Andolana originals

ಪಿಂಚಣಿ ನಿರ್ವಹಣೆಯೇ ದೊಡ್ಡ ಭಾರ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮೈಸೂರು ವಿಶ್ವ ವಿದ್ಯಾನಿಲಯ ಮಹಾಲೇಖಪಾಲರ ಕಚೇರಿಯಿಂದಲೇ ಭರಿಸಲು ವಿವಿ ಮೊರೆ

– ಕೆ.ಬಿ.ರಮೇಶನಾಯಕ

ಮೈಸೂರು:ರಾಜ್ಯಸರ್ಕಾರದಿಂದ ನಿರೀಕ್ಷಿತ ಅನುದಾನ ಬಾರದಿರುವುದು, ಆಂತರಿಕ ಆರ್ಥಿಕ ಸಂಪನ್ಮೂಲ ಕೊರತೆ, ಯುಜಿಸಿ ಅನುದಾನದಲ್ಲಿನ ಕಡಿತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪಿಂಚಣಿ ನಿರ್ವಹಣೆಯೇ ದೊಡ್ಡ ಭಾರವಾಗಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಪಿಂಚಣಿ ಭಾರವನ್ನು ತಗ್ಗಿಸಲು ಮಹಾಲೇಖಪಾಲರ ಕಚೇರಿಯಿಂದಲೇ ನೇರವಾಗಿ ಭರಿಸುವಂತೆ ವಿವಿಯು ಸರ್ಕಾರದ ಮೊರೆ ಹೊಕ್ಕಿದೆ.

ಈಗಾಗಲೇ ವಿವಿಯಲ್ಲಿ ತಲೆ ಎತ್ತಿ ನಿಂತಿರುವ ನೂತನ ಕಟ್ಟಡಗಳ ನಿರ್ಮಾಣದ ಗುತ್ತಿಗೆದಾರರಿಗೆ ಬಾಕಿ ಪಾವತಿಸಲಾಗದೆ ಬೀಗ ಹಸ್ತಾಂತರ ಪ್ರಕ್ರಿಯೆ ಆಗದಿರುವ ಹೊತ್ತಿನಲ್ಲಿ ಪಿಂಚಣಿದಾರರ ಸಮಸ್ಯೆ ನಿವಾರಿಸಲಾಗದ ಸಂಕಟಕ್ಕೆ ಸಿಲುಕಿದೆ. ಹೀಗಾಗಿ, ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರು ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ವಿವಿಯು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ವಾರ್ಷಿಕ ಅಂದಾಜು 150 ಕೋಟಿ ರೂ. ಅನುದಾನ ಅಗತ್ಯ: ಶತಮಾನವನ್ನು ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಯಂ ಬೋಧಕ-ಬೋಧಕೇತರ ನೌಕರರ ಪ್ರಮಾಣ ವರ್ಷದಿಂದ ವರ್ಷಕ್ಕೆ
ಕುಗ್ಗುತ್ತಲೇ ಇದ್ದು, ಮತ್ತೊಂದೆಡೆ ಅತಿಥಿ ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಲಾಗಿದೆ. ದಶಕಗಳಿಂದ ಸೇವಾ ನಿವೃತ್ತಿ ಪಡೆದಿರುವ 1,840 ಪಿಂಚಣಿದಾರರು ಇದ್ದು, ಪ್ರತಿ ತಿಂಗಳು ಅಂದಾಜು 9.5 ಕೋಟಿ ರೂ. ಪಿಂಚಣಿ
ಪಾವತಿಸಬೇಕಿದೆ.

ವಿವಿಗಳ ಖಾಲಿ ಹುದ್ದೆ ಶೀಘ್ರ ಭರ್ತಿ

2,800 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ ಎಂದರು. ವಿವಿಗಳ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಹೊಸ ವಿವಿ ತೆರೆಯುವಾಗ ಹೊಣೆಗಾರಿಕೆ ಬಗ್ಗೆ ಯೋಚನೆ ಮಾಡಿಲ್ಲ. ಪಿಂಚಣಿ ಯೋಜನೆ ಹೊಸ ವಿವಿಗಳಿಗೂ ಸಿಗಬೇಕಿತ್ತು, ಆದರೆ ಆಗಿಲ್ಲ. 70 ಕೋಟಿ ರೂ.ವರೆಗೂ ಹೊಣೆಗಾರಿಕೆ ಕೊಡಲಾಗಿದೆ. ಪದವೀಧರ ಮತ್ತು ಶಿಕ್ಷಣ ಕ್ಷೇತ್ರದವರ ಜೊತೆ ಚರ್ಚೆ ಮಾಡಿದ್ದೇವೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಹಣಕಾಸು ಇಲಾಖೆ ಕೂಡ ತನ್ನದೇ ಆದ ಜವಾಬ್ದಾರಿ ಹೊಂದಿದೆ ಎಂದು ಸಚಿವರು ಹೇಳಿದರು.

ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಪಿಂಚಣಿದಾರರಿಗೆ ನಿಗದಿತ ಸಮಯದಲ್ಲಿ ಪಿಂಚಣಿ ಪಾವತಿಗೆ ಸಮಸ್ಯೆಯಾಗಿದೆ. ಆಂತರಿಕ ಸಂಪನ್ಮೂಲದಲ್ಲೂ ಕೊರತೆಯಾಗಿರುವುದರಿಂದ ನಿರ್ವಹಣೆ ಮಾಡುವುದಕ್ಕೆ ತೊಂದರೆಯಾಗಿದೆ.

-ಪ್ರೊ.ಎನ್‌.ಕೆ.ಲೋಕನಾಥ್‌, ಕುಲಪತಿ.

 

 

ಆಂದೋಲನ ಡೆಸ್ಕ್

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

23 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

40 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

55 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago