Andolana originals

ಸೌಹಾರ್ದತೆಯಿಂದ ಇರುತ್ತೇವೆ: ಶಾಂತಿ ಸಭೆಯಲ್ಲಿ ಎರಡೂ ಕೋಮಿನವರ ಭರವಸೆ

ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ ನೀಡಿದರು.

ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭನವದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಎರಡೂ ಸಮುದಾಯದವರು ಪರಸ್ಪರ ಹೊಂದಾಣಿಕೆಯಿಂದ ಹೋಗುವುದಲ್ಲದೆ, ಇನ್ನು ಮುಂದೆ ಪರಸ್ಪರ ಸಹಬಾಳ್ವೆ ಮೂಲಕ ಜೀವನ ಸಾಗಿಸುವುದಾಗಿ ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತು ವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ನಾಗಮಂಗಲ ಸೌಹಾರ್ದತೆಗೆ ಹೆಸರಾಗಿದೆ. ಈಗ ನಡೆದಿರುವುದು ಆಕಸ್ಮಿಕ ಘಟನೆ. ಇದನ್ನು ಮರೆತು ಎಲ್ಲರೂ ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದರು.

ಶಾಂತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಬುಧವಾರ ರಾತ್ರಿ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಽಸಿದಂತೆ ಹಲವರನ್ನು ಪೊಲೀಸರು ಬಂಽಸಿದ್ದು, ಗಲಭೆಯಲ್ಲಿ ಭಾಗಿಯಾಗದ ಅಮಾಯಕರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗುವುದು ಎಂದು ತಿಳಿಸಿದರು. ಶಾಂತಿ ಸಭೆಯಲ್ಲಿ ಹಿಂದೂ-ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಕುಳಿತಿದ್ದರು. ಈ ಕ್ಷಣದಿಂದ ನಾವೆಲ್ಲ ಒಗ್ಗಟ್ಟಾಗಿರುತ್ತೇವೆ ಎಂದಿದ್ದಾರೆ. ಗಣಪತಿ ಹಬ್ಬವನ್ನೂ ಮಾಡು ತ್ತೇವೆ, ಮುಸ್ಲಿಂ ಹಬ್ಬಗಳಿಗೂ ಸಹಕಾರ ಕೇಳು ತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ ಎಂದರು. ಸರ್ಕಾರದಿಂದ ಪರಿಹಾರ: ಗಲಭೆಯಲ್ಲಿ ನಷ್ಕಕ್ಕೊಳಗಾದವರಿಗೆ ಪರಿಹಾರ, ಅಮಾಯ ಕರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಸರ್ಕಾರದಿಂದ ಪರಿಹಾರ ಕೊಡಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಒಂದು ಬಾರಿ ಬಂಧನವಾದರೆ ಜಾಮೀನು ಪಡೆಯಲೇಬೇಕು. ಅಮಾಯಕರೆಂದು ಖಚಿತವಾದರೆ ಜಾರ್ಜ್‌ಶೀಟ್‌ನಿಂದ ಅವರನ್ನು ಕೈಬಿಡುತ್ತೇವೆ. ಗುಂಪು ಘರ್ಷಣೆಗಳಾದಾಗ ಕೆಲವರನ್ನು ವಶಕ್ಕೆ ಪಡೆಯಲಾಗುತ್ತದೆ. ಸಿಸಿ ಕ್ಯಾಮೆರಾದ ದೃಶ್ಯಾವಳಿಯನ್ನು ನೋಡಿಯೋ ಅಥವಾ ಗುಂಪಲ್ಲಿದ್ದರು ಎನ್ನುವ ಕಾರಣಕ್ಕೋ ಬಂಽಸಿರುತ್ತಾರೆ. ಅಮಾಯಕರಿದ್ದರೆ ಖಂಡಿತವಾಗಿ ಜಾರ್ಜ್‌ಶೀಟ್ ವೇಳೆ ಅವರನ್ನು ಕೈಬಿಡುತ್ತೇವೆ ಎಂದರು.

ಈ ವಿಚಾರ ಪ್ರಸ್ತಾಪ ಬೇಡ: ಸಭೆಯಲ್ಲಿ ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಿದ್ದೇವೆ. ಸೋಮವಾರ ಮುಸ್ಲಿಮರ ಈದ್‌ಮಿಲಾದ್ ಹಬ್ಬವಿರುವುದರಿಂದ ಗಣಪತಿ ವಿಸರ್ಜನೆ ಮಾಡುವುದು ಬೇಡ ಎಂದು ತಿಳಿಸಿದ್ದೇವೆ. ನಾಗಮಂಗಲದಲ್ಲಿ ನಡೆದ ಘಟನೆಯನ್ನು ನಂಬಲು ಸಾಧ್ಯವಾಗುತ್ತಿಲ್ಲ, ರಾಜಕಾರಣಿಗಳು, ಸಂಘಟನೆಗಳು ಈ ವಿಚಾರವನ್ನು ಇನ್ನುಮುಂದೆ ಪ್ರಸ್ತಾಪ ಮಾಡುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಗಲಭೆ ಸಂಬಂಧ ವಿಶೇಷ ತನಿಖೆ: ಬಿಜೆಪಿ, ಜಾ. ದಳ ಹಾಗೂ ಕಾಂಗ್ರೆಸ್‌ನಲ್ಲಿ ಸ್ನೇಹಿತರಿದ್ದಾರೆ. ನಮ್ಮೆಲ್ಲರ ಉದ್ದೇಶ ಕರ್ನಾಟಕ ರಾಜ್ಯವು ಶಾಂತಿಯಾಗಿರಬೇಕು. ಜನರು ನೆಮ್ಮದಿಯಿಂದ ಬದುಕಬೇಕು ಎಂಬುದಾಗಿದೆ. ನಾಗಮಂಗಲ ಯಥಾಸ್ಥಿತಿಗೆ ಬಂದಿದ್ದು, ಈ ಘಟನೆ ಹಿಂದೆ ಯಾರ ಕೈವಾಡವಿದೆ ಎಂದು ತಿಳಿಯಲು ವಿಶೇಷ ತನಿಖೆ ನಡೆಸಲಾಗುವುದು ಎಂದರು. ನಷ್ಟ ಪ್ರಮಾಣ ವರದಿ ಸಿದ್ಧ ಗಲಭೆಯಿಂದಾಗಿರುವ ನಷ್ಟ ಪ್ರಮಾಣ ವರದಿ ಸಿದ್ಧವಾಗಲಿದೆ. ಅದನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಎಚ್‌ಡಿಕೆಗೆ ಅಭಿನಂದನೆ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿಕೆ ಏನೇ ಇದ್ದರೂ ನೊಂದವರಿಗೆ ಪರಿಹಾರ ಕೊಟ್ಟಿದ್ದಾರೆ, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯ ಸರ್ಕಾರದಿಂದಲೂ ಪರಿಹಾರ ಕೊಡಲಾಗುವುದು. ಈ ಸಮಯದಲ್ಲಿ ರಾಜಕೀಯ ಬೇಡ. ಬಿಜೆಪಿ ಸತ್ಯಶೋಧನಾ ಸಮಿತಿ ವರದಿಯನ್ನು ಕೊಡಲಿ. ನಾಗಮಂಗಲದಲ್ಲಿ ಮತ್ತೆ ಶಾಂತಿ ಸ್ಥಾಪನೆ ಆಗಬೇಕು. ಈ ಘಟನೆ ಇಲ್ಲಿಗೆ ನಿಲ್ಲಲು ಮಾಧ್ಯಮದವರ ಸಹಕಾರ ಬೇಕು. – ಎನ್. ಚಲುವರಾಯಸ್ವಾಮಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago