Andolana originals

ದುಬಾರೆ ತೂಗುಸೇತುವೆ ನಿರ್ಮಾಣದ ನಿರೀಕ್ಷೆಯಲ್ಲಿ ಜನತೆ

ನವೀನ್ ಡಿಸೋಜ

ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ

ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು ಸೇತುವೆ ನಿರ್ಮಾಣಕ್ಕೆ ಸರ್ಕಾರ ಹಣ ಮಂಜೂರು ಮಾಡಿದೆ ಎನ್ನಲಾಗುತ್ತಿದ್ದರೂ ಕಾಮಗಾರಿ ಆರಂಭವಾಗದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಶೀಘ್ರದಲ್ಲೇ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಿ, ಸ್ಥಳೀಯರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

ನಂಜರಾಯಪಟ್ಟಣ ಮಾರ್ಗವಾಗಿ ದುಬಾರೆ ಸಾಕಾನೆ ಶಿಬಿರಕ್ಕೆ ತೆರಳುವವರು ಕಾವೇರಿ ನದಿಯನ್ನು ದಾಟಲೇಬೇಕು. ಏಪ್ರಿಲ್, ಮೇ ತಿಂಗಳ ಬೇಸಿಗೆ ಅವಧಿಯಲ್ಲಿ ನದಿಯಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ ಅಲ್ಲಿರುವ ಒಂದೊಂದು ಕಲ್ಲಿನ ಮೇಲೆ ಕಾಲಿಟ್ಟುಕೊಂಡು ಆನೆ ಕ್ಯಾಂಪ್ ತಲುಪಬಹುದು. ಈ ಸಂದರ್ಭದಲ್ಲಿ ಎಚ್ಚರ ತಪ್ಪಿದರೆ ನೀರಿಗೆ ಬೀಳುವ ಅಪಾಯವೂ ಇದೆ. ಈ ಹಿಂದಿನ ವರ್ಷಗಳಲ್ಲಿ ಈ ರೀತಿ ನದಿ ದಾಟಲು ಹೋಗಿ ೧೨ಕ್ಕೂ ಹೆಚ್ಚು ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟ ನಿದರ್ಶನಗಳೂ ಇವೆ.

ಜೂನ್ ನಂತರ ಮಳೆಗಾಲದಲ್ಲಿ ಕಾವೇರಿ ನದಿ ತುಂಬಿ ಹರಿಯುವುದರಿಂದ ನದಿ ದಾಟಲು ಕಷ್ಟಪಡಬೇಕಾಗುತ್ತದೆ. ಈ ಸಂದರ್ಭದಲ್ಲಿಯಾಂತ್ರೀಕೃತ ದೋಣಿಗಳನ್ನು ಉಪ ಯೋಗಿಸಲಾಗುತ್ತದೆ. ದುಬಾರೆ ದ್ವೀಪದಲ್ಲಿರುವ ಗಿರಿಜನರ ಓಡಾಟಕ್ಕೆ, ಪ್ರವಾಸಿಗರನ್ನು ಕರೆದೊಯ್ಯಲು ಈ ದೋಣಿಗಳನ್ನು ಬಳಸಲಾಗುತ್ತದೆ.

ಒಂದು ದೋಣಿ ದಿನಕ್ಕೆ ಕನಿಷ್ಠ ೧೦ ಬಾರಿಯಾದರೂ ನದಿಯ ಎರಡೂ ದಂಡೆಗಳ ಮಧ್ಯೆ ಓಡಾಡುತ್ತದೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವ ರಜಾ ದಿನಗಳಲ್ಲಂತೂ ದೋಣಿಗಳ ಟ್ರಿಪ್ ಸಂಖ್ಯೆ ಇನ್ನೂ ಹೆಚ್ಚಿರುತ್ತದೆ. ಇದರಿಂದಾಗಿ ಇಲ್ಲಿಯ ಸೂಕ್ಷ್ಮ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಆಗುತ್ತಿವೆ. ದುಬಾರೆಯಲ್ಲಿ ತೂಗು ಸೇತುವೆ ನಿರ್ಮಾಣವಾದರೆ ನದಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಸಂಪರ್ಕ ಸುಲಭವಾಗಲಿದೆ.

ದುಬಾರೆಗೆ ತೂಗು ಸೇತುವೆ ಬೇಕು ಎಂಬ ಸ್ಥಳೀಯರ ಬೇಡಿಕೆಯನ್ನು ಸರ್ಕಾರದ ಮುಂದೆ ಮಂಡಿಸಿದ್ದ ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಇದೇ ಉದ್ದೇಶಕ್ಕೆ ಸುಮಾರು ೮ ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಇನ್ನೂ ಕೂಡ ಈ ಸಂಬಂಧ ಆಡಳಿತಾತ್ಮಕ ಪ್ರಕ್ರಿಯೆಗಳೇ ಶುರುವಾಗಿಲ್ಲ.

ದುಬಾರೆ ಸಾಕಾನೆ ಶಿಬಿರ ಮತ್ತು ಇಲ್ಲಿಯ ಸುತ್ತಮುತ್ತಲಿನ ಪ್ರದೇಶ ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಒಳನಾಡು ಜಲಸಾರಿಗೆ ಇಲಾಖೆ, ಕಾವೇರಿ ನೀರಾವರಿ ನಿಗಮ, ಪುರಾತತ್ವ ಇಲಾಖೆ ಹಾಗೂ ನಂಜರಾಯಪಟ್ಟಣ ಗ್ರಾ.ಪಂ. ಜತೆ ಸಂಬಂಧ ಹೊಂದಿರುವುದರಿಂದ ಈ ಇಲಾಖೆಗಳ ಅಧಿಕಾರಿಗಳ ಮಧ್ಯೆ ಮೊದಲು ಸಮನ್ವಯತೆ ಮೂಡಬೇಕಿದೆ. ಕಾಮಗಾರಿ ಆರಂಭಿಸುವ ಮೊದಲು ಸಮನ್ವಯತೆ ಮೂಡಿಸದಿದ್ದರೆ ಗೊಂದಲ ಉಂಟಾಗಬಹುದು.

ದುಬಾರೆಯಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಪತಂಜಲಿ ಭಾರಧ್ವಾಜ ವಿನ್ಯಾಸವೊಂದನ್ನು ರೂಪಿಸಿದ್ದರು. ಸೇತುವೆಯ ಉದ್ದ ೨೧೦ ಮೀ. ಅಗಲ ೧.೫ ಮೀ. ಇರಲಿದ್ದು, ಎರಡು ಕಂಬಗಳಅಧಾರದಲ್ಲಿ ನಿಲ್ಲಲಿರುವ ಈ ಸೇತುವೆ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರಲಿದೆ. ಹೆಚ್ಚು ಸ್ಥಿರತೆಗಾಗಿ ಸೇತುವೆಯ ಎರಡೂ ಬದಿಗಳಿಗಿಂತ ಮಧ್ಯ ಭಾಗ ಎತ್ತರ ಇರುತ್ತದೆ. ಈ ಸೇತುವೆಗೆ ಸುಮಾರು ೬ ಕೋಟಿ ರೂ. ಅಂದಾಜಿಸಲಾಗಿತ್ತು. ಆದರೆ, ಈ ವಿನ್ಯಾಸಕ್ಕೆ ಆಕ್ಷೇಪಣೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿನ್ಯಾಸವನ್ನು ಕೈಬಿಡಲಾಗಿದೆ ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಇಲ್ಲಿನ ಜನರ ತೂಗು ಸೇತುವೆ ನಿರ್ಮಾಣದ ಹಲವು ವರ್ಷಗಳ ಕನಸು ಕನಸಾಗಿಯೇ ಉಳಿದಿದೆ. ಆದಷ್ಟು ಶೀಘ್ರದಲ್ಲಿ ತೂಗು ಸೇತುವೆ ನಿರ್ಮಿಸಬೇಕೆನ್ನುವುದು ಸ್ಥಳೀಯರ ಒತ್ತಾಯವಾಗಿದೆ.

” ದುಬಾರೆಯಲ್ಲಿ ತೂಗು ಸೇತುವೆನಿರ್ಮಾಣ ಕನಸಿನ ಕೂಸಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಟೆಂಡರ್ ಪ್ರಕ್ರಿಯೆಗಳು ಆರಂಭವಾಗಿಲ್ಲ. ಅನುದಾನ ಬಿಡುಗಡೆಯಾಗಿರುವ ಬಗ್ಗೆ ಲಿಖಿತ ಆದೇಶ ದೊರೆತಿಲ್ಲ. ಈಗ ಮರಳು ಮೂಟೆ ಹಾಕಿ ಅದರ ಮೇಲೆ ಓಡಾಡಬೇಕಾದಪರಿಸ್ಥಿತಿ ಇದೆ. ಪ್ರವಾಸಿಗರು ಬೀಳುವುದು ಸಾಮಾನ್ಯವಾಗಿದೆ. ತೂಗು ಸೇತುವೆ ನಿರ್ಮಾಣವಾದಲ್ಲಿ ಎಲ್ಲರಿಗೂ ಅನುಕೂಲವಾಗಲಿದೆ.”

-ಸಿ.ಎಲ್. ವಿಶ್ವ, ಗ್ರಾ.ಪಂ. ಅಧ್ಯಕ್ಷರು, ನಂಜರಾಯಪಟ್ಟಣ

” ದುಬಾರೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣಕ್ಕೆ ೮ ಕೋಟಿ ರೂ. ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ. ಟೆಂಡರ್ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಇದೇ ವರ್ಷದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.”

-ಡಾ. ಮಂಥರ್‌ಗೌಡ, ಶಾಸಕರು, ಮಡಿಕೇರಿ ಕ್ಷೇತ್ರ 

ಆಂದೋಲನ ಡೆಸ್ಕ್

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

5 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago