Andolana originals

ಸೌಹಾರ್ದತೆಯಿಂದ ಇರುತ್ತೇವೆ: ಶಾಂತಿ ಸಭೆಯಲ್ಲಿ ಎರಡೂ ಕೋಮಿನವರ ಭರವಸೆ

ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ ನೀಡಿದರು.

ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭನವದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಎರಡೂ ಸಮುದಾಯದವರು ಪರಸ್ಪರ ಹೊಂದಾಣಿಕೆಯಿಂದ ಹೋಗುವುದಲ್ಲದೆ, ಇನ್ನು ಮುಂದೆ ಪರಸ್ಪರ ಸಹಬಾಳ್ವೆ ಮೂಲಕ ಜೀವನ ಸಾಗಿಸುವುದಾಗಿ ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತು ವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ನಾಗಮಂಗಲ ಸೌಹಾರ್ದತೆಗೆ ಹೆಸರಾಗಿದೆ. ಈಗ ನಡೆದಿರುವುದು ಆಕಸ್ಮಿಕ ಘಟನೆ. ಇದನ್ನು ಮರೆತು ಎಲ್ಲರೂ ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದರು.

ಶಾಂತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಬುಧವಾರ ರಾತ್ರಿ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಽಸಿದಂತೆ ಹಲವರನ್ನು ಪೊಲೀಸರು ಬಂಽಸಿದ್ದು, ಗಲಭೆಯಲ್ಲಿ ಭಾಗಿಯಾಗದ ಅಮಾಯಕರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗುವುದು ಎಂದು ತಿಳಿಸಿದರು. ಶಾಂತಿ ಸಭೆಯಲ್ಲಿ ಹಿಂದೂ-ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಕುಳಿತಿದ್ದರು. ಈ ಕ್ಷಣದಿಂದ ನಾವೆಲ್ಲ ಒಗ್ಗಟ್ಟಾಗಿರುತ್ತೇವೆ ಎಂದಿದ್ದಾರೆ. ಗಣಪತಿ ಹಬ್ಬವನ್ನೂ ಮಾಡು ತ್ತೇವೆ, ಮುಸ್ಲಿಂ ಹಬ್ಬಗಳಿಗೂ ಸಹಕಾರ ಕೇಳು ತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ ಎಂದರು. ಸರ್ಕಾರದಿಂದ ಪರಿಹಾರ: ಗಲಭೆಯಲ್ಲಿ ನಷ್ಕಕ್ಕೊಳಗಾದವರಿಗೆ ಪರಿಹಾರ, ಅಮಾಯ ಕರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಸರ್ಕಾರದಿಂದ ಪರಿಹಾರ ಕೊಡಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಒಂದು ಬಾರಿ ಬಂಧನವಾದರೆ ಜಾಮೀನು ಪಡೆಯಲೇಬೇಕು. ಅಮಾಯಕರೆಂದು ಖಚಿತವಾದರೆ ಜಾರ್ಜ್‌ಶೀಟ್‌ನಿಂದ ಅವರನ್ನು ಕೈಬಿಡುತ್ತೇವೆ. ಗುಂಪು ಘರ್ಷಣೆಗಳಾದಾಗ ಕೆಲವರನ್ನು ವಶಕ್ಕೆ ಪಡೆಯಲಾಗುತ್ತದೆ. ಸಿಸಿ ಕ್ಯಾಮೆರಾದ ದೃಶ್ಯಾವಳಿಯನ್ನು ನೋಡಿಯೋ ಅಥವಾ ಗುಂಪಲ್ಲಿದ್ದರು ಎನ್ನುವ ಕಾರಣಕ್ಕೋ ಬಂಽಸಿರುತ್ತಾರೆ. ಅಮಾಯಕರಿದ್ದರೆ ಖಂಡಿತವಾಗಿ ಜಾರ್ಜ್‌ಶೀಟ್ ವೇಳೆ ಅವರನ್ನು ಕೈಬಿಡುತ್ತೇವೆ ಎಂದರು.

ಈ ವಿಚಾರ ಪ್ರಸ್ತಾಪ ಬೇಡ: ಸಭೆಯಲ್ಲಿ ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಿದ್ದೇವೆ. ಸೋಮವಾರ ಮುಸ್ಲಿಮರ ಈದ್‌ಮಿಲಾದ್ ಹಬ್ಬವಿರುವುದರಿಂದ ಗಣಪತಿ ವಿಸರ್ಜನೆ ಮಾಡುವುದು ಬೇಡ ಎಂದು ತಿಳಿಸಿದ್ದೇವೆ. ನಾಗಮಂಗಲದಲ್ಲಿ ನಡೆದ ಘಟನೆಯನ್ನು ನಂಬಲು ಸಾಧ್ಯವಾಗುತ್ತಿಲ್ಲ, ರಾಜಕಾರಣಿಗಳು, ಸಂಘಟನೆಗಳು ಈ ವಿಚಾರವನ್ನು ಇನ್ನುಮುಂದೆ ಪ್ರಸ್ತಾಪ ಮಾಡುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಗಲಭೆ ಸಂಬಂಧ ವಿಶೇಷ ತನಿಖೆ: ಬಿಜೆಪಿ, ಜಾ. ದಳ ಹಾಗೂ ಕಾಂಗ್ರೆಸ್‌ನಲ್ಲಿ ಸ್ನೇಹಿತರಿದ್ದಾರೆ. ನಮ್ಮೆಲ್ಲರ ಉದ್ದೇಶ ಕರ್ನಾಟಕ ರಾಜ್ಯವು ಶಾಂತಿಯಾಗಿರಬೇಕು. ಜನರು ನೆಮ್ಮದಿಯಿಂದ ಬದುಕಬೇಕು ಎಂಬುದಾಗಿದೆ. ನಾಗಮಂಗಲ ಯಥಾಸ್ಥಿತಿಗೆ ಬಂದಿದ್ದು, ಈ ಘಟನೆ ಹಿಂದೆ ಯಾರ ಕೈವಾಡವಿದೆ ಎಂದು ತಿಳಿಯಲು ವಿಶೇಷ ತನಿಖೆ ನಡೆಸಲಾಗುವುದು ಎಂದರು. ನಷ್ಟ ಪ್ರಮಾಣ ವರದಿ ಸಿದ್ಧ ಗಲಭೆಯಿಂದಾಗಿರುವ ನಷ್ಟ ಪ್ರಮಾಣ ವರದಿ ಸಿದ್ಧವಾಗಲಿದೆ. ಅದನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಎಚ್‌ಡಿಕೆಗೆ ಅಭಿನಂದನೆ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿಕೆ ಏನೇ ಇದ್ದರೂ ನೊಂದವರಿಗೆ ಪರಿಹಾರ ಕೊಟ್ಟಿದ್ದಾರೆ, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯ ಸರ್ಕಾರದಿಂದಲೂ ಪರಿಹಾರ ಕೊಡಲಾಗುವುದು. ಈ ಸಮಯದಲ್ಲಿ ರಾಜಕೀಯ ಬೇಡ. ಬಿಜೆಪಿ ಸತ್ಯಶೋಧನಾ ಸಮಿತಿ ವರದಿಯನ್ನು ಕೊಡಲಿ. ನಾಗಮಂಗಲದಲ್ಲಿ ಮತ್ತೆ ಶಾಂತಿ ಸ್ಥಾಪನೆ ಆಗಬೇಕು. ಈ ಘಟನೆ ಇಲ್ಲಿಗೆ ನಿಲ್ಲಲು ಮಾಧ್ಯಮದವರ ಸಹಕಾರ ಬೇಕು. – ಎನ್. ಚಲುವರಾಯಸ್ವಾಮಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು

andolana

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

9 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

10 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

11 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

11 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

11 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

12 hours ago