Andolana originals

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ

ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ

ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ ಕ್ರಷರ್ ಯಾವುದೇ ಅನುಮತಿ ಪಡೆಯದೆ, ನಿಯಮಾವಳಿ ಪಾಲಿಸದೆ, ಯಾವುದೇ ತಡೆಗೋಡೆ ಇಲ್ಲದೆಕ್ರಷರ್ ನಡೆಯುತ್ತಿದ್ದು, ಇದರಿಂದ ಅಕ್ಕಪಕ್ಕದ ಜಮೀನುಗಳಿಗೆ ದೂಳು ಬರುತ್ತಿದ್ದು, ಶಬ್ದಮಾಲಿನ್ಯವಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅನುಮತಿ ಪಡೆಯದೆ ದಿನದ ೨೪ ಗಂಟೆ ಜನರೇಟರ್ ಬಳಕೆಯಿಂದ ಕ್ರಷರ್ ನಡೆಸಿ ಕಲ್ಲು ಒಡೆಯುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಜಮೀನುಗಳಲ್ಲಿರುವ ಬೆಳೆ ಹಾನಿಯಾಗಿ ಹಾಗೂ ದೂಳು ಮಡಹಳ್ಳಿ ಗ್ರಾಮದವರೆಗೂ ತಲುಪುತ್ತಿದ್ದು ಗಣಿ ಭೂ ವಿಜ್ಞಾನ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಲ್ಲುಪುಡಿ ಕಾರ್ಖಾನೆಯು ಗ್ರಾಮ ಪಂಚಾಯಿತಿಗೆ ಅನ್ಯಕ್ರಾಂತ ಆದೇಶ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಕ್ಷೆ, ಆದೇಶಗಳು ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಿ ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣ ಕಾರ್ಖಾನೆ ಸ್ಥಗಿತಗೊಳಿಸಬೇಕು ಎಂದು ಗ್ರಾಪಂನಿಂದ ನೋಟಿಸ್ ನೀಡಿದ್ದರೂ ಕೆಲಸ ನಡೆಯುತ್ತಿದೆ ಎಂಬುದು ಗ್ರಾಮಸ್ಥರ ಆರೋಪ.

ನಿಯಮಾನುಸಾರ ಅನುಮತಿ ಹಾಗೂ ಕಟ್ಟಡ ಲೈಸೆನ್ಸ್ ಪಡೆದು ನಿರ್ಮಾಣ ಕಾರ್ಯ ಮಾಡಬೇಕು ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತೊಮ್ಮೆ ನೋಟಿಸ್ ಕೂಡ ನೀಡಿದ್ದಾರೆ.

” ಅಕ್ರಮವಾಗಿ ಕ್ರಷರ್ ನಡೆಸುತ್ತಿದ್ದು ಯಾವುದೇ ದಾಖಲಾತಿ ಒದಗಿಸಿಲ್ಲ. ಗ್ರಾ.ಪಂ.ನಿಂದ ಅನುಮತಿ, ಇ-ಸ್ವತ್ತು, ಎನ್‌ಒಸಿ ಪಡೆಯದೆ ನಿಯಮ ಉಲ್ಲಂಘಿಸಿ ಕ್ರಷರ್ ನಡೆಸುತ್ತಿದ್ದು ಮೂರು ಬಾರಿ ನೋಟಿಸ್ ನೀಡಲಾಗಿದ್ದು ಮುಂದೆ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳಲಾಗುವುದು.”

ಪ್ರಸಾದ್, ಮೂಕಹಳ್ಳಿ, ಪಿಡಿಒ, ಗ್ರಾಪಂ

” ಅಕ್ರಮವಾಗಿ ರಾಜಾರೋಷವಾಗಿ ಕ್ರಷರ್ ನಡೆಯುತ್ತಿದ್ದರೂ ಸಂಬಂಽಸಿದ ಇಲಾಖೆ ಮೌನ ವಹಿಸಿದೆ. ಅಲ್ಲದೆ, ಸುತ್ತುಗೋಡೆ ನಿರ್ಮಿಸದ ಕಾರಣ ದೂಳು ಅಕ್ಕಪಕ್ಕದ ಜಮೀನಿಗೆ ಬರುವುದರಿಂದ ಬೆಳೆ ನಾಶವಾಗುತ್ತಿದೆ. ಗ್ರಾಮಕ್ಕೂ ದೂಳು ಆವರಿಸುತ್ತಿದೆ. ಸಂಬಂಧಪಟ್ಟ ಅಽಕಾರಿಗಳು ಕ್ರಮ ವಹಿಸದಿದ್ದರೆ ಕಾನೂನು ಹೋರಾಟ ಮಾಡಲಾಗುವುದು.”

ಜೀವನ್‌ಹೊನ್ನ, ಮಡಹಳ್ಳಿ ಗ್ರಾಮಸ್ಥ 

 

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

41 mins ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

1 hour ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

1 hour ago

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

3 hours ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

3 hours ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

4 hours ago