Andolana originals

ಪಿಂಚಣಿ ನಿರ್ವಹಣೆಯೇ ದೊಡ್ಡ ಭಾರ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮೈಸೂರು ವಿಶ್ವ ವಿದ್ಯಾನಿಲಯ ಮಹಾಲೇಖಪಾಲರ ಕಚೇರಿಯಿಂದಲೇ ಭರಿಸಲು ವಿವಿ ಮೊರೆ

– ಕೆ.ಬಿ.ರಮೇಶನಾಯಕ

ಮೈಸೂರು:ರಾಜ್ಯಸರ್ಕಾರದಿಂದ ನಿರೀಕ್ಷಿತ ಅನುದಾನ ಬಾರದಿರುವುದು, ಆಂತರಿಕ ಆರ್ಥಿಕ ಸಂಪನ್ಮೂಲ ಕೊರತೆ, ಯುಜಿಸಿ ಅನುದಾನದಲ್ಲಿನ ಕಡಿತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪಿಂಚಣಿ ನಿರ್ವಹಣೆಯೇ ದೊಡ್ಡ ಭಾರವಾಗಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಪಿಂಚಣಿ ಭಾರವನ್ನು ತಗ್ಗಿಸಲು ಮಹಾಲೇಖಪಾಲರ ಕಚೇರಿಯಿಂದಲೇ ನೇರವಾಗಿ ಭರಿಸುವಂತೆ ವಿವಿಯು ಸರ್ಕಾರದ ಮೊರೆ ಹೊಕ್ಕಿದೆ.

ಈಗಾಗಲೇ ವಿವಿಯಲ್ಲಿ ತಲೆ ಎತ್ತಿ ನಿಂತಿರುವ ನೂತನ ಕಟ್ಟಡಗಳ ನಿರ್ಮಾಣದ ಗುತ್ತಿಗೆದಾರರಿಗೆ ಬಾಕಿ ಪಾವತಿಸಲಾಗದೆ ಬೀಗ ಹಸ್ತಾಂತರ ಪ್ರಕ್ರಿಯೆ ಆಗದಿರುವ ಹೊತ್ತಿನಲ್ಲಿ ಪಿಂಚಣಿದಾರರ ಸಮಸ್ಯೆ ನಿವಾರಿಸಲಾಗದ ಸಂಕಟಕ್ಕೆ ಸಿಲುಕಿದೆ. ಹೀಗಾಗಿ, ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯರು ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ವಿವಿಯು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ವಾರ್ಷಿಕ ಅಂದಾಜು 150 ಕೋಟಿ ರೂ. ಅನುದಾನ ಅಗತ್ಯ: ಶತಮಾನವನ್ನು ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಯಂ ಬೋಧಕ-ಬೋಧಕೇತರ ನೌಕರರ ಪ್ರಮಾಣ ವರ್ಷದಿಂದ ವರ್ಷಕ್ಕೆ
ಕುಗ್ಗುತ್ತಲೇ ಇದ್ದು, ಮತ್ತೊಂದೆಡೆ ಅತಿಥಿ ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಲಾಗಿದೆ. ದಶಕಗಳಿಂದ ಸೇವಾ ನಿವೃತ್ತಿ ಪಡೆದಿರುವ 1,840 ಪಿಂಚಣಿದಾರರು ಇದ್ದು, ಪ್ರತಿ ತಿಂಗಳು ಅಂದಾಜು 9.5 ಕೋಟಿ ರೂ. ಪಿಂಚಣಿ
ಪಾವತಿಸಬೇಕಿದೆ.

ವಿವಿಗಳ ಖಾಲಿ ಹುದ್ದೆ ಶೀಘ್ರ ಭರ್ತಿ

2,800 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ ಎಂದರು. ವಿವಿಗಳ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಹೊಸ ವಿವಿ ತೆರೆಯುವಾಗ ಹೊಣೆಗಾರಿಕೆ ಬಗ್ಗೆ ಯೋಚನೆ ಮಾಡಿಲ್ಲ. ಪಿಂಚಣಿ ಯೋಜನೆ ಹೊಸ ವಿವಿಗಳಿಗೂ ಸಿಗಬೇಕಿತ್ತು, ಆದರೆ ಆಗಿಲ್ಲ. 70 ಕೋಟಿ ರೂ.ವರೆಗೂ ಹೊಣೆಗಾರಿಕೆ ಕೊಡಲಾಗಿದೆ. ಪದವೀಧರ ಮತ್ತು ಶಿಕ್ಷಣ ಕ್ಷೇತ್ರದವರ ಜೊತೆ ಚರ್ಚೆ ಮಾಡಿದ್ದೇವೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಹಣಕಾಸು ಇಲಾಖೆ ಕೂಡ ತನ್ನದೇ ಆದ ಜವಾಬ್ದಾರಿ ಹೊಂದಿದೆ ಎಂದು ಸಚಿವರು ಹೇಳಿದರು.

ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಪಿಂಚಣಿದಾರರಿಗೆ ನಿಗದಿತ ಸಮಯದಲ್ಲಿ ಪಿಂಚಣಿ ಪಾವತಿಗೆ ಸಮಸ್ಯೆಯಾಗಿದೆ. ಆಂತರಿಕ ಸಂಪನ್ಮೂಲದಲ್ಲೂ ಕೊರತೆಯಾಗಿರುವುದರಿಂದ ನಿರ್ವಹಣೆ ಮಾಡುವುದಕ್ಕೆ ತೊಂದರೆಯಾಗಿದೆ.

-ಪ್ರೊ.ಎನ್‌.ಕೆ.ಲೋಕನಾಥ್‌, ಕುಲಪತಿ.

 

 

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

43 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago