ಮಹೇಂದ್ರ ಹಸಗೂಲಿ
ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ
ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ ಕ್ರಷರ್ ಯಾವುದೇ ಅನುಮತಿ ಪಡೆಯದೆ, ನಿಯಮಾವಳಿ ಪಾಲಿಸದೆ, ಯಾವುದೇ ತಡೆಗೋಡೆ ಇಲ್ಲದೆಕ್ರಷರ್ ನಡೆಯುತ್ತಿದ್ದು, ಇದರಿಂದ ಅಕ್ಕಪಕ್ಕದ ಜಮೀನುಗಳಿಗೆ ದೂಳು ಬರುತ್ತಿದ್ದು, ಶಬ್ದಮಾಲಿನ್ಯವಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಅನುಮತಿ ಪಡೆಯದೆ ದಿನದ ೨೪ ಗಂಟೆ ಜನರೇಟರ್ ಬಳಕೆಯಿಂದ ಕ್ರಷರ್ ನಡೆಸಿ ಕಲ್ಲು ಒಡೆಯುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಜಮೀನುಗಳಲ್ಲಿರುವ ಬೆಳೆ ಹಾನಿಯಾಗಿ ಹಾಗೂ ದೂಳು ಮಡಹಳ್ಳಿ ಗ್ರಾಮದವರೆಗೂ ತಲುಪುತ್ತಿದ್ದು ಗಣಿ ಭೂ ವಿಜ್ಞಾನ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಲ್ಲುಪುಡಿ ಕಾರ್ಖಾನೆಯು ಗ್ರಾಮ ಪಂಚಾಯಿತಿಗೆ ಅನ್ಯಕ್ರಾಂತ ಆದೇಶ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಕ್ಷೆ, ಆದೇಶಗಳು ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಿ ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣ ಕಾರ್ಖಾನೆ ಸ್ಥಗಿತಗೊಳಿಸಬೇಕು ಎಂದು ಗ್ರಾಪಂನಿಂದ ನೋಟಿಸ್ ನೀಡಿದ್ದರೂ ಕೆಲಸ ನಡೆಯುತ್ತಿದೆ ಎಂಬುದು ಗ್ರಾಮಸ್ಥರ ಆರೋಪ.
ನಿಯಮಾನುಸಾರ ಅನುಮತಿ ಹಾಗೂ ಕಟ್ಟಡ ಲೈಸೆನ್ಸ್ ಪಡೆದು ನಿರ್ಮಾಣ ಕಾರ್ಯ ಮಾಡಬೇಕು ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತೊಮ್ಮೆ ನೋಟಿಸ್ ಕೂಡ ನೀಡಿದ್ದಾರೆ.
” ಅಕ್ರಮವಾಗಿ ಕ್ರಷರ್ ನಡೆಸುತ್ತಿದ್ದು ಯಾವುದೇ ದಾಖಲಾತಿ ಒದಗಿಸಿಲ್ಲ. ಗ್ರಾ.ಪಂ.ನಿಂದ ಅನುಮತಿ, ಇ-ಸ್ವತ್ತು, ಎನ್ಒಸಿ ಪಡೆಯದೆ ನಿಯಮ ಉಲ್ಲಂಘಿಸಿ ಕ್ರಷರ್ ನಡೆಸುತ್ತಿದ್ದು ಮೂರು ಬಾರಿ ನೋಟಿಸ್ ನೀಡಲಾಗಿದ್ದು ಮುಂದೆ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳಲಾಗುವುದು.”
ಪ್ರಸಾದ್, ಮೂಕಹಳ್ಳಿ, ಪಿಡಿಒ, ಗ್ರಾಪಂ
” ಅಕ್ರಮವಾಗಿ ರಾಜಾರೋಷವಾಗಿ ಕ್ರಷರ್ ನಡೆಯುತ್ತಿದ್ದರೂ ಸಂಬಂಽಸಿದ ಇಲಾಖೆ ಮೌನ ವಹಿಸಿದೆ. ಅಲ್ಲದೆ, ಸುತ್ತುಗೋಡೆ ನಿರ್ಮಿಸದ ಕಾರಣ ದೂಳು ಅಕ್ಕಪಕ್ಕದ ಜಮೀನಿಗೆ ಬರುವುದರಿಂದ ಬೆಳೆ ನಾಶವಾಗುತ್ತಿದೆ. ಗ್ರಾಮಕ್ಕೂ ದೂಳು ಆವರಿಸುತ್ತಿದೆ. ಸಂಬಂಧಪಟ್ಟ ಅಽಕಾರಿಗಳು ಕ್ರಮ ವಹಿಸದಿದ್ದರೆ ಕಾನೂನು ಹೋರಾಟ ಮಾಡಲಾಗುವುದು.”
ಜೀವನ್ಹೊನ್ನ, ಮಡಹಳ್ಳಿ ಗ್ರಾಮಸ್ಥ
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…