Categories: Andolana originals

ಗೋಕುಲಂ ಪೇ ಅಂಡ್ ಯೂಸ್ ಶೌಚಾಲಯಕ್ಕೆ ಬೀಗ

ದುರಸ್ತಿಗೆ ಗಮನ ಹರಿಸದ ನಗರಪಾಲಿಕೆ ಅಧಿಕಾರಿಗಳು

ಮೈಸೂರು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪೇ ಅಂಡ್ ಯೂಸ್ ಶೌಚಾಲಯ ಕಳೆದ ಎಂಟು ತಿಂಗಳಿನಿಂದ ಹಾಳಾಗಿದ್ದು, ಯಾರ ಬಳಕೆಗೂ ಬಾರದಂತಾಗಿದೆ.

ನಗರದ ಗೋಕುಲಂ ಮೂರನೇ ಹಂತದ ಕೆಆರ್‌ಎಸ್ ರಸ್ತೆ ಬದಿಯಲ್ಲಿ ಮೈಸೂರು ನಗರಪಾಲಿಕೆಯಿಂದ ನಿರ್ಮಿಸಿರುವ ಪಾವತಿಸಿ ಉಪಯೋಗಿಸುವ ಶೌಚಾಲಯಕ್ಕೆ ಕಳೆದ ಎಂಟು ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಕೊಳಕು ಮನೆ ಮಾಡಿದೆ.

ಗೋಕುಲಂ ರಸ್ತೆ ಮೂಲಕ ಜಯದೇವ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ಚಿಕಿತ್ಸೆಗೆ ಆಗಮಿಸುತ್ತಾರೆ. ಆಸ್ಪತ್ರೆಗಳು, ವಿವಿಧ ಇಲಾಖಾ ಕಚೇರಿ ಗಳು ಇಲ್ಲೇ ಇದ್ದು, ಬೇರೆ ಕಡೆಯಿಂದ ಆಗಮಿಸುವ ಜನರಿಗೆ ತಕ್ಷಣದ ಬಳಕೆಗಾಗಿ ಇದ್ದ ಈ ಒಂದು ಶೌಚಾಲಯವೂ ಸದ್ಯ ಮುಚ್ಚಿರುವುದರಿಂದ ಜನರಿಗೆ ತೀವ್ರ ತೊಂದರೆಯಾಗಿದೆ.

ಶೌಚಾಲಯವನ್ನು ಪುನರ್‌ ಬಳಕೆಗೆ ಯೋಗ್ಯ ವಾಗುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಹಾಳಾದ ಪಾರ್ಕ್:
ಈ ಶೌಚಾಲಯ ನಿರ್ಮಾಣವಾಗಿರುವ ಜಾಗ ಪಾಕ್‌ ೯ನ ಒಂದು ಭಾಗವಾಗಿದೆ. ಪಾವತಿಸಿ ಬಳಸುವ ಈ ಶೌಚಾಲಯ ಹಿಂಭಾಗದಲ್ಲಿರುವ ಚಿಕ್ಕ ಪಾರ್ಕ್ ಸಂಪೂರ್ಣವಾಗಿ ಹದಗೆಟ್ಟಿದೆ. ಪಾರ್ಕ್ ಬಳಿ ಭಾರೀ ಗಾತ್ರದ ಲಾರಿಗಳನ್ನು ನಿಲ್ಲಿಸಲಾಗುತ್ತಿದ್ದು, ಪಾರ್ಕ್ ಎಂಬುದರ ಕುರುಹೂ ಇಲ್ಲದಂತಾಗಿದೆ.

ಪಾರ್ಕ್‌ ಒಳಭಾಗದಲ್ಲಿ ಅನಗತ್ಯ ಸಸಿಗಲೂ ಬೆಳದು ನಿಂತಿದ್ದು, ಪಾರ್ಕ್‌ ಒಳ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ. ಪರಿಸ್ಥಿತಿ ಹೀಗೇಯೇ ಮುಂದುವರಿದರೆ ಬಡಾವಣೆಯ ಸುತ್ತಲಿನ ಎಲ್ಲಾ ಕಸಗಳು ಇಲ್ಲೇ ಸಂಗ್ರಹವಾಗಲಿವೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಶೌಚಾಲಯ ಮರು ಬಳಕೆ ಸಂಬಂಧ ಟೆಂಡರ್ ಕರೆಯಲಾಗಿತ್ತು. ಅಲ್ಲಿಗೆ ನಮ್ಮ ಅವಧಿ ಮುಗಿದಿತ್ತು. ಈ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್ ಗಮನಕ್ಕೂ ತಂದಿದ್ದೆ. ಮತ್ತೊಮ್ಮೆ ಈ ಬಗ್ಗೆ ಪರಿಶೀಲಿಸಿ ಜನರ ಬಳಕೆಗೆ ತರಲಾಗುವುದು. ಪಾರ್ಕ್‌ನಲ್ಲಿ ಲಾರಿ ನಿಲ್ಲಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು.
ಎಸ್‌ಬಿಎಂ ಮಂಜು, ಮಾಜಿ ಕಾರ್ಪೊರೇಟರ್.

ಶೌಚಾಲಯ ಮರು ಸ್ಥಾಪನೆ ಸಂಬಂಧ ಟೆಂಡರ್‌ ಕಡೆಯಲಾಗಿತ್ತು. ಆದರೆ ಈವರೆಗೆ ಯಾರೂ ಮುಂದೆ ಬಂದಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು.
ಅಶಾದ್ ಉರ್ ರೆಹಮಾನ್ ಷರೀಫ್‌, ನಗರಪಾಲಿಕೆ ಆಯುಕ್ತ.

ಸುಮಾರು ದಿನಗಳಿಂದ ಪಾವತಿಸಿ ಬಳಸುವ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಸ್ಥಳೀಯರಾಗಿ ನಮಗೆ ಪ್ರಯೋಜನವಾಗಿತ್ತು. ಬೇರೆ ಕಡೆಗಳಿಂದ ಬರುವ ಜನರ ಬಳಕೆಗೆ ಉಪಯುಕ್ತವಾಗಿದ್ದ ಈ ಶೌಚಾಲಯ ಮರು ಬಳಕೆಗೆ ಬರಬೇಕು.
ರಾಜೇಶ್ವರಿ, ಗೋಕುಲಂ ನಿವಾಸಿ.

ಬೇರೆ ಊರುಗಳಿಂದ ಆಸ್ಪತ್ರೆಗೆ ಬರುವ ಜನರು, ಲಾರಿ ಚಾಲಕರು, ಇತರೆ ಕೂಲಿ ಕಾರ್ಮಿಕರರಿಗೆ ಉಪಯುಕ್ತವಾಗಿದ್ದ ಈ ಶೌಚಾಲಯ ಮುಚ್ಚಿರುವುದು ನಿಜಕ್ಕೂ ನಷ್ಟ. ತುಂಬಾ ಅಚ್ಚುಕಟ್ಟಾಗಿ ಸಾಗುತ್ತಿದ್ದ ಈ ಶೌಚಾಲಯವನ್ನು ಮತ್ತೆ ಪ್ರಾರಂಭಿಸಬೇಕು.
ಸತೀಶ್, ಅಂಗಡಿ ಮಾಲೀಕರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

8 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

8 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

12 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

13 hours ago