Andolana originals

ಪಿಂಚಣಿ ನಿರ್ವಹಣೆಯೇ ದೊಡ್ಡ ಭಾರ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮೈಸೂರು ವಿಶ್ವ ವಿದ್ಯಾನಿಲಯ ಮಹಾಲೇಖಪಾಲರ ಕಚೇರಿಯಿಂದಲೇ ಭರಿಸಲು ವಿವಿ ಮೊರೆ

– ಕೆ.ಬಿ.ರಮೇಶನಾಯಕ

ಮೈಸೂರು:ರಾಜ್ಯಸರ್ಕಾರದಿಂದ ನಿರೀಕ್ಷಿತ ಅನುದಾನ ಬಾರದಿರುವುದು, ಆಂತರಿಕ ಆರ್ಥಿಕ ಸಂಪನ್ಮೂಲ ಕೊರತೆ, ಯುಜಿಸಿ ಅನುದಾನದಲ್ಲಿನ ಕಡಿತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪಿಂಚಣಿ ನಿರ್ವಹಣೆಯೇ ದೊಡ್ಡ ಭಾರವಾಗಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಪಿಂಚಣಿ ಭಾರವನ್ನು ತಗ್ಗಿಸಲು ಮಹಾಲೇಖಪಾಲರ ಕಚೇರಿಯಿಂದಲೇ ನೇರವಾಗಿ ಭರಿಸುವಂತೆ ವಿವಿಯು ಸರ್ಕಾರದ ಮೊರೆ ಹೊಕ್ಕಿದೆ.

ಈಗಾಗಲೇ ವಿವಿಯಲ್ಲಿ ತಲೆ ಎತ್ತಿ ನಿಂತಿರುವ ನೂತನ ಕಟ್ಟಡಗಳ ನಿರ್ಮಾಣದ ಗುತ್ತಿಗೆದಾರರಿಗೆ ಬಾಕಿ ಪಾವತಿಸಲಾಗದೆ ಬೀಗ ಹಸ್ತಾಂತರ ಪ್ರಕ್ರಿಯೆ ಆಗದಿರುವ ಹೊತ್ತಿನಲ್ಲಿ ಪಿಂಚಣಿದಾರರ ಸಮಸ್ಯೆ ನಿವಾರಿಸಲಾಗದ ಸಂಕಟಕ್ಕೆ ಸಿಲುಕಿದೆ. ಹೀಗಾಗಿ, ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರು ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ವಿವಿಯು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ವಾರ್ಷಿಕ ಅಂದಾಜು 150 ಕೋಟಿ ರೂ. ಅನುದಾನ ಅಗತ್ಯ: ಶತಮಾನವನ್ನು ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಯಂ ಬೋಧಕ-ಬೋಧಕೇತರ ನೌಕರರ ಪ್ರಮಾಣ ವರ್ಷದಿಂದ ವರ್ಷಕ್ಕೆ
ಕುಗ್ಗುತ್ತಲೇ ಇದ್ದು, ಮತ್ತೊಂದೆಡೆ ಅತಿಥಿ ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಲಾಗಿದೆ. ದಶಕಗಳಿಂದ ಸೇವಾ ನಿವೃತ್ತಿ ಪಡೆದಿರುವ 1,840 ಪಿಂಚಣಿದಾರರು ಇದ್ದು, ಪ್ರತಿ ತಿಂಗಳು ಅಂದಾಜು 9.5 ಕೋಟಿ ರೂ. ಪಿಂಚಣಿ
ಪಾವತಿಸಬೇಕಿದೆ.

ವಿವಿಗಳ ಖಾಲಿ ಹುದ್ದೆ ಶೀಘ್ರ ಭರ್ತಿ

2,800 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ ಎಂದರು. ವಿವಿಗಳ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಹೊಸ ವಿವಿ ತೆರೆಯುವಾಗ ಹೊಣೆಗಾರಿಕೆ ಬಗ್ಗೆ ಯೋಚನೆ ಮಾಡಿಲ್ಲ. ಪಿಂಚಣಿ ಯೋಜನೆ ಹೊಸ ವಿವಿಗಳಿಗೂ ಸಿಗಬೇಕಿತ್ತು, ಆದರೆ ಆಗಿಲ್ಲ. 70 ಕೋಟಿ ರೂ.ವರೆಗೂ ಹೊಣೆಗಾರಿಕೆ ಕೊಡಲಾಗಿದೆ. ಪದವೀಧರ ಮತ್ತು ಶಿಕ್ಷಣ ಕ್ಷೇತ್ರದವರ ಜೊತೆ ಚರ್ಚೆ ಮಾಡಿದ್ದೇವೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಹಣಕಾಸು ಇಲಾಖೆ ಕೂಡ ತನ್ನದೇ ಆದ ಜವಾಬ್ದಾರಿ ಹೊಂದಿದೆ ಎಂದು ಸಚಿವರು ಹೇಳಿದರು.

ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಪಿಂಚಣಿದಾರರಿಗೆ ನಿಗದಿತ ಸಮಯದಲ್ಲಿ ಪಿಂಚಣಿ ಪಾವತಿಗೆ ಸಮಸ್ಯೆಯಾಗಿದೆ. ಆಂತರಿಕ ಸಂಪನ್ಮೂಲದಲ್ಲೂ ಕೊರತೆಯಾಗಿರುವುದರಿಂದ ನಿರ್ವಹಣೆ ಮಾಡುವುದಕ್ಕೆ ತೊಂದರೆಯಾಗಿದೆ.

-ಪ್ರೊ.ಎನ್‌.ಕೆ.ಲೋಕನಾಥ್‌, ಕುಲಪತಿ.

 

 

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

40 mins ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

4 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

4 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

4 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

4 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

4 hours ago