗಲೂ ಬೆಳದು ನಿಂತಿದ್ದು, ಪಾರ್ಕ್‌ ಒಳ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ. ಪರಿಸ್ಥಿತಿ ಹೀಗೇಯೇ ಮುಂದುವರಿದರೆ ಬಡಾವಣೆಯ ಸುತ್ತಲಿನ ಎಲ್ಲಾ ಕಸಗಳು ಇಲ್ಲೇ ಸಂಗ್ರಹವಾಗಲಿವೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಶೌಚಾಲಯ ಮರು ಬಳಕೆ ಸಂಬಂಧ ಟೆಂಡರ್ ಕರೆಯಲಾಗಿತ್ತು. ಅಲ್ಲಿಗೆ ನಮ್ಮ ಅವಧಿ ಮುಗಿದಿತ್ತು. ಈ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್ ಗಮನಕ್ಕೂ ತಂದಿದ್ದೆ. ಮತ್ತೊಮ್ಮೆ ಈ ಬಗ್ಗೆ ಪರಿಶೀಲಿಸಿ ಜನರ ಬಳಕೆಗೆ ತರಲಾಗುವುದು. ಪಾರ್ಕ್‌ನಲ್ಲಿ ಲಾರಿ ನಿಲ್ಲಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು.
ಎಸ್‌ಬಿಎಂ ಮಂಜು, ಮಾಜಿ ಕಾರ್ಪೊರೇಟರ್.

ಶೌಚಾಲಯ ಮರು ಸ್ಥಾಪನೆ ಸಂಬಂಧ ಟೆಂಡರ್‌ ಕಡೆಯಲಾಗಿತ್ತು. ಆದರೆ ಈವರೆಗೆ ಯಾರೂ ಮುಂದೆ ಬಂದಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು.
ಅಶಾದ್ ಉರ್ ರೆಹಮಾನ್ ಷರೀಫ್‌, ನಗರಪಾಲಿಕೆ ಆಯುಕ್ತ.

ಸುಮಾರು ದಿನಗಳಿಂದ ಪಾವತಿಸಿ ಬಳಸುವ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಸ್ಥಳೀಯರಾಗಿ ನಮಗೆ ಪ್ರಯೋಜನವಾಗಿತ್ತು. ಬೇರೆ ಕಡೆಗಳಿಂದ ಬರುವ ಜನರ ಬಳಕೆಗೆ ಉಪಯುಕ್ತವಾಗಿದ್ದ ಈ ಶೌಚಾಲಯ ಮರು ಬಳಕೆಗೆ ಬರಬೇಕು.
ರಾಜೇಶ್ವರಿ, ಗೋಕುಲಂ ನಿವಾಸಿ.

ಬೇರೆ ಊರುಗಳಿಂದ ಆಸ್ಪತ್ರೆಗೆ ಬರುವ ಜನರು, ಲಾರಿ ಚಾಲಕರು, ಇತರೆ ಕೂಲಿ ಕಾರ್ಮಿಕರರಿಗೆ ಉಪಯುಕ್ತವಾಗಿದ್ದ ಈ ಶೌಚಾಲಯ ಮುಚ್ಚಿರುವುದು ನಿಜಕ್ಕೂ ನಷ್ಟ. ತುಂಬಾ ಅಚ್ಚುಕಟ್ಟಾಗಿ ಸಾಗುತ್ತಿದ್ದ ಈ ಶೌಚಾಲಯವನ್ನು ಮತ್ತೆ ಪ್ರಾರಂಭಿಸಬೇಕು.
ಸತೀಶ್, ಅಂಗಡಿ ಮಾಲೀಕರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago